Get Updates
Get notified of breaking news, exclusive insights, and must-see stories!

ಸಾಲು ಮರದ ತಿಮ್ಮಕ್ಕಗೆ ಉಸಿರಾಟದ ಸಮಸ್ಯೆ: ಹಾಸನದಿಂದ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್‌

ಬೆಂಗಳೂರು, ಅಕ್ಟೋಬರ್‌ 04: ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಹಾಸನದಿಂದ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದ್ದು, ವೈದ್ಯರು ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿದ್ದ ಸಾಲು ಮರದ ತಿಮ್ಮಕ್ಕ ಅವರು ಇತ್ತೀಚಿಗೆ ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ವಾಸಾಗಿದ್ದರು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸ್ಥಳೀಯ ಚಿಕಿತ್ಸೆಗಳಿಂದ ಗುಣಮುಖರಾಗದ ಕಾರಣ ಉಸಿರಾಟ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಅವರನ್ನು ಬಳ್ಳೂರಿನಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

Saalumarada Thimmakkala Hospitalized At Bengaluru

ಸದ್ಯ ವಾತಾವರಣದಲ್ಲಿ ಬದಲಾವಣೆಯಿಂದ ಎಲ್ಲೆಡೆ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಲು ಮರದ ತಿಮ್ಮಕ್ಕ ಅವರಿಗೂ ಇದೇ ಕಾರಣಕ್ಕೆ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದ್ದು, ವೈದ್ಯರು ಆಸ್ಪತ್ರೆಯಲ್ಲಿ ಇನ್ನಷ್ಟು ದಿನ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಕಳೆದ ವಾರ ತಿಮ್ಮಕ್ಕ ಅವರಿಗೆ ಮೈ ಕೈ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇನ್ನು ಎರಡು ತಿಂಗಳ ಹಿಂದೆ ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಬಳಿಕ ಜಯನಗರ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+