ಲಿಂಗರಾಜು ಹತ್ಯೆ ಪ್ರಕರಣ: ಎಲ್ಲಾ ಆರೋಪಿಗಳು ತಪ್ಪಿತಸ್ಥರೆಂದು ಕೋರ್ಟ್ ತೀರ್ಪು
ಬೆಂಗಳೂರು, ಅ. 28: ಆರ್.ಟಿ.ಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣದ ಅಂತಿಮ ತೀರ್ಪು ಅಕ್ಟೋಬರ್ 28 ರಂದು ಪ್ರಕಟಿಸಲಾಗಿದೆ. ಈ ಪ್ರಕರಣದ ಎಲ್ಲಾ 12 ಆರೋಪಿಗಳು ತಪ್ಪಿತಸ್ಥರು ಎಂದು ಸಿಟಿ ಸಿವಿಎಲ್ 59ನೇ ನ್ಯಾಯಾಲಯವು ತೀರ್ಪು ನೀಡಿದೆ. ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುತ್ತದೆ. ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯಕ್ ಅವರು ಜೀವಾವಧಿ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ಚಾಮರಾಜಪೇಟೆಯ ಬಿಎಂಕೆ ಲೇ ಔಟ್ ವಿಠ್ಠಲ್ ನಗರ ನಿವಾಸಿ, ಆರ್ಟಿಐ ಕಾರ್ಯಕರ್ತ ಲಿಂಗರಾಜು ಅವರನ್ನು 2012 ನವೆಂಬರ್ 20 ರಂದು ಮನೆ ಎದುರಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
ರಂಗಸ್ವಾಮಿ , ಆರ್ ಶಂಕರ್, ರಾಘವೇಂದ್ರ ಅಲಿಯಾಸ್ ರಘು, ಚಂದ್ರ, ಶಂಕರ್ ಅಲಿಯಾಸ್ ಗುಂಡ, ಉಮಾಶಂಕರ ಅಲಿಯಾಸ್ ಭವಾನಿ, ವೇಲು, ಸಿ ಗೋವಿಂದರಾಜು, ಲೋಗನಾಥ, ಜಹೀರ್, ಸುರೇಶ್ ಅಲಿಯಾಸ್ ಸೂರಿ, ಶ್ರೀಮತಿ ಗೌರಮ್ಮ (ಮಾಜಿ ಕಾರ್ಪೊರೇಟರ್) ಎಲ್ಲರಿಗೂ ಶಿಕ್ಷೆವಿಧಿಸಲಾಗಿರುತ್ತದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿ.ಜೆ. ಸೇನ್ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠಕ್ಕೆ, ಸರ್ಕಾರದ ಒಪ್ಪಿಗೆ ಮೇರೆಗೆ ನಗರ ಜಂಟಿ ಪೊಲೀಸ್ ಆಯುಕ್ತ ಪ್ರಣವ್ ಮೊಹಾಂತಿ ಹಾಗೂ ಸಿಐಡಿ ಎಸ್.ಪಿ. ಅಬ್ದುಲ್ ಅಹದ್ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಅದರಂತೆ ಅಜಾದ್ ನಗರ ಕಾರ್ಪೋರೇಟರ್ ಗೌರಮ್ಮ, ಪತಿ ಗೋವಿಂದರಾಜು ಅವರು ಲಿಂಗರಾಜು ಹತ್ಯೆಗೆ ಸುಪಾರಿ ನೀಡಿರುವುದು ಸ್ಪಷ್ಟವಾಗಿತ್ತು. ರೌಡಿ ಶೀಟರ್ ಗೋರಿಪಾಳ್ಯದ ಚಂದ್ರು ಮತ್ತು ಆತನ ಸಹಚರರು ನ. 20, 2012 ರಂದು ಲಿಂಗರಾಜು ಅವರನ್ನು ಹತ್ಯೆ ಮಾಡಿರುವ ಬಗ್ಗೆ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಾದ ಮತ್ತು ಪ್ರತಿ ವಾದ ಆಲಿಸಿರುವ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾ. ಲಕ್ಷ್ಮೀನಾರಾಯಣ ಅವರು ಅಕ್ಟೋಬರ್ 28ಕ್ಕೆ ತೀರ್ಪು ಕಾಯ್ದಿರಿಸಿದ್ದರು.
ಬೆಚ್ಚಿ ಬೀಳಿಸಿದ ಹತ್ಯೆ ಪ್ರಕರಣ: ಪತ್ರಕರ್ತ ಲಿಂಗರಾಜು ಮಾಹಿತಿ ಹಕ್ಕು ಅಡಿ ದಾಖಲೆಗಳನ್ನು ತೆಗೆದು ತನಿಖಾ ಸಂಸ್ಥೆಗಳಿಗೆ ದೂರು ನೀಡುತ್ತಿದ್ದರು. ಗೋವಿಂದರಾಜು ಅವರ ಜೊತೆಗೆ ಸ್ನೇಹದಿಂದ ಇದ್ದರೂ ಅವರ ಭೂ ಅಕ್ರಮ ಕುರಿತು ಲಿಂಗರಾಜು 2010ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಮಾತುಕತೆ ರಾಜಿಗೆ ಗೋವಿಂದರಾಜು ಯತ್ನಿಸಿ ವಿಫಲರಾದಾಗ, ಲಿಂಗರಾಜುಗೆ ಬೆದರಿಕೆ ಹಾಕಿದ್ದರು. ಗೋವಿಂದರಾಜು ಬೆದರಿಕೆ ಹಾಕಿರುವ ಬಗ್ಗೆ ಲಿಂಗರಾಜು ವಕೀಲ ಧ್ರುವಕುಮಾರ್ ಅವರಿಂದ ಪ್ರಮಾಣ ಪತ್ರ ಕೂಡ ಮಾಡಿಸಿದ್ದರು.

ಅಜಾದ್ ನಗರ ಕಾರ್ಪೋರೇಟರ್ ಗೌರಮ್ಮ ಮತ್ತು ಗೋವಿಂದರಾಜು ಅವರ ಅಕ್ರಮ ಸಂಪತ್ತಿನ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಪೋರೇಟರ್ ಗೌರಮ್ಮ ಮತ್ತು ಗೋವಿಂದರಾಜು ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸು ದಾಖಲಿಸಿ ದಾಳಿ ನಡೆಸಿದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದರು. ಇದಾದ ಕೆಲವೇ ದಿನಗಳ ಬಳಿಕ ದೂರುದಾರ ಲಿಂಗರಾಜು ಅವರನ್ನು ವಿಠ್ಠಲ್ ನಗರದ ಅವರ ನಿವಾಸದ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
Recommended Video
ಪ್ರಕರಣದ ಬೆನ್ನಟ್ಟಿದ ಪೊಲೀಸರು ಪ್ರಮುಖ ಸಾಕ್ಷಾಧಾರಗಳ ಆಧಾರದ ಮೇಲೆ ರೌಡಿ ಶೀಟರ್ ಚಂದ್ರು ಮತ್ತು ಆತನ ಸಹಚರರಾದ ವೇಲು, ಶಂಕರ್, ಉಮಾಶಂಕರ್, ರಂಗಸ್ವಾಮಿ, ರಾಘವೇಂದ್ರ, ಶಂಕರ್ ಎಂಬುವರನ್ನು ಬಂಧಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications