ಕೊವಿಡ್ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು, ಜೂನ್ 30: ಕೊರೊನಾ ವೈರಸ್ ಲಾಕ್ಡೌನ್ನಿಂದ ಕಾರ್ಮಿಕ ವರ್ಗ ಸಂಕಷ್ಟಕ್ಕೆ ಸಿಲುಕಿತ್ತು. ಸುಮಾರು ಎರಡೂವರೆ ತಿಂಗಳು ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದರಿಂದ ಶ್ರಮಿಕ ವರ್ಗ ಆದಾಯವಿಲ್ಲದೇ ಕಷ್ಟ ಅನುಭವಿಸಿದರು.
Recommended Video
Modi's to address the nation today at 4 P.M | Oneindia Kannada
ಈ ಹಿನ್ನೆಲೆ ರಾಜ್ಯ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಣೆಯಾಗಿತ್ತು. ಆಟೋ, ಟ್ಯಾಕ್ಸಿ ಚಾಲಕರು, ರೈತರು, ದಿನಗೂಲಿ ಕಾರ್ಮಿಕರು, ಅಗಸರು, ಕ್ಷೌರಿಕರು ಸೇರಿದಂತೆ ಹಲವು ಕ್ಷೇತ್ರದ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಹಾಯಧನ ಘೋಷಿಸಿತ್ತು.
ಕೊರೊನಾ ಲಾಕ್ಡೌನ್ ಹಿನ್ನೆಲೆ ಅಗಸರಿಗೆ ಮತ್ತು ಕ್ಷೌರಿಕರಿಗೆ ಪರಿಹಾರವಾಗಿ 5 ಸಾವಿರ ರೂಪಾಯಿ ಸರ್ಕಾರ ಘೋಷಿಸಿತ್ತು. ಈ ಸಹಾಯಧನ ಪಡೆಯಲು ಜೂನ್ 30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಿತ್ತು.

ಇದೀಗ, ಕೊವಿಡ್ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗಿದೆ. ಜೂನ್ 30 ರಿಂದ ಜುಲೈ 10 ದಿನಾಂಕ ಮುಂದೂಡಲಾಗಿದೆ. ಹೀಗಾಗಿ, ಅಗಸರಿಗೆ ಮತ್ತು ಕ್ಷೌರಿಕರ ಘಟಕಕ್ಕೆ ಇದು ನೆರವಾಗಲಿದೆ.












Click it and Unblock the Notifications