ಪ್ರಚಾರಕ್ಕೆ ಅಡ್ಡಿ; ಅಧೀರಗೊಳ್ಳದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ!
ಬೆಂಗಳೂರು, ಅ. 27: ನಿಮ್ಮ ಕಷ್ಟ-ಸುಖ ಹಂಚಿಕೊಳ್ಳಲು, ನಿಮ್ಮ ಹೋರಾಟದಲ್ಲಿ ಕೈ ಜೋಡಿಸಲು, ಮಹಿಳೆಯರಿಗೆ ಧ್ವನಿಯಾಗಿ ನಿಲ್ಲಲು ಒಂದೇ ಒಂದು ಅವಕಾಶ ಕೇಳಿಕೊಂಡು ಬಂದಿದ್ದೀನಿ. ನಿಮ್ಮ ಮನೆ ಮಗಳಿಗೆ ನೀವು ಹೇಗೆ ಪ್ರೋತ್ಸಾಹ ನೀಡುತ್ತೀರೋ ಅದೇ ರೀತಿ ನನಗೂ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಅವರು ಮನವಿ ಮಾಡಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಕ್ಷೇತ್ರದ ಎಚ್ ಎಂಟಿ ಬಡಾವಣೆ, ಯಶವಂತಪುರ ಬಡಾವಣೆ ಸೇರಿದಂತೆ ವಿವಿಧೆಡೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಅಭ್ಯರ್ಥಿ ಕುಸುಮಾ ಅವರ ಜತೆ ಪ್ರಚಾರ ನಡೆಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ನಸೀರ್ ಅಹ್ಮದ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಅವರು ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ಸಮಾಜಮುಖಿಯಾಗಿ ಕೆಲಸ
ನಾನು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಕ್ಷೇತ್ರದ ಕಡೆಯ ಪ್ರಜೆಗೂ ನ್ಯಾಯ ಒದಗಿಸಿಕೊಡಬೇಕು. ಯುವ ಸಮೂಹಕ್ಕೆ ಉದ್ಯೋಗ ಕಲ್ಪಿಸಿಕೊಡುವ ಸಲುವಾಗಿ ಕೆಲಸ ಮಾಡಲು ನಿಮ್ಮ ಮನೆ ಮಗಳಾಗಿ ನಿಮ್ಮ ಮನೆ ಬಾಗಿಲ ಮುಂದೆ ಬಂದು ಮತಯಾಚಿಸುತ್ತಿದ್ದೇನೆ ಎಂದರು.

ಒಂದೇ ಒಂದು ಅವಕಾಶ ಕೊಡಿ
ನನ್ನ ಆಸೆ ಈಡೇರಲು, ಕ್ಷೇತ್ರದ ಅಭಿವೃದ್ಧಿ ಆಗಲು ನಿಮ್ಮ ಸಹಕಾರ ಬೇಕು. ನಿಮ್ಮ ಸೇವೆ ಮಾಡಲು ದಯವಿಟ್ಟು ನನಗೆ ಒಂದು ಅವಕಾಶ ಮಾಡಿಕೊಡಿ. ನಿಮ್ಮ ಕಷ್ಟ ಸುಖ ಹಂಚಿಕೊಳ್ಳಲು, ನಿಮ್ಮ ಹೋರಾಟದಲ್ಲಿ ಕೈ ಜೋಡಿಸಲು, ಮಹಿಳೆಯರಿಗೆ ಧ್ವನಿಯಾಗಿ ನಿಲ್ಲಲು ಒಂದೇ ಒಂದು ಅವಕಾಶ ಕೇಳಿಕೊಂಡು ಬಂದಿದ್ದೀನಿ ಎಂದು ಕುಸುಮಾ ಅವರು ಮನವಿ ಮಾಡಿಕೊಂಡರು.

ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ
ನಿಮ್ಮ ಮನೆ ಮಗಳಿಗೆ ನೀವು ಹೇಗೆ ಪ್ರೋತ್ಸಾಹ ನೀಡುತ್ತೀರೋ ಅದೇ ರೀತಿ ನನಗೂ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತೇನೆ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಿಮ್ಮ ಸ್ವಾಭಿಮಾನದ ಮತವನ್ನು ನನಗೆ ಕೊಡಿ ಎಂದು ಮನವಿ ಮಾಡಿಕೊಂಡರು.
Recommended Video

ಸಿದ್ದರಾಮಯ್ಯ ಅವರೊಂದಿಗೆ ರೋಡ್ ಶೋ
ಯಶವಂತಪುರದಲ್ಲಿ ಪ್ರಚಾರ ಮಾಡುವಾಗ ತಡೆ ಒಡ್ಡಲಾಯಿತು. ಅದರಿಂದಾಗಿ ಅಧೀರಗೊಳ್ಳದ ಕುಸುಮಾ ಅವರು ಪ್ರಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿದರು. ನವೆಂಬರ್ 3 ರಂದು ಕ್ರಮ ಸಂಖ್ಯೆ 1 ಹಸ್ತದ ಗುರುತಿಗೆ ಮತ ನೀಡುವ ಮೂಲಕ ನನಗೆ ಆಶೀರ್ವದಿಸಿ ಎಂದು ಮನವಿ ಮಾಡಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications