ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಬಿಜೆಪಿ ಮುಖಂಡನ ವಿರುದ್ಧ ಆರ್.ಟಿ.ಐ ಕಾರ್ಯಕರ್ತ ದೂರು

By Manjunatha
|
Google Oneindia Kannada News

ಬೆಂಗಳೂರು, ಡಿಸೆಂಬರ್ 08 : ಬಿಜೆಪಿಯ ಪ್ರಭಾವಿ ಮುಖಂಡರೊಬ್ಬರು ತಮಗೆ ಪರೋಕ್ಷವಾಗಿ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಗರದ ಆರ್.ಟಿ.ಐ ಕಾರ್ಯಕರ್ತ ಹನುಮೇಗೌಡ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪುಟ್ಟಸ್ವಾಮಿ ದಾಖಲೆ ಬಿಡುಗಡೆ : ಬಿಎಸ್ವೈಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪುಟ್ಟಸ್ವಾಮಿ ದಾಖಲೆ ಬಿಡುಗಡೆ : ಬಿಎಸ್ವೈ

ಬಿಜೆಪಿ ಮುಖಂಡ ಎಂ.ಎಲ್.ಸಿ ಬಿಜೆ ಪುಟ್ಟಸ್ವಾಮಿ ಅವರು ತಮ್ಮ ಮೇಲೆ ಹಾಕಿರುವ ಕೇಸ್ ಅನ್ನು ವಾಪಾಸ್ ಪಡೆಯುವಂತೆ ಒತ್ತಾಯಿಸಿ ತಮ್ಮ ವಕೀಲರಿಂದ ಬೆದರಿಕೆ ಕರೆ ಮಾಡಿಸಿದ್ದಾರೆ ಎಂದು ಹನುಮೇಗೌಡ ಆರೋಪಿಸಿದ್ದಾರೆ.

RTI activist lodge complaint against state BJP leader and his lawyer

ಭೂ ಕಬಳಿಕೆ ಬಗ್ಗೆ ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ರೂ ಆಗಿರುವ ಪುಟ್ಟಸ್ವಾಮಿ ಅವರ ವಿರುದ್ಧ ಹನುಮೇಗೌಡ ಅವರು ಕೇಸು ದಾಖಲಿಸಿದ್ದರು, ಆ ಕೇಸನ್ನು ವಾಪಸ್ಸು ಪಡೆಯುವಂತೆ ಪುಟ್ಟಸ್ವಾಮಿ ಅವರ ವಕೀಲರು ಹನುಮೇಗೌಡ ಅವರಿಗೆ ಕರೆ ಮಾಡಿ ಕೇಸು ವಾಪಾಸು ಪಡೆಯಬೇಕೆಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಹನುಮೇಗೌಡ ಅವರು ದೂರು ದಾಖಲಿಸಿದ್ದಾರೆ.

English summary
RTI activisit Hanumegowda lodge complaint against a state level BJP leader in Bengaluru. Hanumegowda complainig that BJP leader Puttaswamy's lawyer calls him and threatend him to withdraw his case against Puttaswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X