ವೋಟರ್ ಐಡಿ ಪತ್ತೆ: ಗೃಹ ಇಲಾಖೆ, ಪೊಲೀಸರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಫೆಬ್ರವರಿ 7: ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ವೇಳೆ ರಾಜರಾಜೇಶ್ವರಿ ನಗರದ ಕ್ಷೇತ್ರದ ವ್ಯಾಪ್ತಿಯ ಮನೆಯೊಂದರಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆ ಮತ್ತು ಜಾಲಹಳ್ಳಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮುನಿರತ್ನ ನಾಯ್ಡು ಅವರನ್ನು ಬಂಧಿಸುವಂತೆ ಬಿಜೆಪಿ ಮುಖಂಡ ತುಳಸಿ ಮುನಿರಾಜು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
9 ಸಾವಿರಕ್ಕೂ ಅಧಿಕ ವೋಟರ್ ಐಡಿಗಳು ಮನೆಯೊಂದರಲ್ಲಿ ಪತ್ತೆಯಾಗಿದ್ದವು. ಈ ಕಾರಣದಿಂದ ಕ್ಷೇತ್ರದಲ್ಲಿ ಚುನಾವಣೆಯನ್ನೇ ಮುಂದೂಡಲಾಗಿತ್ತು. ಇಷ್ಟೆಲ್ಲ ಆಗಿದ್ದರೂ ಶಾಸಕ ಮುನಿರತ್ನ ವಿರುದ್ಧ ಜಾಲಹಳ್ಳಿ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಮುನಿರಾಜು ಆರೋಪಿಸಿದ್ದಾರೆ.

ತನಿಖಾಧಿಕಾರಿಯ ವಿರುದ್ಧವೂ ವಿಚಾರಣೆ ನಡೆಸುವಂತೆ ಅರ್ಜಿಯಲ್ಲಿ ಅವರು ಮನವಿ ಮಾಡಿದ್ದಾರೆ.
ಮೇ 6ರಂದು ಆರ್.ಆರ್.ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 95 ಲಕ್ಷ ರೂ. ಹಣ ಟ್ರಕ್ನಲ್ಲಿ ಪತ್ತೆಯಾಗಿತ್ತು. ಜಾಲಹಳ್ಳಿ ಸಮೀಪದ ಎಸ್ಎಲ್ವಿ ಅಪಾರ್ಟ್ಮೆಂಟ್ನಲ್ಲಿ 9,746 ವೋಟರ್ ಐಡಿಗಳು ಪತ್ತೆಯಾಗಿದ್ದವು. ಈ ಎರಡೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಿತ್ತು.
ಮುನಿರತ್ನ ನಾಯ್ಡು ಅವರು ಅಕ್ರಮ ಎಸಗಲು ಈ ವೋಟರ್ ಐಡಿಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾರೆ ಎಂದು ಮುನಿರಾಜು ಆರೋಪಿಸಿದ್ದರು.
ಬಳಿಕ ಮೇ 28ರಂದು ಇಲ್ಲಿ ಚುನಾವಣೆ ನಡೆದು ಮೇ 31ರಂದು ಫಲಿತಾಂಶ ಹೊರಬಂದಿತ್ತು. ಅದರಲ್ಲಿ ಮುನಿರತ್ನ ನಾಯ್ಡು ಜಯಭೇರಿ ಭಾರಿಸಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications