RR ನಗರ ಚುನಾವಣೆ ಮುಂದೂಡಿಕೆ, ಕಾಂಗ್ರೆಸ್‌ಗೆ ಕಪಾಳಮೋಕ್ಷ; ಸದಾನಂದಗೌಡ

ಬೆಂಗಳೂರು, ಮೇ 11: ರಾಜರಾಜೇಶ್ವರಿ ನಗರ ಚುನಾವಣೆ ಮುಂದೂಡಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸದಾನಂದಗೌಡ ಅವರು ಇದು ಕಾಂಗ್ರೆಸ್‌ ಭ್ರಷ್ಟಾಚಾರಕ್ಕೆ ಕಪಾಳಮೋಕ್ಷ ಎಂದಿದ್ದಾರೆ.

ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಸದಾನಂದ ಗೌಡ ಅವರು, 'ಮತದಾರ ಗುರುತಿನ ಚೀಟಿಯ ಕಾರ್ಖಾನೆ ತೆರೆದಿದ್ದ ಗೂಂಡಾ ಶಾಸಕ ಮುನಿರತ್ನಗೆ ಬೆಂಬಲ ಸೂಚಿಸಿದ್ದ ಕಾಂಗ್ರೆಸ್‌ ನಾಯಕರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಕಪಾಳಮೋಕ್ಷ ಇದು' ಎಂದು ಸದಾನಂದಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ಕಾರ್ಯ ಮಾಡಿದೆ ಈಗ ಇಂತಹಾ ಗೂಂಡಾ ಸಂಸ್ಕೃತಿಯ ಅಭ್ಯರ್ಥಿಗಳನ್ನು ತಿರಸ್ಕರಿಸಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

Sadanada Gowda reaction about RR nagar election postpone

ರಾಜರಾಜೇಶ್ವರಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ 9000ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳು ದೊರೆತಿದ್ದವು, ಇದರ ಸಂಬಂಧ ಮುನಿರತ್ನ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈಗ ಚುನಾವಣಾ ಆಯೋಗವು ರಾರಾನಗರ ಚುನಾವಣೆಯಲ್ಲಿ ಮೇ 28ಕ್ಕೆ ಮುಂದೂಡಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವೀಟ್ ಮಾಡಿರುವ ಸದಾನಂದಗೌಡ ಅವರು, 'ರಾಹುಲ್ ಗಾಂಧಿ ಅವರೇ ನೀವೀಗ ಮುನಿರತ್ನ ಅವರನ್ನು ಉಚ್ಛಾಟಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ನೀವೀಗ ಮುನಿರತ್ನ ಅವರನ್ನು ಉಚ್ಛಾಟಿಸಿದರೆ ನಿಮಗೆ ನಿಜವಾಗಿಯೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಗೌರವ ಇದೆ ಎಂದು ನಾವು ಒಪ್ಪಿಕೊಳ್ಳುತ್ತೇವೆ' ಎಂದು ಸವಾಲು ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+