S-VYASA: ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆಗೆ ಸುವರ್ಣ ಮಹೋತ್ಸವ ಸಂಭ್ರಮ
ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆಯು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ. S-VYASA (ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆ) ದೇಶೀಯ ಆರೋಗ್ಯ ಪದ್ಧತಿಯನ್ನು ಉಳಿಸುವ ಮತ್ತು ಅಭಿವೃದ್ಧಿಪಡಿಸುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡಿದೆ.
ಭಾರತದ ಪ್ರಮುಖ ವಿಶ್ವವಿದ್ಯಾಲಯ (A+ NAAC, AICTE ಅನುಮೋದನೆ), S-VYASA ನಲ್ಲಿ ಶಿಕ್ಷಣದಲ್ಲಿ ಸಂಪ್ರದಾಯದ ಜೊತೆಗೆ ಆಧುನಿಕತೆಯನ್ನು ಅಳವಡಿಸಿಕೊಂಡಿರುವ ವಿಶಿಷ್ಠ ಶಿಕ್ಷಣ ಸಂಸ್ಥೆಯಾಗಿದೆ. ಪದವಿಪೂರ್ವದಿಂದ ಪಿಎಚ್ಡಿ ವರೆಗೆ ಹಲವು ಕೋರ್ಸ್ಗಳನ್ನು ಇಲ್ಲಿ ಅಧ್ಯಯನ ಮಾಡಬಹುದಾಗಿದೆ. ಇಲ್ಲಿ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸುವ ಜೊತೆಗೆ, ಉದ್ಯಮವನ್ನು ಪ್ರವೇಶಿಸಲು ಮತ್ತು ವೃತ್ತಿಪರ ವಾತಾವರಣ ಪಡೆಯಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತದೆ.

ಸಾಮಾನ್ಯ ಶಿಕ್ಷಣ ಪದ್ಧತಿಗಿಂದ ಭಿನ್ನವಾಗಿ ಇಲ್ಲಿ ವಿದ್ಯಾರ್ಥಿಗಳು ಯೋಗದ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಾರೆ. ಸಂಸ್ಥೆಯು ಗುರುಕುಲ ಶೈಲಿಯ ಶಿಕ್ಷಣವನ್ನು ಆಧುನಿಕ ವೈಜ್ಞಾನಿಕ ವಿಧಾನದಲ್ಲಿ ಬೋಧನೆ ಮಾಡುವುದು ಶಿಕ್ಷಣದ ಗುಣಮಟ್ಟವನ್ನು ಮತ್ತೊಂದು ಹಂತಕ್ಕೆ ಒಯ್ಯುತ್ತದೆ. ಇಲ್ಲಿ ಪ್ರಾಯೋಗಿಕ ಅನುಭವದ ಜೊತೆಗೆ ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗುತ್ತದೆ.
ಕೇಂದ್ರ ಸಚಿವರ ಮೆಚ್ಚುಗೆ
ಭಾನುವಾರ (ಮಾರ್ಚ್ 2) ರಂದು ವಿಶ್ವವಿದ್ಯಾನಿಲಯದ ಕ್ಯಾಂಪನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯುಷ್ ಸಚಿವಾಲಯದ ರಾಜ್ಯ ಸಚಿವ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಸ್ಥೆಯ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಗ್ಗೆ ಟ್ವೀಟ್ ಮಾಡಿದ ಅವರು, ನಮ್ಮ ಸರ್ಕಾರ ಆಯುಷ್ ವ್ಯವಸ್ಥೆಗಳನ್ನು ಹರಡಲು ಮತ್ತು ಸ್ವಾಸ್ಥ್ಯ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಲು ಬದ್ಧವಾಗಿದೆ. ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆಯ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಅವರ ಹೆಗ್ಗುರುತು ಸಾಧನೆಗಳನ್ನು ಗುರುತಿಸಲಾಯಿತು.
ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, "ಭಾರತದಲ್ಲಿ ಗುಣಪಡಿಸಿ, ಭಾರತದಿಂದ ಗುಣಪಡಿಸಿ" ಎಂಬ ಅಭಿಯಾನವನ್ನು ಉತ್ತೇಜಿಸುವ ಮೂಲಕ, ಭಾರತವನ್ನು ಜಾಗತಿಕ ಆರೋಗ್ಯ ಕೇಂದ್ರವನ್ನಾಗಿ ಮಾಡುವತ್ತ ನಾವು ನಿರಂತರವಾಗಿ ಸಾಗುತ್ತಿದ್ದೇವೆ.
ಇದರೊಂದಿಗೆ, ಯೋಗದಲ್ಲಿ ಶ್ರೇಷ್ಠತೆಯ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಕೇಂದ್ರವು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಸಂಶೋಧನೆ, ಶಿಕ್ಷಣ ಮತ್ತು ನಾವೀನ್ಯತೆಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. "ಯೋಗ ವಿಜ್ಞಾನಿ" ಪದ್ಮಶ್ರೀ ಡಾ. ಎಚ್.ಆರ್. ನಾಗೇಂದ್ರ, S-VYASA ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರು ಮತ್ತು ಅಂತರರಾಷ್ಟ್ರೀಯ ಯೋಗ ದಿನವನ್ನು ಆರಂಭಿಸಿದರು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications