Get Updates
Get notified of breaking news, exclusive insights, and must-see stories!

ಲಾಲ್‌ಬಾಗ್ ಅಭಿವೃದ್ಧಿಗೆ ₹10 ಕೋಟಿ ಗ್ರಾಂಟ್: ನಾಗರಿಕರಿಂದ ಅಹವಾಲು ಸ್ವೀಕರಿಸಿ ಡಿಕೆಶಿ ಕೊಟ್ರು ಭರವಸೆ

ಬೆಂಗಳೂರು, ಅಕ್ಟೋಬರ್ 11: ಕರ್ನಾಟಕದ ಪ್ರಮುಖ ಉದ್ಯಾನವನ, ಸಸ್ಯಕಾಶಿ ಲಾಲ್ ಬಾಗ್ ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) 10 ಕೋಟಿ ರೂ. ಅನುದಾನ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಮತ್ತಷ್ಟು ಸೌಲಭ್ಯಗಳನ್ನು ಹೊಂದಲಿದೆ.

ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. "ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು ಎಂದರು.

Rs 10 Crore Grant for Lalbagh Development DK Shivakumar says After Walk with Citizens

ಲಾಲ್ ಬಾಗ್ ಮಾದರಿಯಲ್ಲಿ ನಗರದಲ್ಲಿ ಟ್ರೀಪಾರ್ಕ್

ಬೆಂಗಳೂರಿನಲ್ಲಿ ಅವಕಾಶ ಇರುವೆಡೆ ಲಾಲ್ ಬಾಗ್ ಮಾದರಿಯಲ್ಲಿ ಟ್ರೀಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. ಅದಕ್ಕೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು. ಇಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದೇವೆ. ಇನ್ನು ಮುಂದೆ ಇಲ್ಲಿನ ಶೌಚಾಲಯಗಳ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುವುದು. ಬೆಂಗಳೂರಿನ ಕಸ ವಿಲೇವಾರಿ, ವಾಹನ ನಿಲುಗಡೆ, ಸೇರಿದಂತೆ ಅನೇಕ ವಿಚಾರವಾಗಿ ಸಲಹೆ, ಅಭಿಪ್ರಾಯಗಳು ಬಂದಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಟನಲ್ ರಸ್ತೆ: ಲಾಲ್ ಬಾಗ್ ಭೂಮಿ ಬೇಕಿಲ್ಲ

ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಟನಲ್ ರಸ್ತೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಆಸ್ತಿ ಉಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಲಾಲ್ ಬಾಗ್‌ನ ಆರು ಎಕರೆ ಭೂಮಿ ವಶಪಡಿಸಿಕೊಳ್ಳುವ ಅಗತ್ಯವಿಲ್ಲ. ಅರ್ಧ ಎಕರೆ ಪ್ರದೇಶದಲ್ಲಿ ಅಶೋಕ ಪಿಲ್ಲರ್ ಕಡೆ ಟನಲ್ ರಸ್ತೆಗೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗುವುದು. ಪಾರ್ಕಿಂಗ್ ಗಾಗಿ ಇರುವ ಜಾಗದಲ್ಲಿ ಸುಮಾರು ಒಂದು ಎಕರೆ ಜಾಗವನ್ನು ಸ್ಟೋರೇಜ್ ಗೆ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ ಲಾಲ್ ಬಾಗ್ ಗೆ ಕೊಡುತ್ತೇವೆ. ಸಣ್ಣದಾಗಿರುವ ಗಿಡಗಳನ್ನು ತೆರವುಗೊಳಿಸಿ, ಮತ್ತೆ ಗಿಡ ನೆಡುತ್ತೇವೆ. ಉಳಿದಂತೆ ಲಾಲ್ ಬಾಗ್ ಉದ್ಯಾನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಈ ಯೋಜನೆ ಆರಂಭ ಯಾವಾಗ ಎಂದು ಕೇಳಿದಾಗ, "ನಾವು ಯೋಜನೆಯ ಟೆಂಡರ್ ಕರೆಯಲಾಗಿದೆ. ಬಿಡ್ ನಲ್ಲಿ ಯಾರು ಭಾಗವಹಿಸುತ್ತಾರೆ ಎಂದು ನೋಡಿ, ನಂತರ ಅತ್ಯುತ್ತಮ ಬಿಡ್ ಮಾಡಿದವರಿಗೆ ನೀಡಲಾಗುವುದು. ಮುಂದಿನ ದಿನಗಳಲ್ಲೂ ಉದ್ಯಾನಗಳಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಮುಂದುವರಿಸುತ್ತೀರಾ ಎಂದು ಕೇಳಿದಾಗ, ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ, ಸಲಹೆ, ಅಹವಾಲು ಆಲಿಸಲಾಗುವುದು ಎಂದರು.

ನಾಗರಿಕರಿಂದ ಅಹವಾಲು ಸ್ವೀಕಾರ

ಬೆಂಗಳೂರಿನ ನಾಗರಿಕರ ಬಳಿಗೆ ಹೋಗಿ, ಅವರ ಅಭಿಪ್ರಾಯ, ಸಲಹೆ, ಅಹವಾಲುಗಳನ್ನು ಸ್ವೀಕರಿಸಲು ಹಮ್ಮಿಕೊಂಡಿರುವ ಬೆಂಗಳೂರು ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಶನಿವಾರ ಮುಂಜಾನೆ ಲಾಲ್ ಬಾಗ್ ಉದ್ಯಾನದಲ್ಲಿ ನಡಿಗೆ ಜೊತೆಗೆ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.

ಜನರು ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ನಿಮ್ಮ ಬಳಿ ಚರ್ಚಿಸಿದ್ದಾರೆ ಎಂದು ಕೇಳಿದಾಗ, "ಈ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ಬ್ಲಾಕ್ ಸ್ಪಾಟ್ ಇದೆಯೋ ಅಲ್ಲಿ ಕ್ಯಾಮೆರಾ ಅಳವಡಿಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು.

30x50 ನಿವೇಶನದಲ್ಲಿ ಮನೆ ಕಟ್ಟುತ್ತಿದ್ದು ಓಸಿ ಮತ್ತು ಸಿಸಿ ಸಮಸ್ಯೆ ಇದೆ ಎಂದರು, ಮತ್ತೊಬ್ಬರು 40x60 ನಿವೇಶನದಲ್ಲಿ ಮನೆ ಕಟ್ಟುತ್ತಿದ್ದೇವೆ ಎಂದು ಓಸಿ ಸಿಸಿ ವಿನಾಯಿತಿ ನೀಡಿ ಎಂದು ಮತ್ತೊಬ್ಬ ನಾಗರಿಕರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಅವರು, "ನಿನ್ನೆಯಷ್ಟೇ 30x40 ನಿವೇಶನಕ್ಕೆ ವಿನಾಯಿತಿ ನೀಡಿದ್ದೇವೆ. ಉಳಿದಂತೆ ಎರಡನೇ ಹಂತದಲ್ಲಿ ಇತರೆ ಕಟ್ಟಡಗಳ ಬಗ್ಗೆ ತೀರ್ಮಾನ ಮಾಡುತ್ತೇವೆ' ಎಂದು ಭರವಸೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+