ಆರ್ ಟಿಐ ಕಾರ್ಯಕರ್ತ ಲಿಂಗರಾಜ್ ಕೊಲೆ: 12 ಮಂದಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು, ಅ. 29: ಭಾರಿ ಸಂಚಲನ ಮೂಡಿಸಿದ್ದ ಪತ್ರಕರ್ತ,ಆರ್ ಟಿಐ ಕಾರ್ಯಕರ್ತ ಲಿಂಗರಾಜ್ ಕೊಲೆ ಪ್ರಕರಣದ ಅಂತಿಮ ಆದೇಶ ಇಂದು ಹೊರಬಂದಿದೆ. ಈ ಪ್ರಕರಣದ ಎಲ್ಲಾ ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
ಮಾಜಿ ಕಾರ್ಪೋರೇಟರ್ ಗೌರಮ್ಮ, ಪತಿ ಗೋವಿಂದ ರಾಜು ಸೇರಿದಂತೆ 12 ಮಂದಿ ಆರೋಪಿಗಳನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಬುಧವಾರ(ಅ.28) ಆದೇಶ ಸಿಸಿಹೆಚ್ 59 ರ ನ್ಯಾ. ಲಕ್ಷ್ಮೀನಾರಾಯಣ ಅವರು ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.
ಒಟ್ಟು 12 ಮಂದಿಗೆ ಜೀವಾವಧಿ ಶಿಕ್ಷೆಯಾಗಿದ್ದು, ತಲಾ 25 ಸಾವಿರ ದಂಡ ವಿಧಿಸಲಾಗಿದೆ. ಚಾಮರಾಜಪೇಟೆಯ ಬಿಎಂಕೆ ಲೇ ಔಟ್ ವಿಠ್ಠಲ್ ನಗರ ನಿವಾಸಿ, ಆರ್ಟಿಐ ಕಾರ್ಯಕರ್ತ ಲಿಂಗರಾಜು ಅವರನ್ನು 2012 ನವೆಂಬರ್ 20 ರಂದು ಮನೆ ಎದುರಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ರಂಗಸ್ವಾಮಿ , ಆರ್ ಶಂಕರ್, ರಾಘವೇಂದ್ರ ಅಲಿಯಾಸ್ ರಘು, ಚಂದ್ರ, ಶಂಕರ್ ಅಲಿಯಾಸ್ ಗುಂಡ, ಉಮಾಶಂಕರ ಅಲಿಯಾಸ್ ಭವಾನಿ, ವೇಲು, ಸಿ ಗೋವಿಂದರಾಜು, ಲೋಗನಾಥ, ಜಹೀರ್, ಸುರೇಶ್ ಅಲಿಯಾಸ್ ಸೂರಿ, ಶ್ರೀಮತಿ ಗೌರಮ್ಮ (ಮಾಜಿ ಕಾರ್ಪೊರೇಟರ್) ಎಲ್ಲರಿಗೂ ಜೀವಾವಧಿ ಶಿಕ್ಷೆಯಾಗಿದೆ.
ನಗರ ಜಂಟಿ ಪೊಲೀಸ್ ಆಯುಕ್ತ ಪ್ರಣವ್ ಮೊಹಾಂತಿ ಹಾಗೂ ಸಿಐಡಿ ಎಸ್.ಪಿ. ಅಬ್ದುಲ್ ಅಹದ್ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಅಜಾದ್ ನಗರ ಕಾರ್ಪೋರೇಟರ್ ಗೌರಮ್ಮ, ಪತಿ ಗೋವಿಂದರಾಜು ಅವರು ಲಿಂಗರಾಜು ಹತ್ಯೆಗೆ ಸುಪಾರಿ ನೀಡಿದ್ದನ್ನು ಬಯಲಿಗೆಳೆದಿದ್ದರು. ರೌಡಿ ಶೀಟರ್ ಗೋರಿಪಾಳ್ಯದ ಚಂದ್ರು ಮತ್ತು ಆತನ ಸಹಚರರು ನ. 20, 2012 ರಂದು ಲಿಂಗರಾಜು ಅವರನ್ನು ಹತ್ಯೆ ಮಾಡಿರುವ ಬಗ್ಗೆ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications