ಸಮಂಜಸ ಸಂಸ್ಥೆ ಆರಂಭೋತ್ಸವದಲ್ಲಿ ಕೆಸಿ ವೇಣುಗೋಪಾಲ್ ಭಾಗಿ ಸಾಧ್ಯತೆ
ಬೆಂಗಳೂರು, ಜು.9: ವೈವಿಧ್ಯತೆಯಲ್ಲಿ ಏಕತೆಯನ್ನು ಸಮಗ್ರತೆಯನ್ನು ಸಾಧಿಸುವ ಉದ್ದೇಶದಿಂದ ಹುಟ್ಟಿಕೊಂಡ 'ಸಮಂಜಸ' ಎನ್ನುವ ಸಂಸ್ಥೆಯು ಇದೇ ಜುಲೈ 12ರಂದು ಟೌನ್ಹಾಲ್ನಲ್ಲಿ ಉದ್ಘಾಟನೆಗೊಳ್ಳಲಿದೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಸಂಸ್ಥೆಗೆ ಚಾಲನೆ ನೀಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅಧ್ಯಕ್ಷತೆವಹಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಉದ್ಘಾಟನೆ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪಾಲ್ಗೊಳ್ಳಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರು ಈ ಸಂದರ್ಭದಲ್ಲಿ ಸಮಂಜಸ ಸಂಸ್ಥೆಗೆ ಶುಭಾಶಯ ಕೋರಿ ಮಾತನಾಡಲಿದ್ದಾರೆ.

ಸಮಂಜಸ ಸಂಸ್ಥೆಯ ಉದ್ಘಾಟನೆ ನಂತರ ವಿಚಾರ ಮಂಥನ ನಡೆಯಲಿದ್ದು, ಏಕಕಾಲದಲ್ಲೇ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸ್ಥಿತಿಗತಿ ಕುರಿತಂತೆ ರಾಜ್ಯ ಸಭಾ ಸದಸ್ಯ ಹಾಗೂ ಹಿರಿಯ ಚಿಂತಕ ಜಯರಾಮ್ ರಮೇಶ್ ಮಾತನಾಡಿಸಲಿದ್ದಾರೆ. ರಾಜ್ಯ ಸಭಾಸದಸ್ಯ ಕೆಸಿ ರಾಮಮೂರ್ತಿ ಇದಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಲಿದ್ದಾರೆ.
ಚರ್ಚೆಯಲ್ಲಿ ಜೈನ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಸಂದೀಪ್ ಶಾಸ್ತ್ರಿ, ಕಲಾವಿದ ಆರ್. ಅಶೋಕ್ ಪಾಲ್ಗೊಳ್ಳಲಿದ್ದಾರೆ, ದೇಶದ ಜನರನ್ನು ಮೂಲಭೂತವಾದ, ಮತೀಯವಾದದ ಮೂಲಕ ವಿಘಟಿಸುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಬುದ್ಧ, ಬಸವ, ಗಾಂಧಿ , ಅಂಬೇಡ್ಕರ್, ಕುವೆಂಪು ಅವರ ಚಿಂತನೆಗಳಿಂದ ತಡೆಯುವುದು ಸಮಂಜಸದ ಗುರಿಯಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications