ಎಚ್.ಆಂಜನೇಯ ಕಾಂಗ್ರೆಸ್ ಪಕ್ಷದ ಏಜೆಂಟ್ : ಸದಾನಂದಗೌಡ
Recommended Video

ಬೆಂಗಳೂರು, ಮಾರ್ಚ್ 09: ಕಾಂಗ್ರೆಸ್ ಬೊಕ್ಕಸಕ್ಕೆ ಹಣ ಹೊಂದಿಸಿಕೊಡುವ ಏಜೆಂಟರಂತೆ ಎಚ್.ಆಂಜನೇಯ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಟೀಕಿಸಿದರು.
ಸರ್ಕಾರಿ ವಿದ್ಯಾರ್ಥಿನಿಲಯಗಳ ಪರಿಸ್ಥಿತಿಯ ಬಗ್ಗೆ ಸಮೀಕ್ಷಾ ವರದಿ ಬಿಡುಗಡೆ ಮಾತನಾಡಿದ ಅವರು ಆಂಜನೇಯ ಅವರು ಕೇವಲ ಸುಳ್ಳು ಭರವಸೆಗಳನ್ನು ಕೊಡುವ ಮೂಲಕ ತಮ್ಮ ಇಲಾಖೆ ಕಾರ್ಯವನ್ನು ಮೂಲೆಗುಂಪು ಮಾಡಿ ಮುಖ್ಯಮಂತ್ರಿಗಳ ಏಜೆಂಟ್ರಂತೆ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕನಿಷ್ಠವೆಂದರೂ 2000 ಕೊಟಿ ರೂಪಾಯಿ ಹಗರಣ ನಡೆದಿದೆ. ಸಣ್ಣ ಮಕ್ಕಳಿಗಾಗಿ ಖರೀದಿಸಿರುವ ಬೆಡ್ಶೀಟ್, ದಿಂಬುಗಳ 25 ಕೋಟಿ ವ್ಯವಹಾರದಲ್ಲಿ ಎಂಟು ಕೋಟಿ ಲೂಟಿ ಆಗಿದೆ, ಇನ್ನು 2157 ಕೋಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ನುಂಗಿದ್ದಾರೊ ಏನೋ? ಎಂದು ಅನುಮಾನ ವ್ಯಕ್ತಪಡಿಸಿದರು.

ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಸುಳ್ಳೆ ಎದೆತಟ್ಟಿಕೊಳ್ಳುವ ಮುಖ್ಯಮಂತ್ರಿಗಳು ಸಮಾಜ ಕಲ್ಯಾಣ ಇಲಾಖೆಯ ಕಡೆ ಕಣ್ಣು ಬಿಟ್ಟು ನೋಡಬೇಕು. ಅವರಿಗೆ ಈ ವಿಷಯ ಗೊತ್ತಿದ್ದರು ಬೇಕೆಂದೇ ತನಿಖೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಅನೇಕ ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಗ್ರಂಥಾಲಯ ಇಲ್ಲ, ಹಾಸಿಗೆ, ದಿಂಬುಗಳು ಸರಿಯಿಲ್ಲ, ಭದ್ರತೆ ಇಲ್ಲ, ಕೆಲವು ಕಡೆ ಒಂದು ರೂಮ್ನಲ್ಲಿ 12 ವಿದ್ಯಾರ್ಥಿಗಳನ್ನು ತುಂಬಲಾಗಿದೆ ಇಷ್ಟೆಲ್ಲಾ ಅವ್ಯವಸ್ಥೆಗಳಿದ್ದರೂ ಸಚಿವರು ಮಾತ್ರ ತಮ್ಮ ಖಾತೆಗೆ ಹಣ ತುಂಬಿಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ ಎಂದರು.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಇದು ಕರ್ನಾಟಕ ಬ್ರದರ್ಸ್ ಬಜೆಟ್ ಎಂದ ಬಿಜೆಪಿ, ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ ಮೀಸಲಿರಿಸಿದ್ದೆಷ್ಟು -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ











Click it and Unblock the Notifications