ಅಧಿಕಾರಿಗಳಿಂದಲೇ ಬಿಬಿಎಂಪಿಗೆ 49 ಕೋಟಿ ನಾಮ!
ಬೆಂಗಳೂರು, ಫೆ.5 : ಬಿಬಿಎಂಪಿಯ ಹಗರಣವೊಂದು ಬಯಲಾಗಿದೆ. 39 ಲಕ್ಷ ರೂ. ಹಣ ಬಿಡುಗಡೆಗೆಯ ಟಿಪ್ಪಣಿಯನ್ನು ದುರ್ಬಳಕೆ ಮಾಡಿಕೊಂಡು 49 ಕೋಟಿ ರೂ. ಬಿಡುಗಡೆ ಮಾಡಿದ್ದ ಪಾಲಿಕೆ ಲೆಕ್ಕಪತ್ರ ವಿಭಾಗದ ಅಧಿಕಾರಿಯನ್ನು ಬಿಎಂಟಿಎಫ್ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.
ಪಾಲಿಕೆ ಲೆಕ್ಕಪತ್ರ ವಿಭಾಗದ ಕಚೇರಿ ಸಹಾಯಕ ಸಂಜೀವಮೂರ್ತಿ, ಮುಖ್ಯ ಹಣಕಾಸು ಅಧಿಕಾರಿ ವೀರಗೌಡ ಪಾಟೀಲ್ ಹಾಗೂ ಲೆಕ್ಕಪತ್ರ ಅಧಿಕಾರಿ ರಾಜಶೇಖರ್ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸಂಜೀವಮೂರ್ತಿಯನ್ನು ಬಿಎಂಟಿಎಫ್ ಪೊಲೀಸರು ಬಂಧಿಸಿದ್ದಾರೆ. [ಮುನಿರತ್ನ ಕಟ್ಟಡದಲ್ಲಿ ಬಿಬಿಎಂಪಿ ಕಡತ]

147 ಕಾಮಗಾರಿಗಳಿಗೆ 49 ಕೋಟಿ ಹಣ ಬಿಡುಗಡೆಯಾಗಿದೆ. ಇದರಲ್ಲಿ ಅವ್ಯವಹಾರವಾಗಿದೆ ಎಂದು ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಗೆ ಮೇಯರ್ ಹಾಗೂ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ನಂತರ ಟಿಪ್ಪಣಿಯನ್ನು ದುರ್ಬಳಕೆ ಮಾಡಿಕೊಂಡು 49 ಕೋಟಿ ರೂ. ಪಡೆದಿರುವ ಅಂಶ ಬಯಲಾಗಿತ್ತು. [ಜಾಹೀರಾತು ಫಲಕಗಳ ವಿರುದ್ಧ ಬಿಬಿಎಂಪಿ ಸಮರ]
ಏನಿದು ಹಗರಣ : ಬಿಬಿಎಂಪಿ ಆಯುಕ್ತರು 110 ಹಳ್ಳಿಗಳಲ್ಲಿ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ 39 ಲಕ್ಷ ರೂ. ಬಿಲ್ ಪಾವತಿಸುವಂತೆ ಆದೇಶ ನೀಡಿದ್ದರು. ಈ ಟಿಪ್ಪಣಿ ಹಾಳೆಯನ್ನು ತೆಗೆದು 147 ಕಾಮಗಾರಿಗಳ ಕಡತಕ್ಕೆ ಸೇರಿಸಿ 49 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಎಲ್ಲಾ ಕಾಮಗಾರಿ ಕಡತವನ್ನು ಪರಿಶೀಲನೆ ನಡೆಸಿದಾಗ ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳ ಟಿಪ್ಪಣಿ, ಶಿಫಾರಸುಗಳಿಲ್ಲದೇ ಹಣ ಬಿಡುಗಡೆ ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಎಂಸಿ ಕಾಯ್ದೆ ಉಲ್ಲಂಘನೆ ಆರೋಪದಡಿ ಒಬ್ಬರನ್ನು ಬಂಧಿಸಲಾಗಿದೆ.
ಮಂಗಳವಾರ ಸಂಜೀವಮೂರ್ತಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ವೀರಗೌಡ ಪಾಟೀಲ್ ಹಾಗೂ ರಾಜಶೇಖರ್ ತಲೆಮರೆಸಿಕೊಂಡಿದ್ದು ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಬಿಎಂಟಿಎಫ್ ಪೊಲೀಸರು ಹೇಳಿದ್ದಾರೆ. ಗುತ್ತಿಗೆದಾರರ ಕೈವಾಡವೂ ಅಕ್ರಮದಲ್ಲಿ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬಿಎಂಟಿಎಫ್ ಪೊಲೀಸರ ತನಿಖೆ ಬಳಿಕ ಪಾಲಿಕೆ ವತಿಯಿಂದ ಇಲಾಖೆ ವಿಚಾರಣೆ ನಡೆಸಲಾಗುತ್ತದೆ. ತನಿಖೆ ಮುಗಿಯುವವರೆಗೆ ಅಧಿಕಾರಿಗಳನ್ನು ಅಮಾನತ್ತಿನಲ್ಲಿ ಇಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಹೇಳಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications