ಅಧಿಕಾರದಲ್ಲಿರುವ ನಾಯಕರನ್ನು ಟೀಕಿಸುವಾಗ ಭಯವಿರಕೂಡದು:ಎಸ್ಎಂ ಕೃಷ್ಣ
ಬೆಂಗಳೂರು, ಆಗಸ್ಟ್ 13: ಅಧಿಕಾರದಲ್ಲಿರುವ ನಾಯಕರನ್ನು ಟೀಕಿಸುವಾಗ ಭಯವನ್ನು ಹೊಡೆದೋಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹೇಳಿದ್ದಾರೆ.
Recommended Video
ದೇಶದಲ್ಲಿನ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವದ ಕೊರತೆ ಕಾಡುತ್ತಿದ್ದು, ಅಧಿಕಾರದಲ್ಲಿರುವವರನ್ನು ಟೀಕಿಸುವಾಗ ಯಾವುದೇ ಭಯವಿರಬಾರದು ಎಂದರು.
45 ವರ್ಷಗಳ ಕಾಂಗ್ರೆಸ್ ಜೊತೆಗಿನ ಒಡನಾಟ ಬಿಟ್ಟು ಮೂರು ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾದೆ, ಬಿಜೆಪಿ 2024ರ ಲೋಕಸಭಾ ಚುನಾವಣೆಯಲ್ಲೂ ಮತ್ತೆ ಅಧಿಕಾರಕ್ಕೆ ಬರಲಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಎಸ್ ಎಂಕೃಷ್ಣಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದು,ಅಭಿವೃದ್ಧಿ ಕಾರ್ಯಗಳಲ್ಲಿ ನಾವೆಲ್ಲರೂ ಜೊತೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ ಎಸ್.ಎಂ. ಕೃಷ್ಣ, ಅಧಿಕಾರದಲ್ಲಿರುವಾಗ ಪ್ರಾದೇಶಿಕ ಪಕ್ಷಗಳನ್ನು ಪಕ್ಕಕ್ಕೆ ತಳ್ಳಬಾರದು ಎಂಬ ಎಚ್ಚರಿಕೆ ನೀಡಿದರು.

ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು
ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ರಾಜಸ್ಥಾನದಲ್ಲಿನ ಸಚಿನ್ ಪೈಲಟ್ ಅವರ ಬಂಡಾಯ ಕುರಿತಂತೆ ಪ್ರತಿಕ್ರಿಯಿಸಿದ ಎಸ್ ಎಂ ಕೃಷ್ಣ, ಅದು ಕಾಂಗ್ರೆಸ್ ಪಕ್ಷದಲ್ಲಿನ ಅಳವಾದ ಅಸ್ವಸ್ಥತೆಯ ಭಾಗವಾಗಿದೆ. ಯುವ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು,ಹಳಬರು ಯುವ ನಾಯಕರಿಗೆ ಅವಕಾಶ ಕೊಡಬೇಕು, ಅಗತ್ಯ ಮಾರ್ಗದರ್ಶನ ನೀಡಬೇಕು ಎಂದರು.

ನರೇಂದ್ರ ಮೋದಿ ಕಾರ್ಯ ನಿರ್ವಹಣೆ
ಬಿಜೆಪಿ ಕಾರ್ಯನಿರ್ವಹಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೊಗಳಿದ್ದಾರೆ.ಆದರೆ, ಕಾಂಗ್ರೆಸ್ ಇನ್ನೂ ಪ್ರಬಲ ಶಕ್ತಿಯಾಗಿದೆ. ಪ್ರಾದೇಶಿಕ ಪಕ್ಷಗಳೊಂದಿಗೆ ಮರು ಸಂಘಟನೆ ಜೆಪಿ ನಡ್ಡಾ ನೇತೃತ್ವದ ಪಕ್ಷಕ್ಕೆ ಪ್ರಮುಖ ಸವಾಲಾಗಿದೆ ಎಂದಿದ್ದಾರೆ.

ಆಂತರಿಕ ಪ್ರಜಾಪ್ರಭುತ್ವದ ಕೊರತೆ
ಪ್ರತಿಯೊಂದು ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವದ ಕೊರತೆ ಎದುರಿಸುತ್ತಿದ್ದು, ಇಂತಹ ವ್ಯವಸ್ಥೆಯ ಬಗ್ಗೆ ಪರಾಮರ್ಶಿಸಬೇಕಾದ ಅಗತ್ಯವಿದೆ. ಅಧಿಕಾರದಲ್ಲಿರುವ ನಾಯಕತ್ವವನ್ನು ಟೀಕಿಸುವ ಭಯವನ್ನು ಬಿಡಬೇಕು ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಹಾರಾಷ್ಟ್ರದ ಮಾಜಿ ರಾಜ್ಯಪಾಲರು ಹೇಳಿದರು.

ಪಕ್ಷ ವಿಕಸನಗೊಳ್ಳದಿದ್ದರೆ ಅಧಃಪತನ
ಪಕ್ಷ ವಿಕಸನಗೊಳ್ಳಲಿದ್ದರೆ ಪಕ್ಷದ ಅಧ:ಪತನ ಆರಂಭಗೊಳ್ಳುತ್ತದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯಲು ಪಕ್ಷ ಹಿಂದಿನ ಕಡೆ ನೋಡಬೇಕು ಎಂದು ಹೇಳಿದ ಅವರು,ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದಾಗಿ ತಿಳಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications