ಬಿಬಿಎಂಪಿ ಉಪ ಚುನಾವಣೆ 2019 : ಮೈತ್ರಿಕೂಟ, ಬಿಜೆಪಿಗೆ ತಲಾ 1 ಸ್ಥಾನ
ಬೆಂಗಳೂರು, ಮೇ 31 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎರಡು ವಾರ್ಡ್ಗಳಿಗೆ ನಡೆದ ಉಪ ಚುನಾಣೆಯಲ್ಲಿ ಬಿಜೆಪಿಗೆ ಒಂದು ಸ್ಥಾನ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಒಂದು ಸ್ಥಾನ ಸಿಕ್ಕಿದೆ. ಮೇ 29ರಂದು ಉಪ ಚುನಾವಣೆ ನಡೆದಿತ್ತು.
ಶುಕ್ರವಾರ ಬಿಬಿಎಂಪಿ ಉಪ ಚುನಾವಣೆಯ ಮತ ಎಣಿಕೆ ನಡೆಯಿತು. ಕಾವೇರಿಪುರ ವಾರ್ಡ್ನಲ್ಲಿ ಬಿಜೆಪಿಯ ಸಿ.ಪಲ್ಲವಿ ಅವರು ಜಯಗಳಿಸಿದರು. ಸಗಾಯಪುರ ವಾರ್ಡ್ನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪಳನಿಯಮ್ಮಾಳ್ ಅವರು ಜಯಗಳಿಸಿದರು.
ಜೆಡಿಎಸ್ನ ರಮೀಳಾ ಉಮಾ ಶಂಕರ್ ಅವರ ನಿಧನದಿಂದಾಗಿ ಕಾವೇರಿಪುರ, ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ಏಳುಮಲೈ ಅವರ ನಿಧನದಿಂದಾಗಿ ಸಗಾಯಪುರ ವಾರ್ಡ್ನಲ್ಲಿ ಉಪ ಚುನಾವಣೆ ಎದುರಾಗಿತ್ತು. ಉಪ ಚುನಾವಣೆಯಲ್ಲಿ ಕಾವೇರಿಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಜೆಡಿಎಸ್ ಕ್ಷೇತ್ರವನ್ನು ಕಳೆದುಕೊಂಡಿದೆ.
2015ರಲ್ಲಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ 100, ಕಾಂಗ್ರೆಸ್ 76, ಜೆಡಿಎಸ್ 14, ಇತರೆ ಅಭ್ಯರ್ಥಿಗಳು 8 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದಾಗಿ ಬಿಜೆಪಿಗೆ ಪಾಲಿಕೆಯ ಅಧಿಕಾರ ಸಿಕ್ಕಿಲ್ಲ.

ಕಾವೇರಿಪುರ ವಾರ್ಡ್ ಫಲಿತಾಂಶ
ಕಾವೇರಿಪುರ ವಾರ್ಡ್ ಉಪ ಚುನಾವಣೆಯಲ್ಲಿ ಬಿಜೆಪಿಯ ಸಿ.ಪಲ್ಲವಿ ಅವರು 9,507 ಮತಗಳನ್ನು ಪಡೆದು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸುಶೀಲಾ ಸುರೇಶ್ ಅವರನ್ನು 78 ಮತಗಳ ಅಂತರದಿಂದ ಸೋಲಿಸಿದ್ದಾರೆ. ಸುಶೀಲ ಸುರೇಶ್ ಅವರು 9,429 ಮತಗಳನ್ನು ಪಡೆದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಬಿಜೆಪಿ ಅಭ್ಯರ್ಥಿ ಸೋಲಿಸಲು ಸಾಧ್ಯವಾಗಿಲ್ಲ.

ಸಗಾಯಪುರ ವಾರ್ಡ್ ಮೈತ್ರಿಕೂಟಕ್ಕೆ ಜಯ
ಸಗಾಯಪುರ ವಾರ್ಡ್ನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಪಳನಿಯಮ್ಮಾಳ್ ಅವರು 6,313 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಜೈರಿಮ್ ಅವರು ಕೇವಲ 431 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಮಾರಿಮುತ್ತು ಅವರು 3,791 ಮತ ಪಡೆದು ಸೋತಿದ್ದಾರೆ. ಗೆಲುವಿನ ಅಂತರ 2,522 ಮತಗಳು.

ಮಾರಿಮುತ್ತು ಸೋಲು
ಸಗಾಯಪುರ ವಾರ್ಡ್ನಲ್ಲಿ ಜೆಡಿಎಸ್ ಟಿಕೆಟ್ ಕೈ ತಪ್ಪಿದ್ದರಿಂದ ಮಾರಿಮುತ್ತು ಅವರು ಪಕ್ಷೇತರರಾಗಿ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ ಅವರು 3,791 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಕ್ಷೇತ್ರ ಕಳೆದುಕೊಂಡ ಜೆಡಿಎಸ್
ಜೆಡಿಎಸ್ನ ರಮೀಳಾ ಉಮಾ ಶಂಕರ್ ಅವರ ನಿಧನದಿಂದಾಗಿ ಕಾವೇರಿಪುರ ವಾರ್ಡ್ಗೆ ಉಪ ಚುನಾವಣೆ ಎದುರಾಗಿತ್ತು. ಉಪ ಮೇಯರ್ ಆಗಿದ್ದ ರಮೀಳಾ ಉಮಾ ಶಂಕರ್ ಅವರು ಹೃದಯಾಘಾತದಿಂದಾಗಿ ನಿಧನಹೊಂದಿದ್ದರು. ಉಪ ಚುನಾವಣೆಯಲ್ಲಿ ವಾರ್ಡ್ ಬಿಜೆಪಿ ವಶವಾಗಿದ್ದು ಜೆಡಿಎಸ್ 1 ಕ್ಷೇತ್ರ ಕಳೆದುಕೊಂಡಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ












Click it and Unblock the Notifications