ಆತ್ಮಹತ್ಯೆ ಪ್ರಕರಣ ಸಿಎಂ ಸಿದ್ದುಗೆ ರಾಮದಾಸ್ ಪತ್ರ

ಬೆಂಗಳೂರು, ಫೆ.16 : ಆತ್ಮಹತ್ಯೆ ಪ್ರಕರಣದ ನಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮಾಜಿ ಸಚಿವ ಎಸ್.ಎ.ರಾಮದಾಸ್, ಪ್ರೇಮಕುಮಾರಿ ತಮ್ಮ ವಿರುದ್ಧ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಎಸ್ಎ ರಾಮದಾಸ್ ಫೆ.14ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಚಿಕ್ಕಮಗಳೂರಿನ ಪ್ರೇಮಕುಮಾರಿ ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ರಾಮದಾಸ್ ಮನವಿ ಮಾಡಿದ್ದಾರೆ. [ರಾಮದಾಸ್ ವಿದೇಶಕ್ಕೆ ಹಾರಲು ಸಜ್ಜು]

 Siddaramaiah

ಪ್ರೇಮಕುಮಾರಿ ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದರಿಂದ ನನ್ನ ಘನತೆ ಮತ್ತು ರಾಜಕೀಯ ಜೀವನಕ್ಕೆ ಧಕ್ಕೆ ಉಂಟಾಗಿದೆ. ರಾಜಕೀಯ ಪ್ರೇರಿತವಾಗಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುವುದಕ್ಕೆ ರಾಜಕೀಯ ಪ್ರೇರಣೆಯಾಗಿದೆ ಎಂದು ರಾಮದಾಸ್ ಪತ್ರದಲ್ಲಿ ವಿವರಣೆ ನೀಡಿದ್ದಾರೆ.[ಪ್ರೇಮ ಕುಮಾರಿ ಯಾರು]

ಪ್ರೇಮಕುಮಾರಿ ಅವರು ನನ್ನ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು, ಇದಕ್ಕೆ ಒಪ್ಪದಿದ್ದಾಗ ಸಂಬಂಧಿಕರ ಜೊತೆ ಸೇರಿ ಬ್ಲಾಕ್ ಮೇಲೆ ಮಾಡುತ್ತಿದ್ದಾರೆ ಎಂದು ಸಿಎಂಗೆ ಬರೆದಿರುವ ಪತ್ರದಲ್ಲಿ ರಾಮದಾಸ್ ಆರೋಪಿಸಿದ್ದಾರೆ.

ಈ ಎಲ್ಲಾ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಜನರಿಗೆ ತಿಳಿಸಿ. ತೇಜೋವಧೆಗೆ ಒಳಗಾಗಿರುವ ತಮಗೆ ನ್ಯಾಯ ದೊರಕಿಸಿಕೊಡಿ ಎಂದು ರಾಮದಾಸ್ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+