ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಪಿ ನಗರದ ಶಿರಡಿ ಸಾಯಿ ಬಾಬ ದೇವಸ್ಥಾನದಲ್ಲಿ ಗುರುಪೌರ್ಣಮಿ

By Mahesh
|
Google Oneindia Kannada News

ಬೆಂಗಳೂರು ಜುಲೈ 26: ಪುಟ್ಟೇನಹಳ್ಳಿ ಮುಖ್ಯರಸ್ತೆ ಜೆ ಪಿ ನಗರ 6 ನೇ ಹಂತದಲ್ಲಿರುವ ಶ್ರೀ ಸತ್ಯಗಣಪತಿ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಜುಲೈ 27 ರಂದು ವಿಜ್ರಂಭಣೆಯಿಂದ ಗುರುಪೌರ್ಣಮಿಯನ್ನು ಆಚರಿಸಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ.

ಶಿರಡಿ ಸಾಯಿ ಬಾಬಾ ಅವರ ಸನ್ನಿಧಾನ ಹೊರತುಪಡಿಸಿದರೆ ಬೆಂಗಳೂರು ನಗರದಲ್ಲೇ ಅತ್ಯಂತ ವಿಭಿನ್ನ ಹಾಗೂ ವಿಶೇಷವಾದ ಅಲಂಕಾರವನ್ನು ಈ ದೇವಸ್ಥಾನದಲ್ಲಿ ಮಾಡಲಾಗಿದೆ.

Sai Baba Temple in JP Nagar Guru Purnima

ಗುರುಪೌರ್ಣಿಮೆಯನ್ನು ವಿಶೇಷವಾಗಿ ಆಚರಿಸುವುದು ನಮ್ಮ ಉದ್ದೇಶವಾಗಿದೆ. ನಮ್ಮ ದೇವಸ್ಥಾನದಲ್ಲಿ ಬೇರೆ ಯಾವ ದೇವಸ್ಥಾನದಲ್ಲೂ ಸಾಟಿಯಿಲ್ಲದ ರೀತಿಯಲ್ಲಿ ಅಲಂಕಾರ ಮಾಡವುದು ನಮ್ಮ ಉದ್ದೇಶವಾಗಿದೆ ಎಂದು ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.

ಶಿರಡಿ ಸಾಯಿಬಾಬಾ ಸಮಾಧಿಸ್ಥರಾಗಿ ನೂರು ವರ್ಷಶಿರಡಿ ಸಾಯಿಬಾಬಾ ಸಮಾಧಿಸ್ಥರಾಗಿ ನೂರು ವರ್ಷ

ತೆಂಗಿನ ಕಾಯಿ, ಫಲ ಪುಷ್ಪಾದಿಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿದೆ. 20 ಕ್ಕೂ ಹೆಚ್ಚು ಕಲಾವಿದರು ಕಳೆದ 7 ದಿನಗಳಿಂದ ಈ ಅಲಂಕಾರವನ್ನು ಮಾಡುತ್ತಿದ್ದು, ಬೇರೆ ಯಾವುದೇ ದೇವಸ್ಥಾನಕ್ಕೂ ಸಾಟಿಯಿಲ್ಲದ ರೀತಿಯಲ್ಲಿ ಅಲಂಕಾರವನ್ನು ಮಾಡಲಾಗಿದೆ ಎಂದರು.

ಜುಲೈ 26 ರಂದು ಗುರುವಾರ ಬೆಳಿಗ್ಗೆ 6 ಗಂಟೆಗೆ ಸಾಮೂಹಿಕ ಅಭಿಷೇಕದಿಂದ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಜುಲೈ 27 ಶುಕ್ರವಾರ ಮುಖ್ಯದಿನವಾದ ಅಂದು ಬೆಳಿಗ್ಗೆ 6 ಗಂಟೆಗೆ ಕಾಕಡಾರತಿ ನಡೆಯಲಿದೆ. ಮೃತ್ಯಂಜಯ ಹೋಮ ಹಾಗೂ ಸಾಯಿನಾಥ ಹೋಮವನ್ನೂ ಆಯೋಜಿಸಲಾಗಿದ್ದು, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

English summary
Sai Baba Temple in JP Nagar, Bengaluru has organised special event on the occasssion of Guru Purnima (July 27)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X