ಬಿಜೆಪಿ ಅಭ್ಯರ್ಥಿ ಮುನಿರತ್ನ ಕಣ್ಣೀರಿನ ಕಥೆ ಹೇಳಿದ ಡಿಕೆಶಿ!
ಬೆಂಗಳೂರು, ಅ. 29: ಉಪ ಚುನಾವಣೆ ನಡೆಯುತ್ತಿರುವ ರಾಜರಾಜೇಶ್ವರಿ ನಗರದಲ್ಲಿ ನಿನ್ನೆಯಿಂದ ಕಣ್ಣೀರಿನದ್ದೆ ಮಾತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಾತಿನಿಂದ ನೊಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಕಣ್ಣೀರು ಹಾಕಿದ್ದರು. ಬಳಿಕ ತಮ್ಮ ಸ್ಥಿತಿಯನ್ನು ನೆನೆದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಕೂಡ ಕಣ್ಣೀರು ಹಾಕಿದ್ದರು. ಇದೀಗ ಅವರಿಬ್ಬರ ಕಣ್ಣೀರನ್ನು ಒರೆಗೆ ಹಚ್ಚುವ ಕೆಲಸ ಪ್ರಚಾರದಲ್ಲಿ ಶುರುವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದರು. ನಮ್ಮ ಅಭ್ಯರ್ಥಿ ಕುಸುಮಾ ಅವರು ತಮ್ಮ ಜೀವನ ನೆನೆಸಿಕೊಂಡು, ತಮಗಾದ ನಷ್ಟ, ನೋವುಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ, ಮುನಿರತ್ನ ಅವರು ತಮಗೆ ಇಂತಾ ಸ್ಥಿತಿ ತಂದುಕೊಂಡನಲ್ಲಾ ಅಂತಾ ಕಣ್ಣೀರು ಹಾಕುತ್ತಿದ್ದಾರೆ. ಕಾಂಗ್ರೆಸ್ ನನ್ನ ಉಸಿರು, ನನ್ನ ರಕ್ತ ಅಂತಾ ಹೇಳಿದ್ದ ಮುನಿರತ್ನ ಈಗ ಬಿಜೆಪಿಯಲ್ಲಿ ಮತ ಕೇಳುತ್ತಿದ್ದೇನಲ್ಲಾ ಅಂತಾ ನೆನೆಸಿಕೊಂಡು ಅತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಿದರು.

ಮುನಿರತ್ನ ಉತ್ತಮ ಆ್ಯಕ್ಟರ್
ಮುನಿರತ್ನ ಉತ್ತಮ ಆ್ಯಕ್ಟರ್, ಪ್ರೋಡ್ಯುಸರ್ ಅಲ್ವಾ? ಜನರು ಕೇಳುವ ಪ್ರಶ್ನೆಗೆ ಉತ್ತರ ಕೊಡಲಾಗದೆ ಕಣ್ಣೀರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧ ಭಾಷಣ ಮಾಡಿದ್ದರು, ಈಗ ಅವರ ಪಕ್ಷ ಸೇರಿಕೊಂಡು ಚುನಾವಣೆ ಎದುರಿಸಬೇಕಾಗಿದೆಯಲ್ಲ ಅಂತಾ ಕಣ್ಣೀರು ಹಾಕಿರಬಹುದು.
ಹಿಂದೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತಿದ್ದರು, ಈಗ ಡಿ.ಕೆ. ಶಿವಕುಮಾರ್ ಅವರ ಹಿಂದೆ ಯಾರೂ ಇಲ್ಲ ಅಂತಾ ಹೇಳಿದ್ದಾರೆ. ಒಟ್ಟಾರೆ ಅವರು ಪರಿಸ್ಥಿತಿಗೆ ತಕ್ಕಂತೆ ಅಭಿನಯಿಸುವ ಉತ್ತಮ ನಟ ಎಂದರು.

ನೋಡುತ್ತಿರುವ ಜನ ದಡ್ಡರಲ್ಲ!
ಆದರೆ ಇದನ್ನೆಲ್ಲಾ ನೋಡುತ್ತಿರುವ ಜನ ದಡ್ಡರಲ್ಲ. ನಾನು ಕಣ್ಣೀರು ಹಾಕಿದರೂ ಬೇರೆಯವರು ಹಾಕಿದರೂ ಏನು ಆಗುವುದಿಲ್ಲ. ಈಗ ಕಣ್ಣೀರು ಹಾಕಿ ಪ್ರಯೋಜನ ಇಲ್ಲ.
ಇಂದು ದೇವಾಲಯಕ್ಕೆ ಹೋಗಿ ದೇವರ ಆಶೀರ್ವಾದ ಪಡೆದೆ ಹಾಗೂ ಚರ್ಚ್ಗೆ ಭೇಟಿ ಕೊಟ್ಟು ಪಾದ್ರಿಗಳನ್ನು ಭೇಟಿ ಮಾಡಿದೆ. ನೀವು ಆಶೀರ್ವಾದ ಮಾಡಿದರೂ ನಾನು ತೆಗೆದುಕೊಳ್ಳುತ್ತೇನೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದರು.

ನ. 3ರ ನಂತರ ಧರ್ಮದ ವಿಚಾರ
ಕಪಾಲಿ ಬೆಟ್ಟದ ವಿಚಾರವಾಗಿ ಬಿಜೆಪಿ ನಾಯಕರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು ನೆವಂಬರ್ 3ರಂದು ನಡೆಯುವ ಚುನಾವಣೆ ಆಗಲಿ. ಆಮೇಲೆ ಧರ್ಮದ ವಿಚಾರವಾಗಿ ಮಾತನಾಡೋಣ ಎಂದರು. ಡಿ.ಕೆ. ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಅವರೂ ಕೂಡ ನಿನ್ನೆ (ಅ. 28) ಇದೇ ಮಾತನ್ನು ಹೇಳಿದ್ದರು.

ಈ ಹಿಂದೆ ಆಡಿದ ಮಾತಿಗೆ ಬದ್ಧರಾ?
'ಮುನಿರತ್ನ ಅವರ ವಿರುದ್ಧ ಪ್ರಧಾನಿ ಮೋದಿ ಅವರು, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಡಿದ ಮಾತಿಗೆ ಈಗಲೂ ಬದ್ಧರಾಗಿದ್ದಾರಾ ಇಲ್ಲವಾ? ಎಂಬುದನ್ನು ಕೇಳಿ. ಇನ್ನು ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications