ರಷ್ಯಾದ ಸ್ಪುಟ್ನಿಕ್ 5 ವಿಶ್ವದ ಮೊದಲ ಲಸಿಕೆಯಲ್ಲ: ಕಿರಣ್ ಮಜುಂದಾರ್ ಶಾ
ಬೆಂಗಳೂರು, ಆಗಸ್ಟ್ 14: ವಿಶ್ವದ ಮೊದಲ ಕೊರೊನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವಾಗಿ ರಷ್ಯಾ ಮಾಡಿದ್ದ ಘೋಷಣೆಯನ್ನು ಬೆಂಗಳೂರಿನ ಬಯೋಕಾನ್ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪ್ರಶ್ನಿಸಿದ್ದಾರೆ.
ರಷ್ಯಾ ಅಭಿವೃದ್ಧಿಪಡಿಸುತ್ತಿರುವ ಕೊರೊನಾ ಲಸಿಕೆಯ ಮೊದಲ ಅಥವಾ ಎರಡನೇ ಹಂತದ ಕ್ಲಿನಿಕಲ್ ಟ್ರಯಲ್ ಮಾಹಿತಿ ವಿಶ್ವಕ್ಕೆ ದೊರೆತಿಲ್ಲ.
ಮೂರನೇ ಹಂತದ ಪ್ರಯೋಗ ನಡೆಸದೇ ಲಸಿಕೆ ಬಿಡುಗಡೆ ಮಾಡುವುದು ರಷ್ಯಾಕ್ಕೆ ಸ್ವೀಕಾರಾರ್ಹವಾಗಿರಬಹುದು. ಹಾಗೆಂದ ಮಾತ್ರಕ್ಕೆ ಅದು ವಿಶ್ವದ ಮೊದಲ ಕೊರೊನಾ ಲಸಿಕೆ ಆಗುವುದಿಲ್ಲ ಏಕೆಂದರೆ , ಹಲವು ಲಸಿಕೆ ಕಾರ್ಯಕ್ರಮಗಳು ರಷ್ಯಾಕ್ಕಿಂತ ಮುಂದಿವೆ ಎಂದು ಜೈವಿಕ ತಂತ್ರಜ್ಞಾನ ಉದ್ಯಮಿ ಆಗಿರುವ ಕಿರಣ್ ಹೇಳಿದ್ದಾರೆ.

ಒಂದು ಮತ್ತು ಎರಡನೇ ಹಂತದ ಬಗ್ಗೆ ಮಾಹಿತಿ ಇಲ್ಲ
ರಷ್ಯಾದಲ್ಲಿ ಸ್ಪುಟ್ನಿಕ್ ವಿ ಲಸಿಕೆಯನ್ನು ಮಾಸ್ಕೋ ಮೂಲದ ಗಮಲೇಯ ನ್ಯಾಷನಲ್ ಸೆಂಟರ್ ಅಭಿವೃದ್ಧಿಪಡಿಸುತ್ತದೆ. ಇಡೀ ವಿಶ್ವವೇ ಲಸಿಕೆಯ ಒಂದು ಮತ್ತು ಎರಡನೇ ಹಂತದ ಡಾಟಾವನ್ನು ನೋಡಿಲ್ಲ ಹಾಗೆಂದಾಗ ಲಸಿಕೆಯನ್ನು ನಂಬಲು ಹೇಗೆ ಸಾಧ್ಯ ಎಂದು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗ ನಡೆಸಲಿ
ರಷ್ಯಾವು ಸ್ಪುಟ್ನಿಕ್ ವಿ ಲಸಿಕೆಯ ಮೂರನೇ ಹಂತದ ಪ್ರಯೋಗವನ್ನು ನಡೆಸಲಿ, ಅದರಲ್ಲಿ ಉತ್ತಮ ಫಲಿತಾಂಶ ಬಂದರೆ ಎಲ್ಲಾ ದೇಶಗಳು ಲಸಿಕೆಯನ್ನು ಒಪ್ಪಿಕೊಳ್ಳುತ್ತವೆ ಎಂದರು. ರಷ್ಯಾದ ಈ ಲಸಿಕೆಗಿಂತ ಅನೇಕ ಲಸಿಕೆಗಳು ಮುಂಚೂಣಿಯಲ್ಲಿವೆ.

ಮೊದಲು ಯಾರ ಮೇಲೆ ಲಸಿಕೆ ಪ್ರಯೋಗ
ಮೊದಲು ವ್ಲಾಡಿಮಿರ್ ಪುಟಿನ್ ಅವರ ಮಗಳ ಮೇಲೆಯೇ ಲಸಿಕೆಯ ಮೊದಲ ಪ್ರಯೋಗ ನಡೆಸಲಾಗುತ್ತದೆ ಎಂದು ಖುದ್ದಾಗಿ ಪುಟಿನ್ ತಿಳಿಸಿದ್ದಾರೆ.

ರಷ್ಯಾದಿಂದ ಎರಡು ಲಸಿಕೆ
ರಷ್ಯಾದಲ್ಲಿ ಸಧ್ಯ ಎರಡು ಕೊವಿಡ್ 19 ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಗಮೇಲಿಯಾ ವ್ಯಾಕ್ಸಿನ್ನ್ನು ಇಂದು ಅಧಿಕೃತವಾಗಿ ನೋಂದಣಿ ಆಗಿದೆ.ಮತ್ತೊಂದು ವೆಕ್ಟರ್ ಸ್ಟೇಟ್ ರಿಸರ್ಚ್ ಸೆಂಟರ್ ಆಫ್ ವೈರಾಲಜಿ ಅಂಡ್ ರಿಜಿಸ್ಟರ್ ಆಗುವ ಗಮೇಲಿಯಾ ವ್ಯಾಕ್ಸಿನ್ ಅನ್ನು ಸೆಪ್ಟೆಂಬರ್ನಲ್ಲಿ ಸಾರ್ವಜನಿಕವಾಗಿ ಲಸಿಕೆ ಹಾಕಲು ಆರಂಭಿಸಲಾಗುತ್ತದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications