ಜೆಪಿ ನಗರದ ಶಿರಡಿ ಸಾಯಿ ಬಾಬ ದೇವಸ್ಥಾನದಲ್ಲಿ ಗುರುಪೌರ್ಣಮಿ
ಬೆಂಗಳೂರು ಜುಲೈ 26: ಪುಟ್ಟೇನಹಳ್ಳಿ ಮುಖ್ಯರಸ್ತೆ ಜೆ ಪಿ ನಗರ 6 ನೇ ಹಂತದಲ್ಲಿರುವ ಶ್ರೀ ಸತ್ಯಗಣಪತಿ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಜುಲೈ 27 ರಂದು ವಿಜ್ರಂಭಣೆಯಿಂದ ಗುರುಪೌರ್ಣಮಿಯನ್ನು ಆಚರಿಸಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ.
ಶಿರಡಿ ಸಾಯಿ ಬಾಬಾ ಅವರ ಸನ್ನಿಧಾನ ಹೊರತುಪಡಿಸಿದರೆ ಬೆಂಗಳೂರು ನಗರದಲ್ಲೇ ಅತ್ಯಂತ ವಿಭಿನ್ನ ಹಾಗೂ ವಿಶೇಷವಾದ ಅಲಂಕಾರವನ್ನು ಈ ದೇವಸ್ಥಾನದಲ್ಲಿ ಮಾಡಲಾಗಿದೆ.
ಗುರುಪೌರ್ಣಿಮೆಯನ್ನು ವಿಶೇಷವಾಗಿ ಆಚರಿಸುವುದು ನಮ್ಮ ಉದ್ದೇಶವಾಗಿದೆ. ನಮ್ಮ ದೇವಸ್ಥಾನದಲ್ಲಿ ಬೇರೆ ಯಾವ ದೇವಸ್ಥಾನದಲ್ಲೂ ಸಾಟಿಯಿಲ್ಲದ ರೀತಿಯಲ್ಲಿ ಅಲಂಕಾರ ಮಾಡವುದು ನಮ್ಮ ಉದ್ದೇಶವಾಗಿದೆ ಎಂದು ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.
ಶಿರಡಿ ಸಾಯಿಬಾಬಾ ಸಮಾಧಿಸ್ಥರಾಗಿ ನೂರು ವರ್ಷ
ತೆಂಗಿನ ಕಾಯಿ, ಫಲ ಪುಷ್ಪಾದಿಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿದೆ. 20 ಕ್ಕೂ ಹೆಚ್ಚು ಕಲಾವಿದರು ಕಳೆದ 7 ದಿನಗಳಿಂದ ಈ ಅಲಂಕಾರವನ್ನು ಮಾಡುತ್ತಿದ್ದು, ಬೇರೆ ಯಾವುದೇ ದೇವಸ್ಥಾನಕ್ಕೂ ಸಾಟಿಯಿಲ್ಲದ ರೀತಿಯಲ್ಲಿ ಅಲಂಕಾರವನ್ನು ಮಾಡಲಾಗಿದೆ ಎಂದರು.
ಜುಲೈ 26 ರಂದು ಗುರುವಾರ ಬೆಳಿಗ್ಗೆ 6 ಗಂಟೆಗೆ ಸಾಮೂಹಿಕ ಅಭಿಷೇಕದಿಂದ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಜುಲೈ 27 ಶುಕ್ರವಾರ ಮುಖ್ಯದಿನವಾದ ಅಂದು ಬೆಳಿಗ್ಗೆ 6 ಗಂಟೆಗೆ ಕಾಕಡಾರತಿ ನಡೆಯಲಿದೆ. ಮೃತ್ಯಂಜಯ ಹೋಮ ಹಾಗೂ ಸಾಯಿನಾಥ ಹೋಮವನ್ನೂ ಆಯೋಜಿಸಲಾಗಿದ್ದು, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.