ಬೆಂಗಳೂರಿನ ಪ್ರೆಸ್ಕ್ಲಬ್ ಅಧ್ಯಕ್ಷರಾಗಿ ಸದಾಶಿವ್ ಶೆಣೈ ಆಯ್ಕೆ
ಬೆಂಗಳೂರಿನ ಪ್ರೆಸ್ಕ್ಲಬ್ ನ ವಿವಿಧ ಹುದ್ದೆಗಳಿಗೆ ಭಾನುವಾರ(ಏಫ್ರಿಲ್ 23) ದಂದು ನಡೆದ 2017-18ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸದಾಶಿವ್ ಶೆಣೈ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರು, ಏಪ್ರಿಲ್ 23: ಬೆಂಗಳೂರಿನ ಪ್ರೆಸ್ಕ್ಲಬ್ ನ ವಿವಿಧ ಹುದ್ದೆಗಳಿಗೆ ಭಾನುವಾರ (ಏಫ್ರಿಲ್ 23) ದಂದು ನಡೆದ 2017-18ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸದಾಶಿವ್ ಶೆಣೈ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ದೊಡ್ಡ ಬೊಮ್ಮಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಟಿವಿ9ನ ಎಚ್.ವಿ. ಕಿರಣ್ ಮತ್ತು ಕಾರ್ಯದರ್ಶಿಯಾಗಿ ಈ ಸಂಜೆ ಪತ್ರಿಕೆಯ ಹಿರಿಯ ವರದಿಗಾರ ಜನಾರ್ಧನಾಚಾರಿ ಆಯ್ಕೆಯಾಗಿದ್ದಾರೆ. ಭಾನುವಾರದಂದು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ಚುನಾವಣೆ ಭಾರಿ ಕುತೂಹಲ ಉಂಟು ಮಾಡಿತ್ತು.

ಬೆಳಗ್ಗೆ 9 ರಿಂದ 2 ಗಂಟೆವರೆಗೆ ಮತದಾನ ನಡೆಯಿತು. ಈ ಬಾರಿ ಶೇ.90ಕ್ಕೂ ಅಧಿಕ ಸದಸ್ಯರು ಮತ ಚಲಾಯಿಸಿದ್ದು ವಿಶೇಷ. ಮಧ್ಯಾಹ್ನ 3.30ರ ನಂತರ ನಡೆದ ಮತ ಎಣಿಕೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಕಂಡು ಬಂದಿತು.
ಉದಯ ಟಿವಿಯ ರವೀಶ್ ಮತ್ತು ಸಂಜೆವಾಣಿಯ ದೊಡ್ಡ ಬೊಮ್ಮಯ್ಯ ಅವರು ಸಮಬಲರಾಗಿ ಕಂಡು ಬಂದು, ಟೈ ಆದ ಕಾರಣ ಲಾಟರಿ ಎತ್ತುವ ಮೂಲಕ ವಿಜೇತರನ್ನು ನಿರ್ಧರಿಸಲಾಯಿತು. ದೊಡ್ಡ ಬೊಮ್ಮಯ್ಯನವರಿಗೆ ಅದೃಷ್ಟ ಒಲಿದು ಉಪಾಧ್ಯಕ್ಷರಾದರು.

ಬೆಂಗಳೂರು ಪ್ರೆಸ್ ಕ್ಲಬ್ ನ ನೂತನ ಪದಾಧಿಕಾರಿಗಳು:
ಅಧ್ಯಕ್ಷರು: ಸದಾಶಿವ ಶಣೈ
ಉಪಾಧ್ಯಕ್ಷರು: ದೊಡ್ಡ ಬೊಮ್ಮಯ್ಯ
ಪ್ರಧಾನ ಕಾರ್ಯದರ್ಶಿ: ಎಚ್.ವಿ. ಕಿರಣ್
ಕಾರ್ಯದರ್ಶಿ: ಜನಾರ್ಧನಾಚಾರಿ
ಖಜಾಂಚಿ: ಬಿ.ಎನ್. ರಮೇಶ್
ಜಂಟಿ ಕಾರ್ಯದರ್ಶಿ: ದೇವಿ ಪ್ರಸಾದ್ ರೈ
ಕಾರ್ಯಕಾರಿ ಮಂಡಳಿ ಸದಸ್ಯರು:
* ಆರ್.ಎಚ್. ಲಕ್ಷ್ಮೀ ಪ್ರಸನ್ನ
* ಎಸ್.ಕೆ. ನಾಗರಾಜು
* ಮಹಾಂತೇಶ್ ಎಸ್. ಹಿರೇಮಠ್
* ಜ್ಯೋತಿ ಇರ್ವತ್ತೂರು
* ಮೋಹನ್ ಕುಮಾರ್ ಸಾವಂತ್
* ಎಸ್.ಜಿ. ವಿರೂಪಾಕ್ಷ
* ನಾರಾಯಣ
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications