2018-19ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ
ಬೆಂಗಳೂರು, ಮಾರ್ಚ್ 6; 2018 ಹಾಗೂ 2019ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯು ಶುಕ್ರವಾರ ಪ್ರಕಟಿಸಿದೆ. ಶುಕ್ರವಾರ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ್ ನೇತೃತ್ವದಲ್ಲಿ ನಡೆದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ತೆಗೆದು ಕೊಳ್ಳಲಾಗಿದೆ.
2019ನೇ ಸಾಲಿನ ಗೌರವ ದತ್ತಿ ಪ್ರಶಸ್ತಿಯನ್ನು ಕೆ.ಜಿ.ನಾಗರಾಜಪ್ಪ, ಬಾಬು ಕೃಷ್ಣಮೂರ್ತಿ, ಉಷಾ ಪಿ.ರೈ, ಲಕ್ಷ್ಮಣ ತೆಲಗಾವಿ, ಡಾ. ವೀರಣ್ಣ ರಾಜೂರ ಅವರಿಗೆ ನೀಡಲಾಗಿದೆ.
2019ನೇ ಸಾಲಿನ ಸಾಹಿತ್ಯ ಪ್ರಶಸ್ತಿಯನ್ನು ಡಾ. ಅಮರೇಶ ನುಗಡೋಣೆ, ಡಾ. ವಿ.ಎಸ್.ಮಾಳಿ, ಸುಬ್ಬು ಹೊಲೆಯಾರ್, ಡಾ. ಶಾರದಾ ಕುಪ್ಪಂ, ಪಿ.ಶಿವಣ್ಣ, ಡಾ. ಎಂ.ಎಸ್.ವೇದಾ, ಎಫ್.ಟಿ. ಹಳ್ಳಿಕೇರಿ, ಡಾ. ಮಾಧವ ಪೆರಾಜೆ, ವಸುಧೇಂದ್ರ, ಡಾ. ಜಿ.ಪ್ರಶಾಂತ ನಾಯಕ ಅವರಿಗೆ ನೀಡಲಾಗಿದೆ.

ಇದೇ ವೇಳೆ 10 ಜನರಿಗೆ 2019ನೇ ಸಾಲಿನ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿ, 2018ರ ವರ್ಷದ ಪುಸ್ತಕ ಬಹುಮಾನ ಮತ್ತು 2018ರ ವರ್ಷದ ಅಕಾಡೆಮಿಯ 9 ದತ್ತಿನಿಧಿ ಬಹುಮಾನ ಘೋಷಿಸಲಾಯಿತು. 2018ರ ವರ್ಷದ ಪುಸ್ತಕ ಬಹುಮಾನಕ್ಕೆೆ ಕಾವ್ಯ, ಕಾದಂಬರಿ, ಸಣ್ಣ ಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಆತ್ಮಕಥೆ, ಮಕ್ಕಳ ಸಾಹಿತ್ಯ, ವಿಜ್ಞಾನ, ಅನುವಾದ, ಅಂಕಣ ಬರಹ ಸೇರಿ 19 ವಿಭಾಗದಿಂದ ಪುಸ್ತಕಗಳನ್ನು ಆರಿಸಿಕೊಳ್ಳಲಾಗಿದೆ.
ಪ್ರಶಸ್ತಿಯು 25 ಸಾವಿರ ರೂ. ಪ್ರಮಾಣ ಪತ್ರ ಒಳಗೊಂಡಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ 2019ನೇ ಸಾಲಿನ ವರ್ಷದ ಗೌರವ ಪ್ರಶಸ್ತಿ 50 ಸಾವಿರ ರು. ನಗದು, ಫಲಕ ಮತ್ತು ಪ್ರಮಾಣ ಪತ್ರವನ್ನೊೊಳಗೊಂಡಿರುತ್ತದೆ. ಸಾಹಿತ್ಯ ಶ್ರೀ ಪ್ರಶಸ್ತಿಯು 25 ಸಾವಿರ ರು. ನಗದು, ಪ್ರಮಾಣಪತ್ರವನ್ನೊೊಳಗೊಂಡಿದೆ.
ಸಾಹಿತ್ಯಾಾಸಕ್ತರು ಸ್ಥಾಪಿಸಿದ 9 ದತ್ತಿ ಬಹುಮಾನ
ಕಾವ್ಯ-ಹಸ್ತಪ್ರತಿ (ಚಿ. ಶ್ರೀನಿವಾಸರಾಜು ದತ್ತಿನಿಧಿ)ಯಲ್ಲಿ ಒಂದು ಅಂಕ ಮುಗಿದು ಕೃತಿಗಾಗಿ ಸ್ಮಿತಾ ಮಾಕಳ್ಳಿ, ಕಾದಂಬರಿ (ಚದುರಂಗ ದತ್ತಿಿನಿಧಿ)ಯಲ್ಲಿ ಅತೀತ ಲೋಕದ ಮಹಾಯಾತ್ರಿಕ ಕೃತಿ ಬರೆದ ಡಾ. ಲೋಕೇಶ ಅಗಸನಕಟ್ಟೆೆ, ಲಲಿತಪ್ರಬಂಧ (ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿ ಬಹುಮಾನ) ವಿಭಾಗದಲ್ಲಿ ಚಿದಾನಂದ ಸಾಲಿ ಬರೆದ ಮೂರನೇ ಕಣ್ಣು, ಚಂದ್ರಶೇಖರ ಸುಭಾಸಗೌಡ ಪಾಟೀಲ್ ರಚಿಸಿದ ಬೇಸಾಯದ ಕತಿ ಎಂಬ ಜೀವನ ಚರಿತ್ರೆೆ (ಸಿಂಪಿ ಲಿಂಗಣ್ಣ ದತ್ತಿನಿಧಿ), ಸಾಹಿತ್ಯ ವಿಮರ್ಶೆ (ಪಿ. ಶ್ರೀನಿವಾಸರಾವ್ ದತ್ತಿನಿಧಿ)ಯಲ್ಲಿ ಸುರೇಶ್ ನಾಗಲಮಡಿಕೆ ಬರೆದ ಹಲವು ಬಣ್ಣದ ಹಗ್ಗ ಕೃತಿ, ಅನುವಾದ-1 (ಎಲ್.ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ) ರವೀಂದ್ರ ಗದ್ಯ ಸಂಚಯ ಕೃತಿ ರಚಿಸಿದ ಜಿ. ರಾಮನಾಥ ಭಟ್, ಲೇಖಕರ ಮೊದಲ ಸ್ವತಂತ್ರ ಕೃತಿ (ಮಧುರಚೆನ್ನ ದತ್ತಿನಿಧಿ) ವಿಭಾಗದಲ್ಲಿ ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ ಪುಸ್ತಕಕ್ಕಾಾಗಿ ಡಾ.ಲಕ್ಷ್ಮಣ ವಿ.ಎ., ಕನ್ನಡದಿಂದ ಇಂಗ್ಲಿಷ್ಗೆ ಅನುವಾದ (ಅಮೆರಿಕನ್ನಡ ದತ್ತಿಿನಿಧಿ)ದಲ್ಲಿ ಎನ್. ತಿರುಮಲ ಭಟ್ರ ದಿ ಅದರ್ ಫೇಸ್ ಹಾಗೂ ವೈಚಾರಿಕ/ ಅಂಕಣ ಬರಹ (ಬಿ.ವಿ. ವೀರಭದ್ರಪ್ಪ ದತ್ತಿನಿಧಿ)ಕ್ಕಾಾಗಿ ಮಹಾಭಾರತ ಅನುಸಂಧಾನದ ಭಾರತ ಯಾತ್ರೆೆ ರಚಿಸಿದ ಲಕ್ಷ್ಮೀಶ ತೋಳ್ಪಾಾಡಿಯವರಿಗೆ ಅಕಾಡೆಮಿಯಲ್ಲಿ ಸಾಹಿತ್ಯಾಾಸಕ್ತ ದಾನಿಗಳು ಸ್ಥಾಾಪಿಸಿರುವ 9 ದತ್ತಿ ಬಹುಮಾನ ದೊರೆತಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications