ವಾಯುಮಾಲಿನ್ಯ ನಿಯಂತ್ರಣಕ್ಕೆ ಮಕ್ಕಳಿಂದ ಜಾಗೃತಿ: ಆರ್ ಟಿಒ
ಬೆಂಗಳೂರು ನವೆಂಬರ್ 24: ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಯುಮಾಲಿನ್ಯ ತಡೆಗೆ ಸಾರಿಗೆ ಇಲಾಖೆ ನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಮಕ್ಕಳ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಯತ್ನ ಮಾಡುತ್ತಿದೆ.
ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ವಾಯು ಮಾಲಿನ್ಯ ಮಾಸಚರಣೆ ಆಚರಿಸುತ್ತ ಜನರಲ್ಲಿ ಅರಿವು ಮೂಡಿಸುತ್ತಿರುವ ಇಲಾಖೆ ಇದರ ಅಂಗವಾಗಿ ಬಾಲಭವನದಲ್ಲಿ ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸಿತ್ತು.

ಬೆಂಗಳೂರಿನ ವಿವಿಧ ಸಾರಿಗೆ ಇಲಾಖೆಗಳ ವ್ಯಾಪ್ತಿಯಲ್ಲಿನ 500ಕ್ಕೂ ಅಧಿಕ ಶಾಲಾ ಮಕ್ಕಳಿಗೆ ವಾಯುಮಾಲಿನ್ಯದ ಅರಿವು ಮೂಡಿಸುವ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಕೂಟಗಳನ್ನು ನಡೆಸಿತು.
ಬಾಲಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಜಂಟಿ ಆಯುಕ್ತೆ ಓಂಕಾರೇಶ್ವರಿ ಮತ್ತು ಜ್ಞಾನಭಾರತಿ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ ಹೇಮಂತ್ ಕುಮಾರ್ ಉಪಸ್ಥಿತರಿದ್ದರು.

ವಾಯು ಮಾಲಿನ್ಯ ಮಾಸಚರಣೆಯ ಸ್ಪಂದನ ಕಾರ್ಯಕ್ರಮಗಳ ಮೂಲಕ ಆಟೋ ರಿಕ್ಷಾ, ಕ್ಯಾಬ್, ಬಸ್ಸು ಮತ್ತು ಲಾರಿ ಚಾಲಕರಿಗೆ ಇಂಧನ ಕಲಬೆರಕೆಯ ದುಷ್ಪರಿಣಾಮ ಮತ್ತು ಕ್ರಮಬದ್ಧ ಚಾಲನೆಯ ಕುರಿತು ಅರಿವು ಮೂಡಿಸಲಾಯಿತು.
ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನದಲ್ಲಿ ವಾಯುಮಾಲಿನ್ಯ ತಡೆಗೆ ಎಲೆಕ್ಟ್ರಿಕ್ ಆಟೋ ರಿಕ್ಷಾ ಮತ್ತು ಬೈಕ್ಗಳ ಬಳಕೆಗೆ ಒತ್ತು ನೀಡುವಂತೆ ತಿಳಿಸಲಾಯಿತು.

ಅಭಿಯಾನದ ಅಂಗವಾಗಿ ಸಾಫಲ್ಯ ರಂಗ ತಂಡದಿಂದ ವಾಯು ಮಾಲಿನ್ಯದ ದುಷ್ಪರಿಣಾಮಗಳನ್ನ ಜನರಿಗೆ ತಿಳಿಸಲು ಬೀದಿ ನಾಟಕ ಮಾಡಲಾಯಿತು. ಇನ್ನೂ ಇದರ ಭಾಗವಾಗಿ ಪಾದಯಾತ್ರೆ ನಡೆಸಿ ಮಾನವ ಸರಪಳಿ ನಿರ್ಮಿಸಿ ಜನಸಾಮಾನ್ಯರಲ್ಲಿ ವಾಹನಗಳ ಮಾಲಿನ್ಯ ಪ್ರಮಾಣದ ನಿಯಮಿತ ತಪಾಸಣೆ, ವಾಹನಗಳನ್ನ ಸುಸ್ಥಿಯಲ್ಲಿ ಇಡುವುದರ ಬಗೆಗಿನ ಅಗತ್ಯದ ಕುರಿತು ಅರಿವು ಮೂಡಿಸಲಾಯಿತು.
ವಾಯು ಮಾಲಿನ್ಯ ಮಾಸಚರಣೆ ಅಂಗವಾಗಿ ನಗರದ ವಿವಿಧೆಡೆ ಗಿಡನೆಡುವ ಕಾರ್ಯಕ್ರಮವನ್ನು ಸಹ ಆರ್ ಟಿ ಒ ಕಚೇರಿಗಳು ಆಯೋಜಿಸಿದ್ದವು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications