Get Updates
Get notified of breaking news, exclusive insights, and must-see stories!

ಬೆಂಗಳೂರು ಕಬ್ಬನ್‌ಪಾರ್ಕ್: 34ಕೋಟಿ ವೆಚ್ಚದ ಅಭಿವೃದ್ಧಿ ಕೆಲಸ ಬಹುತೇಕ ಪೂರ್ಣ

ಬೆಂಗಳೂರು ಸೆಪ್ಟಂಬರ್ 30: ಉದ್ಯಾನ ನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ಮುಂದಿನ ನವೆಂಬರ್ ತಿಂಗಳಲ್ಲಿ ಸಾರ್ವಜನಿಕರಿಗೆ ಹೊಸ ಅನುಭವ ನೀಡಲು ತಯಾರಾಗಿದೆ.

ಕಬ್ಬನ್ ಉದ್ಯಾನದ ಸುಮಾರು 100ಎಕರೆ ವಿಸ್ತೀರ್ಣವನ್ನು ಅಭಿವೃದ್ಧಿಪಡಿಸಲು ಈ ಹಿಂದೆಯೆ ಯೋಜಿಸಲಾಗಿತ್ತು. ಅದಕ್ಕಾಗಿ ಒಟ್ಟು ಸುಮಾರು 34 ಕೋಟಿ ರು ವ್ಯಯಿಸಿ ಅನೇಕ ಕಾಮಗಾರಿ ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲ ಕಾಮಗಾರಿ ಯೋಜನೆಗಳು ಅಂತಿಮ ಹಂತಕ್ಕೆ ಬಂದಿದ್ದು, ನವೆಂಬರ್‌ನಲ್ಲಿ ಹೊಸ ರೂಪದಲ್ಲಿ ಉದ್ಯಾನವು ಎಲ್ಲರನ್ನು ಸೆಳೆಯಲಿದೆ.

ಉದ್ಯಾನದ ಹಸಿರನ್ನು ಹೆಚ್ಚಿಸಲು, ನಿತ್ಯ ವಾಯುವಿಹಾರ ಇನ್ನಿತರ ಕಾರಣಗಳಿಗೆ ಉದ್ಯಾನಕ್ಕೆ ಬರುವ ಜನರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ನೂರು ಎಕರೆ ಪ್ರದೇಶದ ಬಳಕೆ ಮಾಡಿಕೊಳ್ಳಲಾಗಿದೆ. ಉದ್ಯಾನ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ನಗರದಲ್ಲಿರುವ ಅತ್ಯಂತ ಹಳೆಯ ಸುಮಾರು 9,000 ಕ್ಕೂ ಅಧಿಕ ಮರಗಳನ್ನು ಮ್ಯಾಪಿಂಗ್ ಮತ್ತು ಜಿಯೋ ಟ್ಯಾಗ್ ಮೂಲಕ ಗುರುತಿಸುವ ಅಭಿಯಾನ ಕೈಗೊಂಡಿದ್ದಾರೆ.

Bengaluru: Rs 34 crore worth development work is almost complete at Cubbon Park

ಈಗಾಗಲೇ ಕಬ್ಬನ್ ಉದ್ಯಾನದ ಹಸಿರನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಾಯೋನ್ಮುಖರಾಗಿರುವ ಸಿಬ್ಬಂದಿ 3,000 ಸಸಿಗಳನ್ನು ನೆಡುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್ ಪಾರ್ಕ್) ಎಚ್.ಟಿ.ಬಾಲಕೃಷ್ಣ ಅವರು ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ ಅಂತ್ಯಕ್ಕೆ ಬಾಕಿ ಕೆಲಸ ಪೂರ್ಣ

ಈ ಎಲ್ಲ ಅಭಿವೃದ್ಧಿ ಕೆಲಸಗಳು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಉದ್ಯಾನದಲ್ಲಿ ಹೊಸ ಜಾಗಿಂಗ್ ಟ್ರ್ಯಾಕ್, ನವೀಕರಿಸಿದ ಫುಟ್‌ಪಾತ್‌ಗಳು ಹಾಗೂ ನೀರು ಕಾರಂಜಿಗಳು, ಉತ್ತಮ ಒಳರಸ್ತೆಗಳು ಮತ್ತು ಲ್ಯಾಂಡ್‌ಸ್ಕೇಪಿಂಗ್ ಕಾರ್ಯ ಪ್ರಗತಿಯಲ್ಲಿದೆ. ಇವೆಲ್ಲವು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ. ನವೆಂಬರ್‌ಗೆ ಸಾರ್ವಜನಿಕರಗೆ ಮುಕ್ತವಾಗಬಹದು. ಒಟ್ಟು ಯೋಜನೆಯನ್ನು ಎರಡು ಹಂತದಲ್ಲಿ ಆರಂಭಿಸಲಾಗಿತ್ತು ಎಂದರು.

Bengaluru: Rs 34 crore worth development work is almost complete at Cubbon Park

ಎರಡು ಹಂತಕ್ಕೂ ತಲಾ 17ಕೋಟಿ ರೂ. ವ್ಯಯಿಸಲಾಗಿದೆ. ಮೊದಲ (ಎ)ಹಂತ ಕಾಮಗಾರಿಯ ಕೆಲಸಗಳು ಶೇ. 95ರಷ್ಟು ಪೂರ್ಣಗೊಂಡಿವೆ. ಇನ್ನು ಎರಡನೇ (ಬಿ) ಹಂತ ಕಾಮಗಾರಿಗಳಲ್ಲಿ ಕೆಲವೆಡೆ ಕೆಲಸ ಬಾಕಿ ಇದೆ. ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ಈಗಾಗಲೇ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಕರ್ನಾಟಕ ಹಾಗೂ ಬೆಂಗಳೂರು ಭಾಗದಲ್ಲಿ ಮುಂಗಾರು ಮಳೆ ಚುರುಕಾಗಿದ್ದ ಕಾರಣದಿಂದ ಕಾಮಗಾರಿ ಪೂರ್ಣಗೊಳಿಸುವುದು ತಡವಾಯಿತು.

ವಿರೋಧ: ಡಿಪಿಆರ್‌ ಬದಲು

ಉದ್ದೇಶಿತ ಉದ್ಯಾನದ ವಿಶಾಲ ಪ್ರದೇಶದಲ್ಲಿ ಕಮಲದ ಕೊಳ, ಕರಗದ ಕುಂಟೆ ಕೊಳ ಮತ್ತು ಬೋಟಿಂಗ್ ಪಾಯಿಂಟ್, ಉದ್ಯಾನದ ಸುತ್ತಲಿನ ಗ್ರಿಲ್ ಕಾಮಗಾರಿ, ಬೆಂಕಿಗೆ ತುತ್ತಾಗುವ ಒಣಗಿದ ಬಿದಿರು ಗುಂಪು ತೆಗೆದು ಹೊಸ ಬಿದಿರು ನೆಡುವ ಕೆಲಸಗಳು ಪೂರ್ಣಗೊಂಡಿವೆ. ಎರಡು ವರ್ಷಗಳ ಹಿಂದೆಯೇ ಕಾಮಗಾರಿ ಆರಂಭವಾಗಿದ್ದರೂ ಸಹ ಉದ್ಯಾನಕ್ಕೆ ಆಗಮಿಸುವ ವಾಕರ್ಸ್ ಅಸೋಸಿಯೇಷನ್ ​​ಸೇರಿದಂತೆ ಐದು ಗುಂಪುಗಳು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್‌) ಅನ್ನು ಆರಂಭಿಕ ಹಂತದಲ್ಲಿ ಬದಲಿಸಬೇಕಾದ ಅನಿವಾರ್ಯತೆ ಎದುರಾಯಿತು ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+