ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪ್ರಚಾರ ಶುರು!
ಬೆಂಗಳೂರು, ಅ. 07: ಕಾಂಗ್ರೆಸ್ ಅಭ್ಯರ್ಥಿಯಾಗಿ ದಿ. ಮಾಜಿ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಅವರ ಹೆಸರು ಘೊಷಣೆಯಾಗುತ್ತಿದ್ದಂತೆಯೆ ಕಾಂಗ್ರೆಸ್ ಪ್ರಚಾರ ಶುರು ಮಾಡಿದೆ. ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಯಶವಂತಪುರದ ಶನೇಶ್ವರ ಸ್ವಾಮಿ ದೇಗುಲದ ಬಳಿ ಬುಧವಾರ ರಾತ್ರಿ ನಡೆದ ಚುನಾವಣಾ ಪ್ರಚಾರ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ಅಭ್ಯರ್ಥಿ ಕುಸುಮಾ ಎಚ್, ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ, ಅಭ್ಯರ್ಥಿಯ ತಂದೆ ಹಾಗೂ ಮುಖಂಡರಾದ ಹನುಮಂತರಾಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, 'ಶನಿ ಮಹರಾಜರು ತುಳಿದರೆ ಪಾತಾಳಕ್ಕೆ ಹೋಗ್ತೇವೆ, ಕೈ ಹಿಡಿದರೆ ಆಕಾಶದೆತ್ತರಕ್ಕೆ ಏರುತ್ತೇವೆ' ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಬೆಂಗಳೂರಿನ ಮತ್ತಿಕೆರೆಯಲ್ಲಿ ಪೂರ್ವಭಾವಿ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ.

ನೊಂದು, ಬೆಂದಿದ್ದೀರಿ!
''ಇಂದು ಆರ್.ಆರ್. ನಗರದ ನೊಂದು, ಬೆಂದ ಜನ ಇಲ್ಲಿ ಸೇರಿದ್ದೀರಿ. ನನ್ನದು, ನನ್ನ ಸೋದರಿ ಕುಸುಮಾ ಇಬ್ಬರದ್ದೂ ಮೊದಲನೆ ಸಭೆ. ವಿಘ್ನ ನಿವಾರಕ ವಿನಾಯಕ ನಮಗಿಬ್ಬರಿಗೂ ವಿಜಯ ಕೊಡಲಿ ಅಂತ ಪ್ರಾರ್ಥಿಸುತ್ತೇನೆ."
"ಪಕ್ಷದ ಕಾರ್ಯಕರ್ತರಿಗೆ ಆರ್.ಆರ್. ನಗರದಲ್ಲಿ ಸಾಕಷ್ಟು ತೊಂದರೆ ಆಗ್ತಿದೆ. ಇಂದಿಗೆ ಅವೆಲ್ಲವೂ ಮುಕ್ತಾಯವಾಗಲಿದೆ. ಇನ್ನು ಮುಂದೆ ಇಲ್ಲಿನ ಸಮಸ್ಯೆಗಳನ್ನು ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ."

ಆಫಿಸರ್ ಸಸ್ಪೆಂಡ್
"ನಮ್ಮ ಕಾರ್ಯಕರ್ತರ ಮೇಲೆ ಎಫ್.ಐ.ಆರ್. ಆಗಿರುವ ಮಾಹಿತಿ ಕೊಡಿ. ನಾಳೆ ಸಂಜೆಯೊಳಗೆ ಎಫ್.ಐ.ಆರ್ ಮಾಡಿರುವ ಆಫಿಸರ್ ನ ಸಸ್ಪೆಂಡ್ ಮಾಡಿಸ್ತೇನೆ. ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಆರ್.ಆರ್. ನಗರವೂ ಅಷ್ಟೇ ಮುಖ್ಯ. ಅಧಿಕಾರಿಗಳೇ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ. ಇಲ್ಲದೆ ಹೋದರೆ ಮುಂದೆ ನಿಮ್ಮ ಭವಿಷ್ಯಕ್ಕೆ ಮುಳುವಾಗತ್ತೆ. ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸ್ತೇನೆ." ಎಂದು ಎಚ್ಚರಿಕೆ ನೀಡಿದರು.

ಕುಸುಮಾರನ್ನು ಗೆಲ್ಲಿಸೋಣ!
"ಇದು ರೆಕಾರ್ಡ್ ಆಗಲಿ ಅಂತ ಈ ಮಾತು ಹೇಳ್ತಿದ್ದೇನೆ. ಕಾರ್ಯಕರ್ತರ ವಿರುದ್ಧ ಹಾಕಿರುವ ಕೇಸ್ ಗಳಲ್ಲಿ ವಾದ ಮಾಡಲು ಲಾಯರ್ ನೇಮಿಸ್ತೇನೆ. ಇನ್ನು ಹತ್ತು ದಿನ ಇಲ್ಲೇ ಕೂತಿರ್ತೇನೆ. ನಂಗೆ ಬೇರೆ ಏನೂ ಕೆಲಸ ಇಲ್ಲ. ಕುಸುಮಾ ಅವರು ಸಮಾಜ ಸೇವೆಗೆ ಅಂತ ನಿಂತಿದ್ದಾರೆ. ಅವರನ್ನು ಗೆಲ್ಲಿಸಿಕೊಡಬೇಕು."
"ಈ ಎಲೆಕ್ಷನ್ ನಿಂದ ಸಿಎಂ ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗೆ ಇಳಿಯೋದಿಲ್ಲ. ಈ ಚುನಾವಣೆಯಿಂದ ಮೋದಿ ಅವರಿಗೇನೂ ಸಮಸ್ಯೆಯೂ ಇಲ್ಲ. ಆದರೆ ಈ ಚುನಾವಣೆ ಇಲ್ಲಿನ ಜನರು ಹಾಗೂ ಕಾರ್ಯಕರ್ತರು ಅನುಭವಿಸುತ್ತಿರುವ ಕಿರುಕುಳಕ್ಕೆ ಪರಿಹಾರ ನೀಡಬೇಕಿದೆ."
"ಈ ಹಿಂದೆ ಇಲ್ಲಿ ಮುನಿರತ್ನ ಅವರು ತಾನು ಗೆದ್ದಿದ್ದೇ ಡಿ.ಕೆ. ಶಿವಕುಮಾರ್ ಅವರಿಂದ, ಸುರೇಶಣ್ಣನಿಂದ ಅಂತಿದ್ದರು. ರಾಜೀನಾಮೆ ಕೊಟ್ಟ ಮೇಲೆ ಏನೇನೂ ಹೇಳಿಕೊಂಡು ಬರುತ್ತಿದ್ದಾರೆ? ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಅವರ ದೌರ್ಜನ್ಯಕ್ಕೆ ಅಂತ್ಯ ಹಾಡಬೇಕಿದೆ." ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
Recommended Video

ಸೇವೆಗೆ ಜನರ ಆಶೀರ್ವಾದ ಬೇಕು
ಕುಸುಮಾ ಅವರು ಈ ಸಭೆಯಲ್ಲಿ ತಮ್ಮನ್ನು ಕುಸುಮಾ ಹನುಮಂತರಾಯಪ್ಪ ಅಂತಲೇ ಪರಿಚಯಿಸಿಕೊಂಡಿದ್ದು, ''ತಾನು ನೊಂದ ಮಹಿಳೆ. ಪ್ರೊಫೆಸರ್ ಆಗಿ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದ್ದೆ. ಮಕ್ಕಳು, ಮಹಿಳೆಯರು, ವೃದ್ಧರ ಸಹಾಯ ಮಾಡುತ್ತಿದ್ದೆ. ಇನ್ಮುಂದೆ ಮಹತ್ತರ ಘಟ್ಟ ಶುರುವಾಗ್ತಿದೆ. ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದೇನೆ. ಆರ್.ಆರ್. ನಗರ ಕ್ಷೇತ್ರದ ಜನರ ಸಂಕಷ್ಟ ನನಗೆ ಗೊತ್ತಿದೆ. ಅವರ ಪರವಾಗಿ ಕೆಲಸ ಮಾಡಲು, ಅವರ ಸೇವೆ ಸಲ್ಲಿಸಲು ನಿಮ್ಮೆಲ್ಲರ ಆಶೀರ್ವಾದ ನನಗೆ ಬೇಕು. ನೀವು ಖಂಡಿತಾ ಆಶೀರ್ವಾದ ಮಾಡುತ್ತೀರಿ ಎಂಬ ನಂಬಿಕೆ, ವಿಶ್ವಾಸ ನನಗಿದೆ'' ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications