ನೆರವು ಕೋರಿ ಸುಷ್ಮಾ ಸ್ವರಾಜ್ ಗೆ ಆರ್ ವಿ ದೇಶಪಾಂಡೆ ಪತ್ರ
Recommended Video

ಬೆಂಗಳೂರು, ನವೆಂಬರ್ 23: ಇರಾನಿನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ರಾಜ್ಯದ ಭಟ್ಕಳ ಮತ್ತು ಕುಮಟಾ ತಾಲ್ಲೂಕಿನ 18 ಮೀನುಗಾರರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಬಿಡುಗಡೆಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಕೋರಿದ್ದಾರೆ.
ಈ ಬಗ್ಗೆ ಸುಷ್ಮಾ ಅವರಿಗೆ ಗುರುವಾರ ಪತ್ರ ಬರೆದಿರುವ ಸಚಿವರು, 'ದುಬೈನ ಮೀನುಗಾರಿಕೆ ದೋಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇಷ್ಟೂ ಜನ ತಮಗೆ ಗೊತ್ತಿಲ್ಲದೆಯೇ ಇರಾನ್ ನಜಲಪ್ರದೇಶವನ್ನು ಪ್ರವೇಶಿಸಿದ್ದರ ಪರಿಣಾಮವಾಗಿ ಇರಾನ್ ಸೇನೆಯಿಂದ ಬಂಧಿತರಾಗಿದ್ದಾರೆ. ಜುಲೈ 27ರಿಂದಲೂ ಇದೇ ಸ್ಥಿತಿಯಲಿರುವ ಇವರನ್ನೆಲ್ಲ ಆ ದೇಶದ ಕಿಶ್ ದ್ವೀಪದಲ್ಲಿ ಇಡಲಾಗಿದೆ. ಇವರೆಲ್ಲರ ಬಂಧನದಿಂದ ಇವರ ಕುಟುಂಬಗಳು ಕಂಗಾಲಾಗಿದ್ದು, ಇವರ ನೆರವಿಗೆ ಧಾವಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ,' ಎಂದಿದ್ದಾರೆ.
'ಬಂಧಿತರಾಗಿರುವ ಮೀನುಗಾರರೆಲ್ಲ ಬಡಕುಟುಂಬದವರಾಗಿದ್ದು, ಮೀನುಗಾರಿಕೆಯನ್ನು ಮಾತ್ರ ಬಲ್ಲವರಾಗಿದ್ದಾರೆ. ಭಾರತೀಯರು ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿ ಹಾಕಿಕೊಂಡಾಗಲೆಲ್ಲ ನೆರವಿಗೆ ಧಾವಿಸುವ ಕೇಂದ್ರ ಸರಕಾರವು ಈಗಲೂ ಇವರಿಗೆ ಅಗತ್ಯ ನೆರವು ನೀಡುವುದಲ್ಲದೆ, ಆದಷ್ಟು ಬೇಗ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು'' ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.

ದೇಶಪಾಂಡೆಯವರು ತಮ್ಮ ಪತ್ರದ ಜತೆಗೆ ಬಂಧಿತ ಮೀನುಗಾರರಿಗೆ ಸಂಬಂಧಿಸಿದ ವಿವರಗಳು ಮತ್ತು ಪಾಸ್ಪೋರ್ಟ್ ಸಂಖ್ಯೆಯನ್ನು ಕೂಡ ಸುಷ್ಮಾ ಸ್ವರಾಜ್ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications