ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಶಂಕಿತರ ತಲೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಹುಮಾನ ಘೋಷಿಸಿದೆ. ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ₹20 ಲಕ್ಷ ಬಹುಮಾನ ಸಿಗಲಿದೆ.
ಗ್ರಾಹಕನ ಸೋಗಿನಲ್ಲಿ ಬಂದು ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಇಟ್ಟಿದ್ದ ಆರೋಪಿ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಪ್ರಮುಖ ಸಂಚುಕೋರನಾಗಿರುವ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ ಬಹುಮಾನ ಘೋಷಿಸಿದೆ. ಈ ಇಬ್ಬರು ಆರೋಪಿಗಳು ಈಗಾಗಲೇ 2020ರ ಭಯೋತ್ಪಾದನೆ ಪ್ರಕರಣದಲ್ಲಿ ಬೇಕಾದವರಾಗಿದ್ದಾರೆ.

ಇಬ್ಬರೂ ಶಂಕಿತರ ಬಗ್ಗೆ ಮಾಹಿತಿ ಹೊಂದಿರುವ ಯಾರೇ ಆದರೂ, [email protected] ವಿಳಾಸಕ್ಕೆ ಇಮೇಲ್ ಅಥವಾ ಕರೆ ಮಾಡುವ ಮೂಲಕ ಏಜೆನ್ಸಿಯನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಹೇಳಿದೆ. ಈ ಆರೋಪಿಗಳ ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಡುವುದಾಗಿ ಎನ್ಐಎ ಹೇಳಿದೆ.
Request for Information, Identity of the Informer will be kept Secret. pic.twitter.com/JkMUWay23m
— NIA India (@NIA_India) March 29, 2024
ಎಕ್ಸ್ನಲ್ಲಿ ಎನ್ಐಎ ಪೋಸ್ಟ್
ಆರೋಪಿಯು ತನ್ನ ಗುರುತನ್ನು ಮರೆಮಾಚಲು ಶಜೀಬ್ ಮೊಹಮ್ಮದ್ ಜುನೆದ್ ಸೈಯದ್ ಎಂಬ ಹೆಸರು ಬಳಕೆ ಮಾಡುತ್ತಿದ್ದ ಎಂದು ಎನ್ಐಎ ಹೇಳಿದೆ. ಅಲ್ಲದೆ ತಾನು ಹಿಂದೂ ಎಂದು ಬಿಂಬಿಸಿಕೊಂಡಿದ್ದು, ಅದಕ್ಕೆ ತಕ್ಕಂತೆ ದಾಖಲೆಗಳನ್ನು ಹೊಂದಿದ್ದ. ವಿಘ್ನೇಶ್ ಎನ್ನುವ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಕೂಡ ಬಳಸುತ್ತಿದ್ದರು ಎಂದು ಸಂಸ್ಥೆ ಹೇಳಿದೆ.
ಎನ್ಐಎ ತಂಡವು ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ, ಮಾರ್ಚ್ 28 ರಂದು ಪ್ರಕರಣದ ಸಂಚುಕೋರರಲ್ಲಿ ಒಬ್ಬರಾದ ಮುಝಮ್ಮಿಲ್ ಶರೀಫ್ ಎನ್ನುವಾತನನ್ನು ಬಂಧಿಸಿದೆ.
Request for Information, Identity of the Informer will be kept Secret. pic.twitter.com/PBXPRH3DtB
— NIA India (@NIA_India) March 29, 2024
ಮಾರ್ಚ್ 17ರಂದು ಶರೀಫ್ ಸೇರಿದಂತೆ ಮೂವರು ಶಂಕಿತರ ಮನೆ ಮತ್ತು ಹಲವರ ವ್ಯಕ್ತಿಗಳ ಮನೆ ಮತ್ತು ಅಂಗಡಿಗಳ ಮೇಲೆ ದಾಳಿ ಮಾಡಲಾಗಿತ್ತು. ದಾಳಿಯಲ್ಲಿ ವಿವಿಧ ಡಿಜಿಟಲ್ ವಸ್ತುಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗೆ ಶರೀಫ್ ಬೆಂಬಲ ನೀಡಿದ್ದಾನೆ ಎಂದು ಎನ್ಐಎ ಹೇಳಿದೆ.
ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿತ್ತು. ಘಟನೆಯನ್ನು ಕೆಫೆಯಲ್ಲಿದ್ದ ಹತ್ತು ಜನರು ಗಾಯಗೊಂಡಿದ್ದರು. ಟೈಮರ್ ಬಳಸಿ ಐಇಡಿ ಬಾಂಬ್ ಅನ್ನು ಸ್ಪೋಟಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications