ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಸಚಿವರ ಮನೆಗಳಿಗೆ ಮುತ್ತಿಗೆ
ಬೆಂಗಳೂರು, ಜನವರಿ 27: ದಲಿತ ಪಂಗಡಗಳಿಗೆ ಒಳ ಮೀಸಲಾತಿ ನೀಡುವಂತೆ ಶಿಫಾರಸ್ಸು ಮಾಡಿರುವ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದ ಎಲ್ಲ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲು ಕರ್ನಾಟಕ ಮೀಸಲಾತಿ ಸಂರಕ್ಷಣಾ ವೇದಿಕೆ ನಿರ್ದರಿಸಿದೆ.
ರಾಜ್ಯ ಸರ್ಕಾರವು ಈ ವರದಿಯ ಬಗ್ಗೆ ಸಾರ್ವಜನಿಕರ ಚರ್ಚೆಗೆ ಅವಕಾಶ ಕಲ್ಪಿಸಿದೆ. ಕೇಂದ್ರ ಸರ್ಕಾರಕ್ಕೆ ತರಾತುರಿಯಲ್ಲಿ ಶಿಫಾರಸು ಮಾಡಲು ಮುಂದಾಗಿದೆ. ಈ ಬಗ್ಗೆ ಎಲ್ಲ ಸಚಿವರು ಸಂಪುಟ ಸಭೆಯಲ್ಲಿ ಧ್ವನಿ ಎತ್ತಬೇಕು, ದಲಿತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿ ಜನವರಿ 29 ರಂದು ಸಚಿವರ ಮನೆಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯಾಧ್ಯಕ್ಷ ರಾಘವೇಂದ್ರನಾಯಕ್ ಎಚ್ಚರಿಸಿದರು.
ಆಯೋಗವು ಪರಿಶಿಷ್ಟ ಜಾತಿಯಲ್ಲಿನ ಒಂದು ಉಪಜಾತಿಯ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇದರ ಬಗ್ಗೆ ಸಾರ್ವಜನಿಕವಾಗಿ ಈವರೆಗೆ ಚರ್ಚೆ ನಡೆದಿಲ್ಲ. ರಾಜಕೀಯ ಹಿತಾಸಕ್ತಿಗಳ ಪ್ರಚೋದನೆಯಿಂದಾಗಿ ದಲಿತ ಸಮುದಾಯದ ಮಾದಿಗ, ಛಲವಾದಿ, ಲಂಬಾಣಿ, ಭೋವಿ, ಕೊರಚ, ಕೊರಮ, ದೊಂಬಿದಾಸ, ಬುಡಗ ಜಂಗಮ, ಸಿಳ್ಳೆಕ್ಯಾತ ಹಾಗೂ ಅಲೆಮಾರಿ ಸಮುದಾಯಗಳ ನಡುವೆ ವಿಷಬೀಜ ಬಿತ್ತಲಾಗುತ್ತಿದೆ ಎಂದರು.

ಸದಾಶಿವ ಆಯೋಗದ ವರದಿಯ ಬಗ್ಗೆ ಸಾರ್ವಜನಿಕರು ಹಾಗೂ ತಜ್ಞರ ಚರ್ಚೆಗೆ ಅವಕಾಶ ಕಲ್ಪಿಸಿ, ಅವರಿಂದ ಅಹವಾಲು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಬೇಕು. ವರದಿಯ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡುತ್ತಿರುವ ಮೀಸಲಾತಿಯ ಮಿತಿಯನ್ನು ಶೇ 50ರಿಂದ 75ಕ್ಕೆ ಏರಿಸಬೇಕು ಎಂದು ಒಕ್ಕೂಟದ ಉಪಾಧ್ಯಕ್ಷ ಜಿ.ಮಾದೇಶ್ ಒತ್ತಾಯಿಸಿದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications