ಭೀಕರ ವಿಡಿಯೋ: ಧರ್ಮಪುರಿ ಬಳಿ ಅಪಘಾತಕ್ಕೆ ನಾಲ್ವರು ಬಲಿ
ಧರ್ಮಪುರಿ, ಡಿ.13: ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸುಮಾರು 14ಕ್ಕೂ ಅಧಿಕ ವಾಹನಗಳು ಜಖಂಗೊಂಡಿದ್ದು, ಭೀಕರ ಅಪಘಾತದ ಚಿತ್ರ, ವಿಡಿಯೋಗಳು ಇದೀಗ ಲಭ್ಯವಾಗಿದೆ.
ಧರ್ಮಪುರಿ ಸಮೀಪ ತೊಪ್ಪೂರು ಘಾಟ್ ಬಳಿ ಸಿಮೆಂಟ್ ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಸಂಭವಿಸಿದ ಅಫಘಾತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜೊತೆಗೆ ಘಟನೆ ನಡೆದ ಕೆಲವು ಕ್ಷಣದಲ್ಲಿ ನೂರಾರು ಮಂದಿ ನೆರೆದು ವಿಡಿಯೋ ತೆಗೆದು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಆಂಧ್ರಪ್ರದೇಶದಿಂದ ಹೊರಟ್ಟಿದ್ದ ಸಿಮೆಂಟ್ ಟ್ರಕ್ ಸೇಲಂ ತಲುಪಬೇಕಾಗಿತ್ತು. ಮಾರ್ಗಮಧ್ಯದಲ್ಲಿ ಈ ಅಪಘಾತಕ್ಕೆ ಕಾರಣವಾಗಿದ್ದು, 12 ಕಾರು, ಒಂದು ಮಿನಿವ್ಯಾನ್, ಒಂದು ಬೈಕನ್ನು ಉಜ್ಜಿಕೊಂಡು ಸುಮಾರು ದೂರ ಸಾಗಿದ್ದು, ನಂತರ ಸಂಚಾರ ದಟ್ಟಣೆಯಲ್ಲಿ ನಿಂತಿದ್ದ ವಾಹನಗಳನ್ನು ನಜ್ಜುಗುಜ್ಜಾಗಿಸಿದೆ.

ಘಟನೆ ಸಂಭವಿಸಿದ ಕೆಲ ಕ್ಷಣಗಳಲ್ಲೇ ಸಂಚಾರ ದಟ್ಟಣೆ ಅಧಿಕವಾಗಿತ್ತು. ಆದರೆ, ಹೆದ್ದಾರಿ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿ ನಿಭಾಯಿಸಿದರು.
ಈ ದುರ್ಘಟನೆಯಲ್ಲಿ ಒಮಲೂರಿನ ಮದನ್ ಕುಮಾರ್ (42), ಪಗಲ್ ಪಟ್ಟಿಯ ಟಿ ಕಾರ್ತಿಕ್ (38), ಕೊಯಮತ್ತೂರಿನ ನಿತ್ಯಾನಂದನ್ (35) ಹಾಗೂ ಕಾರಿನಲ್ಲಿದ್ದ ಮತ್ತೊಬ್ಬರು ಪೆರಂಬಾಲೈನ ಜಿ ಕಣ್ಣನ್(42) ಧರ್ಮಪುರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 8 ಮಂದಿಯನ್ನು ಸಕ್ರಾರಿ ಆಸ್ಪತ್ರೆಗೆ ದಾಖಲಿಸಲಾಗಿಸಿ, ಚಿಕಿತ್ಸೆ ಕೊಡಿಸಲಾಗಿದೆ ಎಂದು ಎಸ್ಪಿ ಪ್ರವೇಶ್ ಕುಮಾರ್ ಹೇಳಿದರು.

ಘಟನಾ ಸ್ಥಳಕ್ಕೆ ಆಗಮಿಸಿದ ಧರ್ಮಪುರಿ ಜಿಲ್ಲಾಧಿಕಾರಿ ಎಸ್. ಪಿ ಕಾರ್ತಿಕಾ ಅವರು ರಕ್ಷಣಾ ಕಾರ್ಯಾಚಾರಣೆ, ಸಂಚಾರ ಸುಗಮಗೊಳಿಸಲು ಕೈಗೊಂಡ ಕ್ರಮದ ಬಗ್ಗೆ ಪರಿಶೀಲಿಸಿದರು.
ಹೆದ್ದಾರಿಗಳಲ್ಲಿ ವಾಹನಗಳ ವೇಗಮಿತಿ ಪರಿಶೀಲಿಸಲು ಕ್ಯಾಮೆರಾ ಅಳವಡಿಕೆ, ಹೆದ್ದಾರಿ ಪಕ್ಕದಲ್ಲಿ ಬದಲಿ ಮಾರ್ಗಕ್ಕಾಗಿ ಬೇಡಿಕೆ ಇಡಲಾಗಿದೆ, ತೊಪ್ಪೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಕಾರಣವಾದ ಟ್ರಕ್ ಚಾಲಕ ನಾಪತ್ತೆಯಾಗಿದ್ದಾನೆ ಎಂದು ಹೇಳಿದರು.
Recommended Video
ಸೇಲಂ -ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಬದಲಿ ಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, 140 ಕೋಟಿ ರು ವೆಚ್ಚದ ಯೋಜನಾ ವಿವರಗಳನ್ನು ಸಲ್ಲಿಸಲಾಗಿದೆ ಆದರೆ, ಹಾಲಿ ಬಳಕೆಯಲ್ಲಿರುವ ರಸ್ತೆಗಳನ್ನು 6ಲೇನ್ ರಸ್ತೆಯನ್ನಾಗಿಸುವುದಾಗಿ ಕೇಂದ್ರ ಭರವಸೆ ನೀಡಿತ್ತು. ಆದರೆ, ಎರಡು ಕೂಡಾ ಇನ್ನೂ ಕೈಗೊಂಡಿಲ್ಲ ಎಂದು ಸಂಸದ ಅನ್ಬುಮಣಿ ರಾಮದಾಸ್ ಬೇಸರ ವ್ಯಕ್ತಪಡಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications