Safety Islands: ಸೇಫ್ಟಿ ಐಲ್ಯಾಂಡ್ ಅಂದರೇನು? ಅವು ಹೇಗೆ ಕೆಲಸ ಮಾಡುತ್ತವೆ? ನಾವು ಬಳಸುವುದು ಹೇಗೆ ತಿಳಿಯಿರಿ
ಬೆಂಗಳೂರು, ಜೂನ್. 27: ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರು ನಗರದಾದ್ಯಂತ ಸುಮಾರು 30 'ಸೇಫ್ಟಿ ಐಲ್ಯಾಂಡ್' ಸಾಧನಗಳನ್ನು ಅಳವಡಿಸಿದ್ದಾರೆ.ಮ ಕಷ್ಟದಲ್ಲಿರುವವರಿಗೆ ಪೊಲೀಸರನ್ನು ಆದಷ್ಟು ಬೇಗ ತಲುಪಲು ಈ ಸಾಧನಗಳು ಸಹಾಯ ಮಾಡುತ್ತವೆ. ನಗರದಲ್ಲಿ ಮಹಿಳೆಯರ ಹೆಚ್ಚಿರುವ ಪ್ರದೇಶಗಳನ್ನು ಆಯ್ಕೆ ಮಾಡಿ ಈ ಸಾಧನಗಳನ್ನು ಅಳವಡಿಸಿದ್ದಾರೆ ಎಂದು ವರದಿಯಾಗಿದೆ.
ಸೇಫ್ಟಿ ಐಲ್ಯಾಂಡ್ ಸಾಧನಗಳು ಎಂದರೇನು..?
ಇವುಗಳು ಬೆಂಗಳೂರಿನ ವಿವಿಧ ಜಂಕ್ಷನ್ಗಳಲ್ಲಿ ಸ್ಥಾಪಿಸಲಾದ ನೀಲಿ ಬಣ್ಣದಲ್ಲಿರುವ ಟೆಲಿಫೋನ್ ಬೂತ್ನಂತತೆ ಕಾಣುವ ಸಾಧನಗಳು. ಯಾರಾದರೂ ಸಂಕಷ್ಟದಲ್ಲಿರುವಾಗ ಮತ್ತು ಪೊಲೀಸರು ದೂರದಲ್ಲಿರುವಾಗ ಅಥವಾ ಅವರ ಮೊಬೈಲ್ ಫೋನ್ಗೆ ಸಿಗಲು ಸಾಧ್ಯವಾಗದಿದ್ದಾಗ, ಅವರು ಹತ್ತಿರದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಲು ಈ ಸೇಫ್ಟಿ ಐಲ್ಯಾಂಡ್ ಸಾಧನಗಳನ್ನು ಬಳಸಬಹುದು.

ಪ್ರತಿ ಸೇಫ್ಟಿ ಐಲ್ಯಾಂಡ್ ಸಾಧನದ ಬಳಿ ಸಿಸಿಟಿವಿ ಫೂಟೇಜ್ ಅನ್ನು ಸ್ಥಾಪಿಸಲಾಗಿದೆ . ಇದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯ ಸರಿಯಾದ ಸಮಯದ ಮಾಹಿತಿಯನ್ನು ನೀಡುತ್ತದೆ.
ಸೇಫ್ಟಿ ಐಲ್ಯಾಂಡ್ ಸಾಧನಗಳನ್ನು ಬಳಸುವುದು ಹೇಗೆ..?
ಈ ಬಳಕೆದಾರರು ಸಾಧನಗಳಲ್ಲಿ ಒಂದನ್ನು ತಲುಪಬೇಕು ಮತ್ತು ಸಾಧನದಲ್ಲಿ SOS ಬಟನ್ ಒತ್ತಬೇಕು. ಇದು ಸಮೀಪದ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂಪರ್ಕ ಕಲ್ಪಿಸುತ್ತದೆ. ಕರೆ ಮಾಡಿದ ವ್ಯಕ್ತಿಯ ಪರಿಸ್ಥಿತಿಯನ್ನು ಅವಲಂಬಿಸಿ, ಪೊಲೀಸ್ ಸಿಬ್ಬಂದಿ ಸಾಧ್ಯವಾದಷ್ಟು ಬೇಗ ಆ ಸ್ಥಳವನ್ನು ತಲುಪುತ್ತಾರೆ. ತೊಂದರೆಯಲ್ಲಿರುವ ವ್ಯಕ್ತಿಯು ಮೊಬೈಲ್ ಫೋನ್ ಬಳಸುವ ಸ್ಥಿತಿಯಲ್ಲಿಲ್ಲದಿದ್ದರೂ ಸಹ ಪೊಲೀಸರನ್ನು ತಲುಪುವ ರೀತಿಯಲ್ಲಿ ಈ ಸಾಧನಗಳನ್ನು ವಿನ್ಯಾಸಗೊಳಿಸಲಾಗಿದೆ.
30 emergency S.O.S booths in Bengaluru are set up to directly call the police for women's safety, traffic harassment, etc. Good initiative by @BlrCityPolice.#EIIRInteresting #safety #engineering #Police #Bengaluru
— Pareekh Jain (@pareekhjain) June 22, 2023
Video Credit: Unknown, ViaWeb pic.twitter.com/IokyqN6ybl
ಬೆಂಗಳೂರಿನಲ್ಲಿ ಎಲ್ಲಾ ರೀತಿಯ ತುರ್ತು ಪರಿಸ್ಥಿತಿಗಳಿಗಾಗಿ, ನಗರ ಪೊಲೀಸರು ಈಗಾಗಲೇ ತುರ್ತು ಟೋಲ್ ಫ್ರೀ ಸಂಖ್ಯೆ 112 ಅನ್ನು ನಿರ್ವಹಿಸುತ್ತಿದ್ದಾರೆ. ಆದರೂ, ಐಟಿ ರಾಜಧಾನಿಯಲ್ಲಿ ಸಾರ್ವಜನಿಕ ಸುರಕ್ಷತೆಗಾಗಿ ಈ ಸೇಪ್ಟಿ ಐಲ್ಯಾಂಡ್ ಸಾಧನಗಳು ಹೆಚ್ಚುವರಿ ಸುರಕ್ಷತೆಗಾಗಿ ಸ್ಥಾಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಬೆಂಗಳೂರು ಪೊಲೀಸರು ಈ ಸಾಧನಗಳನ್ನು ಸ್ಥಾಪಿಸಿದಾಗಿನಿಂದ ಯಾವುದೇ ಕರೆಗಳನ್ನು ಸ್ವೀಕರಿಸಿಲ್ಲ.
-
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ









Click it and Unblock the Notifications