ಲೋಕಾಯುಕ್ತರ ನೇಮಕಕ್ಕೆ ಮತ್ತೆ ಶುರುವಾಯ್ತು ಪ್ರತಿಭಟನೆ
ದೇಶದಲ್ಲೇ ಪ್ರಬಲ ಲೋಕಾಯುಕ್ತ ಸಂಸ್ಥೆಯಾಗಿದ್ದ ಕರ್ನಾಟಕ ಲೋಕಾಯುಕ ಸಂಸ್ಥೆಗೆ ಮುಖ್ಯಸ್ಥರನ್ನು ನೇಮಕ ಮಾಡಿ ಬರೊಬ್ಬರಿ 11 ತಿಂಗಳು ಕಳೆದರೂ ಇದುವರೆಗೂ ರಾಜ್ಯ ಸರ್ಕಾರ ಲೋಕಾಯುಕ್ತರನ್ನು ನೇಮಕ ಮಾಡಿಲ್ಲ
ಬೆಂಗಳೂರು, ಅಕ್ಟೋಬರ್, 25: ಲೋಕಾಯುಕ್ತರನ್ನೂ ಶೀಘ್ರ ನೇಮಕ ಮಾಡುವಂತೆ ಒತ್ತಾಯಿಸಿ ಆರ್ ಟಿ ಐ ಕಾರ್ಯಕರ್ತರು ಮಂಗಳವಾರ (ಅ.25) ಲೋಕಾಯುಕ್ತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಳಿಗ್ಗೆ ಕಪ್ಪುಪಟ್ಟಿ ಧರಿಸಿ ಭಿತ್ತಿ ಪತ್ರಗಳೊಂದಿಗೆ ಕಚೇರಿ ಮೆಟ್ಟಿಲುಗಳ ಮೇಲೆ ಆರ್ ಟಿ ಐ ಕಾರ್ಯಕರ್ತರು ಧರಣಿ ಆರಂಭಿಸಿದರು. ಪ್ರತಿಭಟನಕಾರರನ್ನು ಪೊಲೀಸ್ ಸಿಬ್ಬಂದಿ ಬಂಧಿಸಿ ಕರೆದೊಯ್ದರು.

ಲೋಕಾಯುಕ್ತ ಸಂಸ್ಥೆಗೆ ಹನ್ನೊಂದು ತಿಂಗಳಿನಿಂದ ನೇಮಕ ಮಾಡದೆ ಇರುವುದರಿಂದ ಸಂಸ್ಥೆ ಮುಚ್ಚುವ ಸ್ಥಿತಿಗೆ ಬಂದಿದೆ. ಸಂಸ್ಥೆಗೆ ಸಲ್ಲಿಕೆಯಾಗುತ್ತಿರುವ ದೂರುಗಳು ಧೂಳು ಹಿಡಿಯುತ್ತಿವೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇಬ್ಬರೂ ಉಪಲೋಕಾಯುಕ್ತರನ್ನು ನೇಮಕ ಮಾಡಲಾಗಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ದೂರುಗಳು ವಿಲೇವಾರಿ ಆಗದೆ ಹಾಗೆಯೇ ಉಳಿದಿವೆ ಎಂದು ಕಾರ್ಯಕರ್ತರು ತಿಳಿಸಿದರು.
ಆರ್ ಟಿ ಐನಲ್ಲಿ ಸಲ್ಲಿಸುವ ಅರ್ಜಿಗೂ ಮಾಹಿತಿ ನೀಡುತ್ತಿಲ್ಲ. ಸರ್ಕಾರ ಕೂಡಲೇ ಲೋಕಾಯುಕ್ತರನ್ನು ನೇಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications