ಮಂಗಳಮುಖಿಯರ ಸಭೆಯಲ್ಲಿ ಕಣ್ಣೀರು ಹಾಕಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ!
ಬೆಂಗಳೂರು, ಅ. 28: ನಾನು ನಿಮ್ಮ ಕಷ್ಟ ಕೇಳಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ನಿಷ್ಠೆಯಿಂದ ಪ್ರಯತ್ನ ಮಾಡುವ ಭರವಸೆ ನೀಡುತ್ತೇನೆ. ನಾನು ಕೇವಲ ಭರವಸೆ ನೀಡುವುದಿಲ್ಲ, ನುಡಿದಂತೆ ನಡೆಯುತ್ತೇನೆ. ನಿಮ್ಮ ಗೌರವವನ್ನು ರಕ್ಷಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಅವರು ಹೇಳಿದರು. ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಅವರ ಜತೆಗೂಡಿ ಕುಸುಮಾ ಅವರು ಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಪ್ರಚಾರ ನಡೆಸಿದರು.
ನಿಮ್ಮ ಕಷ್ಟ ಸುಖ ಹಂಚಿಕೊಳ್ಳಲು ಒಂದು ಅವಕಾಶ ನೀಡಿ ಅಂತಾ ನಿಮ್ಮ ಮುಂದೆ ಬಂದು ನಿಂತಿದ್ದೀನಿ. ನಿಮ್ಮ ನಿರೀಕ್ಷೆಯನ್ನು ನಾನು ಹುಸಿ ಮಾಡುವುದಿಲ್ಲ. ನಿಮ್ಮ ಮನೆ ಮಗಳಿಗೆ ನೀವು ಹೇಗೆ ಪ್ರೋತ್ಸಾಹ ನೀಡುತ್ತೀರೋ ಅದೇ ರೀತಿ ನನಗೂ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿ. ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಯೋಜನೆ, ಕನಸುಗಳನ್ನು ಕಟ್ಟಿಕೊಂಡಿದ್ದೇನೆ. ಇದು ಸಾಕಾರಗೊಳ್ಳಲು ನಿಮ್ಮ ಬೆಂಬಲ ಅಗತ್ಯ. ನವೆಂಬರ್ 3ರಂದು ನಡೆಯಲಿರುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 1 ಹಸ್ತದ ಗುರುತಿಗೆ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕಣ್ಣೀರು ಹಾಕಿದ ಕುಸುಮಾ: ರಾಜರಾಜೇಶ್ವರಿ ನಗರದಲ್ಲಿ ನಡೆದ ಮಂಗಳಮುಖಿಯರ ಸಭೆಯಲ್ಲಿ ಮಾತನಾಡಿದ ಕುಸುಮಾ ಅವರು ಭಾವುಕರಾದರು. ನಾನು ಪ್ರಚಾರಕ್ಕೆ ಹೋದಕಡೆಯೆಲ್ಲಾ ಮಹಿಳೆಯರು ಹರಿಶಿನ ಕುಂಕುಮ ಇಟ್ಟು, ಅವರೇ ಹೂ ಮೂಡಿಸಿ ನನಗೆ ಆಶೀರ್ವದಿಸುತ್ತಿದ್ದಾರೆ. 2015ರಲ್ಲಿ ನನ್ನ ಅಸಹಾಯಕ ಸ್ಥಿತಿಯನ್ನು ಇಡೀ ದೇಶ ನೋಡಿತ್ತು. ಇಂದು ಎಲ್ಲ ಮಹಿಳೆಯರು ನನ್ನ ಶಕ್ತಿಯಾಗಿ ನಿಂತಿದ್ದಾರೆ. ನಿಮ್ಮ ಪ್ರೀತಿ ಕಂಡು ಹೆಮ್ಮೆಯಾಗುತ್ತಿದೆ. ನೀವು ನನ್ನ ಶಕ್ತಿಯಾಗಿರುವಾಗ ನಾನು ಕುಗ್ಗುವುದಿಲ್ಲ. ಸಧೃಢವಾಗಿ ನಿಲ್ಲುತ್ತೇನೆ.

ನಾವು ಮನುಷ್ಯರನ್ನು ಮನುಷ್ಯರನ್ನಾಗಿ ನೋಡೋಣ. ಲಿಂಗದಿಂದ ತಾರತಮ್ಯ ಮಾಡುವುದು ಬೇಡ ಎಲ್ಲರ ಗೌರವದಿಂದ ನೋಡೋಣ. ನಾನು ನಿಮ್ಮ ಗೌರವ ರಕ್ಷಿಸುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಸ್ವೀಕರಿಸಿ, ನಿಮ್ಮ ಹೋರಾಟದಲ್ಲಿ ನಾನು ಭಾಗಿಯಾಗಿರುತ್ತೇನೆ ಎಂದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications