ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಕ್ರೇನ್‌ನಲ್ಲಿ ಸಿಲುಕಿದ ಬೆಂಗಳೂರಿನ ರುಚಿತಾ: ಪೋಷಕರ ಆತಂಕ

|
Google Oneindia Kannada News

ಬೆಂಗಳೂರು, ಫೆ. 25: ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ಎರಡನೇ ದಿನವಾದ ಶುಕ್ರವಾರ ರಷ್ಯಾ ಕ್ಷಿಪಣಿ ದಾಳಿ ಮಾಡಿದೆ. ಯುದ್ಧದ ಕಾರ್ಮೋಡದಲ್ಲಿ ಮುಳಗಿರುವ ಉಕ್ರೇನ್‌ನಲ್ಲಿ ಬೆಂಗಳೂರಿನ ಯುವತಿಯೊಬ್ಬಳು ಸಿಲುಕಿದ್ದು, ರಕ್ಷಣೆಗಾಗಿ ಮೊರೆಯಿಟ್ಟದ್ದಾಳೆ.

ಬೆಂಗಳೂರಿನ ನಾಗರಬಾವಿ ನಿವಾಸಿ ರುಚಿತಾ ವಿದ್ಯಾಭ್ಯಾಸಕ್ಕೆ ಉಕ್ರೇನ್‌ಗೆ ತೆರಳಿದ್ದು ಇದೀಗ ರಕ್ಷಣೆ ಕೋರಿ ತನ್ನ ತಾಯಿಗೆ ಮನವಿ ಮಾಡಿದ್ದಾರೆ. ಗುರುವಾರ ಮಧ್ಯರಾತ್ರಿ 12.30ರ ನಂತರ ರುಚಿರಾ ಪೋಷಕರ ಸಂಪರ್ಕಕ್ಕೆ ಸಿಲುಕಿಲ್ಲ. ಹೀಗಾಗಿ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿದ ಕರ್ನಾಟಕದ ವಿದ್ಯಾರ್ಥಿಗಳು: 24/7 ಸಹಾಯವಾಣಿ ಆರಂಭಉಕ್ರೇನ್‌ನಲ್ಲಿ ಸಿಲುಕಿದ ಕರ್ನಾಟಕದ ವಿದ್ಯಾರ್ಥಿಗಳು: 24/7 ಸಹಾಯವಾಣಿ ಆರಂಭ

ವಿದ್ಯಾಭ್ಯಾಸ ಮಾಡುವ ಸಲುವಾಗಿ ನಾಗರಭಾವಿಯ ನಿವಾಸಿ ರುಚಿತಾಉಕ್ರೇನ್‌ಗೆ ತೆರಳಿದ್ದಾಳೆ. ಉಕ್ರೇನ್‌ನಲ್ಲಿ ಯುದ್ಧ ಹಿನ್ನೆಲೆಯಲ್ಲಿ ಗುರುವಾರ ರುಚಿತಾ ತನ್ನ ಪೋಷಕರೊಂದಿಗೆ ಮಾತನಾಡಿದ್ದಾರೆ. ಭಾರತೀಯ ಮೂಲದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಷಯವನ್ನು ತಿಳಿಸಿದ್ದಾರೆ. ಉಕ್ರೇನ್‌ನಲ್ಲಿರುವ ರಾಯಭಾರ ಕಚೇರಿಯಿಂದ ಯಾವುದೇ ನೆರವು ಸಿಕ್ಕಿಲ್ಲ ಎಂಬುದನ್ನು ರುಚಿತಾತನ್ನ ಪೋಷಕರಿಗೆ ತಿಳಿಸಿದ್ದಾಳೆ. ಯುದ್ಧದಿಂದ ಆಗಿರುವ ಆತಂಕದ ಸ್ಥಿತಿಯ ಬಗ್ಗೆಯೂ ವಿವರಿಸಿದ್ದಾಳೆ. ಅದಾದ ಬಳಿಕ ರುಚಿತಾ ಪೋಷಕರ ಸಂಪರ್ಕಕ್ಕೆ ಸಿಕ್ಕಿಲ್ಲ.

Russia-Ukraine War: Bengaluru Girl Stranded in Ukraine, Parents Worried

Recommended Video

ಉಕ್ರೇನ್ ನ ಅಮಾಯಕರ ಮೇಲೂ ಅಟ್ಯಾಕ್ ಮಾಡಿದ ರಷ್ಯಾ | Oneindia Kannada

ಈ ಕುರಿತು ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರುಚಿತಾ ತಾಯಿ ಪೂರ್ಣಿಮಾ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮಗಳು ಕರೆ ಮಾಡಿ ಉಕ್ರೇನ್ ಬಗ್ಗೆ ತಿಳಿಸಿದಳು. ರಾಯಭಾರ ಕಚೇರಿ ಸಂಪರ್ಕಿಸಿದರೂ ಯಾವುದೇ ನೆರವು ಸಿಕ್ಕಿಲ್ಲ. ಈ ಕೂಡಲೇ ಕೇಂದ್ರ ಸರ್ಕಾರ ಉಕ್ರೇನ್‌ನಲ್ಲಿರುವ ಮಗಳನ್ನು ರಕ್ಷಿಸಬೇಕು. ಭಾರತೀಯ ಮೂಲದ ವಿದ್ಯಾರ್ಥಿಗಳನ್ನು ರಕ್ಷಿಸಬೇಕು. ಆದಷ್ಟು ಬೇಗ ಭಾರತೀಯ ಮೂಲದ ವಿದ್ಯಾರ್ಥಿಗಳನ್ನು ಸರ್ಕಾರ ಭಾರತಕ್ಕೆ ಕರೆತರಬೇಕು ಎಂದು ಕುಟುಂಬ ಮನವಿ ಮಾಡಿದೆ.

English summary
Russia-Ukraine War: Bengaluru Nagarabhavi resident Ruchira Stranded in Ukraine, Parents Worried. Urges Central Govt to bring back stranded indians from ukraine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X