ಸಮಂಜಸ ಸಂಸ್ಥೆ ಆರಂಭೋತ್ಸವದಲ್ಲಿ ಕೆಸಿ ವೇಣುಗೋಪಾಲ್ ಭಾಗಿ ಸಾಧ್ಯತೆ
ಬೆಂಗಳೂರು, ಜು.9: ವೈವಿಧ್ಯತೆಯಲ್ಲಿ ಏಕತೆಯನ್ನು ಸಮಗ್ರತೆಯನ್ನು ಸಾಧಿಸುವ ಉದ್ದೇಶದಿಂದ ಹುಟ್ಟಿಕೊಂಡ 'ಸಮಂಜಸ' ಎನ್ನುವ ಸಂಸ್ಥೆಯು ಇದೇ ಜುಲೈ 12ರಂದು ಟೌನ್ಹಾಲ್ನಲ್ಲಿ ಉದ್ಘಾಟನೆಗೊಳ್ಳಲಿದೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಸಂಸ್ಥೆಗೆ ಚಾಲನೆ ನೀಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅಧ್ಯಕ್ಷತೆವಹಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಉದ್ಘಾಟನೆ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪಾಲ್ಗೊಳ್ಳಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರು ಈ ಸಂದರ್ಭದಲ್ಲಿ ಸಮಂಜಸ ಸಂಸ್ಥೆಗೆ ಶುಭಾಶಯ ಕೋರಿ ಮಾತನಾಡಲಿದ್ದಾರೆ.

ಸಮಂಜಸ ಸಂಸ್ಥೆಯ ಉದ್ಘಾಟನೆ ನಂತರ ವಿಚಾರ ಮಂಥನ ನಡೆಯಲಿದ್ದು, ಏಕಕಾಲದಲ್ಲೇ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸ್ಥಿತಿಗತಿ ಕುರಿತಂತೆ ರಾಜ್ಯ ಸಭಾ ಸದಸ್ಯ ಹಾಗೂ ಹಿರಿಯ ಚಿಂತಕ ಜಯರಾಮ್ ರಮೇಶ್ ಮಾತನಾಡಿಸಲಿದ್ದಾರೆ. ರಾಜ್ಯ ಸಭಾಸದಸ್ಯ ಕೆಸಿ ರಾಮಮೂರ್ತಿ ಇದಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಲಿದ್ದಾರೆ.
ಚರ್ಚೆಯಲ್ಲಿ ಜೈನ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಸಂದೀಪ್ ಶಾಸ್ತ್ರಿ, ಕಲಾವಿದ ಆರ್. ಅಶೋಕ್ ಪಾಲ್ಗೊಳ್ಳಲಿದ್ದಾರೆ, ದೇಶದ ಜನರನ್ನು ಮೂಲಭೂತವಾದ, ಮತೀಯವಾದದ ಮೂಲಕ ವಿಘಟಿಸುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಬುದ್ಧ, ಬಸವ, ಗಾಂಧಿ , ಅಂಬೇಡ್ಕರ್, ಕುವೆಂಪು ಅವರ ಚಿಂತನೆಗಳಿಂದ ತಡೆಯುವುದು ಸಮಂಜಸದ ಗುರಿಯಾಗಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications