Get Updates
Get notified of breaking news, exclusive insights, and must-see stories!

S-VYASA: ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆಗೆ ಸುವರ್ಣ ಮಹೋತ್ಸವ ಸಂಭ್ರಮ

ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆಯು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ. S-VYASA (ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆ) ದೇಶೀಯ ಆರೋಗ್ಯ ಪದ್ಧತಿಯನ್ನು ಉಳಿಸುವ ಮತ್ತು ಅಭಿವೃದ್ಧಿಪಡಿಸುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

ಭಾರತದ ಪ್ರಮುಖ ವಿಶ್ವವಿದ್ಯಾಲಯ (A+ NAAC, AICTE ಅನುಮೋದನೆ), S-VYASA ನಲ್ಲಿ ಶಿಕ್ಷಣದಲ್ಲಿ ಸಂಪ್ರದಾಯದ ಜೊತೆಗೆ ಆಧುನಿಕತೆಯನ್ನು ಅಳವಡಿಸಿಕೊಂಡಿರುವ ವಿಶಿಷ್ಠ ಶಿಕ್ಷಣ ಸಂಸ್ಥೆಯಾಗಿದೆ. ಪದವಿಪೂರ್ವದಿಂದ ಪಿಎಚ್‌ಡಿ ವರೆಗೆ ಹಲವು ಕೋರ್ಸ್‌ಗಳನ್ನು ಇಲ್ಲಿ ಅಧ್ಯಯನ ಮಾಡಬಹುದಾಗಿದೆ. ಇಲ್ಲಿ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸುವ ಜೊತೆಗೆ, ಉದ್ಯಮವನ್ನು ಪ್ರವೇಶಿಸಲು ಮತ್ತು ವೃತ್ತಿಪರ ವಾತಾವರಣ ಪಡೆಯಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತದೆ.

s-vyasa university prashanti kutiram celebrated golden Jubilee Year

ಸಾಮಾನ್ಯ ಶಿಕ್ಷಣ ಪದ್ಧತಿಗಿಂದ ಭಿನ್ನವಾಗಿ ಇಲ್ಲಿ ವಿದ್ಯಾರ್ಥಿಗಳು ಯೋಗದ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಾರೆ. ಸಂಸ್ಥೆಯು ಗುರುಕುಲ ಶೈಲಿಯ ಶಿಕ್ಷಣವನ್ನು ಆಧುನಿಕ ವೈಜ್ಞಾನಿಕ ವಿಧಾನದಲ್ಲಿ ಬೋಧನೆ ಮಾಡುವುದು ಶಿಕ್ಷಣದ ಗುಣಮಟ್ಟವನ್ನು ಮತ್ತೊಂದು ಹಂತಕ್ಕೆ ಒಯ್ಯುತ್ತದೆ. ಇಲ್ಲಿ ಪ್ರಾಯೋಗಿಕ ಅನುಭವದ ಜೊತೆಗೆ ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗುತ್ತದೆ.

ಕೇಂದ್ರ ಸಚಿವರ ಮೆಚ್ಚುಗೆ

ಭಾನುವಾರ (ಮಾರ್ಚ್ 2) ರಂದು ವಿಶ್ವವಿದ್ಯಾನಿಲಯದ ಕ್ಯಾಂಪನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯುಷ್ ಸಚಿವಾಲಯದ ರಾಜ್ಯ ಸಚಿವ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಸ್ಥೆಯ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಗ್ಗೆ ಟ್ವೀಟ್‌ ಮಾಡಿದ ಅವರು, ನಮ್ಮ ಸರ್ಕಾರ ಆಯುಷ್ ವ್ಯವಸ್ಥೆಗಳನ್ನು ಹರಡಲು ಮತ್ತು ಸ್ವಾಸ್ಥ್ಯ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಲು ಬದ್ಧವಾಗಿದೆ. ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಸಂಶೋಧನಾ ಸಂಸ್ಥೆಯ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಅವರ ಹೆಗ್ಗುರುತು ಸಾಧನೆಗಳನ್ನು ಗುರುತಿಸಲಾಯಿತು.

ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, "ಭಾರತದಲ್ಲಿ ಗುಣಪಡಿಸಿ, ಭಾರತದಿಂದ ಗುಣಪಡಿಸಿ" ಎಂಬ ಅಭಿಯಾನವನ್ನು ಉತ್ತೇಜಿಸುವ ಮೂಲಕ, ಭಾರತವನ್ನು ಜಾಗತಿಕ ಆರೋಗ್ಯ ಕೇಂದ್ರವನ್ನಾಗಿ ಮಾಡುವತ್ತ ನಾವು ನಿರಂತರವಾಗಿ ಸಾಗುತ್ತಿದ್ದೇವೆ.

ಇದರೊಂದಿಗೆ, ಯೋಗದಲ್ಲಿ ಶ್ರೇಷ್ಠತೆಯ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಕೇಂದ್ರವು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಸಂಶೋಧನೆ, ಶಿಕ್ಷಣ ಮತ್ತು ನಾವೀನ್ಯತೆಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. "ಯೋಗ ವಿಜ್ಞಾನಿ" ಪದ್ಮಶ್ರೀ ಡಾ. ಎಚ್‌.ಆರ್. ನಾಗೇಂದ್ರ, S-VYASA ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರು ಮತ್ತು ಅಂತರರಾಷ್ಟ್ರೀಯ ಯೋಗ ದಿನವನ್ನು ಆರಂಭಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+