ಜೆಪಿ ನಗರದ ಶಿರಡಿ ಸಾಯಿ ಬಾಬ ದೇವಸ್ಥಾನದಲ್ಲಿ ಗುರುಪೌರ್ಣಮಿ
ಬೆಂಗಳೂರು ಜುಲೈ 26: ಪುಟ್ಟೇನಹಳ್ಳಿ ಮುಖ್ಯರಸ್ತೆ ಜೆ ಪಿ ನಗರ 6 ನೇ ಹಂತದಲ್ಲಿರುವ ಶ್ರೀ ಸತ್ಯಗಣಪತಿ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಜುಲೈ 27 ರಂದು ವಿಜ್ರಂಭಣೆಯಿಂದ ಗುರುಪೌರ್ಣಮಿಯನ್ನು ಆಚರಿಸಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ.
ಶಿರಡಿ ಸಾಯಿ ಬಾಬಾ ಅವರ ಸನ್ನಿಧಾನ ಹೊರತುಪಡಿಸಿದರೆ ಬೆಂಗಳೂರು ನಗರದಲ್ಲೇ ಅತ್ಯಂತ ವಿಭಿನ್ನ ಹಾಗೂ ವಿಶೇಷವಾದ ಅಲಂಕಾರವನ್ನು ಈ ದೇವಸ್ಥಾನದಲ್ಲಿ ಮಾಡಲಾಗಿದೆ.

ಗುರುಪೌರ್ಣಿಮೆಯನ್ನು ವಿಶೇಷವಾಗಿ ಆಚರಿಸುವುದು ನಮ್ಮ ಉದ್ದೇಶವಾಗಿದೆ. ನಮ್ಮ ದೇವಸ್ಥಾನದಲ್ಲಿ ಬೇರೆ ಯಾವ ದೇವಸ್ಥಾನದಲ್ಲೂ ಸಾಟಿಯಿಲ್ಲದ ರೀತಿಯಲ್ಲಿ ಅಲಂಕಾರ ಮಾಡವುದು ನಮ್ಮ ಉದ್ದೇಶವಾಗಿದೆ ಎಂದು ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.
ತೆಂಗಿನ ಕಾಯಿ, ಫಲ ಪುಷ್ಪಾದಿಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿದೆ. 20 ಕ್ಕೂ ಹೆಚ್ಚು ಕಲಾವಿದರು ಕಳೆದ 7 ದಿನಗಳಿಂದ ಈ ಅಲಂಕಾರವನ್ನು ಮಾಡುತ್ತಿದ್ದು, ಬೇರೆ ಯಾವುದೇ ದೇವಸ್ಥಾನಕ್ಕೂ ಸಾಟಿಯಿಲ್ಲದ ರೀತಿಯಲ್ಲಿ ಅಲಂಕಾರವನ್ನು ಮಾಡಲಾಗಿದೆ ಎಂದರು.
ಜುಲೈ 26 ರಂದು ಗುರುವಾರ ಬೆಳಿಗ್ಗೆ 6 ಗಂಟೆಗೆ ಸಾಮೂಹಿಕ ಅಭಿಷೇಕದಿಂದ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಜುಲೈ 27 ಶುಕ್ರವಾರ ಮುಖ್ಯದಿನವಾದ ಅಂದು ಬೆಳಿಗ್ಗೆ 6 ಗಂಟೆಗೆ ಕಾಕಡಾರತಿ ನಡೆಯಲಿದೆ. ಮೃತ್ಯಂಜಯ ಹೋಮ ಹಾಗೂ ಸಾಯಿನಾಥ ಹೋಮವನ್ನೂ ಆಯೋಜಿಸಲಾಗಿದ್ದು, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications