ಪ್ರಿಯಕರನೊಂದಿಗೆ ಸಿಕ್ಕ ನಂದಿನಿ, ಅಪಹರಣವೇ ಆಗಿಲ್ಲ
ಬೆಂಗಳೂರು, ಅಕ್ಟೋಬರ್ 16 : ಸದಾಶಿವನಗರದ ವಿವಾಹಿತ ಮಹಿಳೆ ನಂದಿನಿ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ನಂದಿನಿ ಮತ್ತು ಆಕೆಯ ಮಾಜಿ ಪ್ರಿಯಕರ ಅಂಥೋನಿ ಪತ್ತೆಯಾಗಿದ್ದು, ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.
'ನನ್ನ ಪತ್ನಿ ನಂದಿನಿಯನ್ನು ಆಕೆಯ ಮಾಜಿ ಪ್ರಿಯಕರ ಅಪಹರಣ ಮಾಡಿದ್ದಾನೆ' ಎಂದು ಧಾಮಸ್ ಸ್ಟಾಲಿನ್ ಗುರುವಾರ ಬೆಳಗ್ಗೆ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುಧವಾರ ಸಂಜೆ ಪತಿಗೆ ಕರೆ ಮಾಡಿದ್ದ ನಂದಿನಿ 'ನನ್ನ ಅಪಹರಣವಾಗಿದೆ' ಎಂದು ಹೇಳಿ ಕರೆ ಕಟ್ ಮಾಡಿದ್ದಳು.

ನಂದಿನಿ ದೂರವಾಣಿ ಕರೆಯ ಮಾಹಿತಿ ಆಧರಿಸಿ ಆಕೆಯ ಪತಿ ಸದಾಶಿವನಗರ ಪೊಲೀಸರಿಗೆ ಗುರುವಾರ ದೂರು ನೀಡಿದ್ದರು. ಮೊಬೈಲ್ ಕರೆಗಳ ಮಾಹಿತಿ ಅನ್ವಯ ತನಿಖೆ ಆರಂಭಿಸಿದ ಪೊಲೀಸರು. ತಮಿಳುನಾಡಿನ ಕೊಯಮತ್ತೂರಿನಲ್ಲಿ ನಂದಿನಿ ಮತ್ತು ಆಕೆಯ ಮಾಜಿ ಪ್ರಿಯಕರ ಅಂಥೋನಿಯನ್ನು ಪತ್ತೆ ಹಚ್ಚಿದ್ದಾರೆ. [ಪತ್ನಿಯನ್ನು ಕಿಡ್ನಾಪ್ ಮಾಡಿದ ಮಾಜಿ ಪ್ರಿಯಕರ!]
ಅಪಹರಣವಲ್ಲ : ನಂದಿನಿಯನ್ನು ಯಾರೂ ಅಪಹರಣ ಮಾಡಿರಲಿಲ್ಲ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ. 'ನಾನೇ ಅಂಥೋನಿ ಜೊತೆ ತೆರಳಿದ್ದೆ, ಯಾರೂ ಅಪಹರಣ ಮಾಡಿರಲಿಲ್ಲ' ಎಂದು ನಂದಿನಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಅಂಥೋನಿ ಮತ್ತು ನಂದಿನಿ ಲಿಂಗಾರಾಜಪುರ ಬಳಿಯ ಖಾಸಗಿ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು.
ಅಕ್ಟೋಬರ್ 14 ರಂದು ಕೆಲಸಕ್ಕೆ ಹೋಗಿದ್ದ ನಂದಿನಿ ಸಂಜೆ ಮನೆಗೆ ಬಂದಿರಲಿಲ್ಲ. ಪತಿಗೆ ಕರೆ ಮಾಡಿ ನನ್ನನ್ನು ಯಾರೋ ಅಪಹರಿಸಿದ್ದಾರೆ ಎಂದು ತಿಳಿಸಿದ್ದರು. ಆದರೆ, ಪೊಲೀಸರ ಮುಂದೆ ತಾನೇ ಅಂಥೋನಿ ಜೊತೆ ಹೋಗಿದ್ದೆ ಎಂದು ಆಕೆ ಹೇಳಿಕೆ ನೀಡಿದ್ದಾಳೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications