ಅಧಿಕಾರಿಗಳಿಂದಲೇ ಬಿಬಿಎಂಪಿಗೆ 49 ಕೋಟಿ ನಾಮ!
ಬೆಂಗಳೂರು, ಫೆ.5 : ಬಿಬಿಎಂಪಿಯ ಹಗರಣವೊಂದು ಬಯಲಾಗಿದೆ. 39 ಲಕ್ಷ ರೂ. ಹಣ ಬಿಡುಗಡೆಗೆಯ ಟಿಪ್ಪಣಿಯನ್ನು ದುರ್ಬಳಕೆ ಮಾಡಿಕೊಂಡು 49 ಕೋಟಿ ರೂ. ಬಿಡುಗಡೆ ಮಾಡಿದ್ದ ಪಾಲಿಕೆ ಲೆಕ್ಕಪತ್ರ ವಿಭಾಗದ ಅಧಿಕಾರಿಯನ್ನು ಬಿಎಂಟಿಎಫ್ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.
ಪಾಲಿಕೆ ಲೆಕ್ಕಪತ್ರ ವಿಭಾಗದ ಕಚೇರಿ ಸಹಾಯಕ ಸಂಜೀವಮೂರ್ತಿ, ಮುಖ್ಯ ಹಣಕಾಸು ಅಧಿಕಾರಿ ವೀರಗೌಡ ಪಾಟೀಲ್ ಹಾಗೂ ಲೆಕ್ಕಪತ್ರ ಅಧಿಕಾರಿ ರಾಜಶೇಖರ್ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸಂಜೀವಮೂರ್ತಿಯನ್ನು ಬಿಎಂಟಿಎಫ್ ಪೊಲೀಸರು ಬಂಧಿಸಿದ್ದಾರೆ. [ಮುನಿರತ್ನ ಕಟ್ಟಡದಲ್ಲಿ ಬಿಬಿಎಂಪಿ ಕಡತ]

147 ಕಾಮಗಾರಿಗಳಿಗೆ 49 ಕೋಟಿ ಹಣ ಬಿಡುಗಡೆಯಾಗಿದೆ. ಇದರಲ್ಲಿ ಅವ್ಯವಹಾರವಾಗಿದೆ ಎಂದು ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಗೆ ಮೇಯರ್ ಹಾಗೂ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ನಂತರ ಟಿಪ್ಪಣಿಯನ್ನು ದುರ್ಬಳಕೆ ಮಾಡಿಕೊಂಡು 49 ಕೋಟಿ ರೂ. ಪಡೆದಿರುವ ಅಂಶ ಬಯಲಾಗಿತ್ತು. [ಜಾಹೀರಾತು ಫಲಕಗಳ ವಿರುದ್ಧ ಬಿಬಿಎಂಪಿ ಸಮರ]
ಏನಿದು ಹಗರಣ : ಬಿಬಿಎಂಪಿ ಆಯುಕ್ತರು 110 ಹಳ್ಳಿಗಳಲ್ಲಿ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ 39 ಲಕ್ಷ ರೂ. ಬಿಲ್ ಪಾವತಿಸುವಂತೆ ಆದೇಶ ನೀಡಿದ್ದರು. ಈ ಟಿಪ್ಪಣಿ ಹಾಳೆಯನ್ನು ತೆಗೆದು 147 ಕಾಮಗಾರಿಗಳ ಕಡತಕ್ಕೆ ಸೇರಿಸಿ 49 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಎಲ್ಲಾ ಕಾಮಗಾರಿ ಕಡತವನ್ನು ಪರಿಶೀಲನೆ ನಡೆಸಿದಾಗ ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳ ಟಿಪ್ಪಣಿ, ಶಿಫಾರಸುಗಳಿಲ್ಲದೇ ಹಣ ಬಿಡುಗಡೆ ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಎಂಸಿ ಕಾಯ್ದೆ ಉಲ್ಲಂಘನೆ ಆರೋಪದಡಿ ಒಬ್ಬರನ್ನು ಬಂಧಿಸಲಾಗಿದೆ.
ಮಂಗಳವಾರ ಸಂಜೀವಮೂರ್ತಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ವೀರಗೌಡ ಪಾಟೀಲ್ ಹಾಗೂ ರಾಜಶೇಖರ್ ತಲೆಮರೆಸಿಕೊಂಡಿದ್ದು ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಬಿಎಂಟಿಎಫ್ ಪೊಲೀಸರು ಹೇಳಿದ್ದಾರೆ. ಗುತ್ತಿಗೆದಾರರ ಕೈವಾಡವೂ ಅಕ್ರಮದಲ್ಲಿ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬಿಎಂಟಿಎಫ್ ಪೊಲೀಸರ ತನಿಖೆ ಬಳಿಕ ಪಾಲಿಕೆ ವತಿಯಿಂದ ಇಲಾಖೆ ವಿಚಾರಣೆ ನಡೆಸಲಾಗುತ್ತದೆ. ತನಿಖೆ ಮುಗಿಯುವವರೆಗೆ ಅಧಿಕಾರಿಗಳನ್ನು ಅಮಾನತ್ತಿನಲ್ಲಿ ಇಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications