ಸಂಪರ್ಕ್ ಫಾರ್ ಸಮರ್ಥನ್ : ಕೇಂದ್ರ ಯೋಜನೆ ಶ್ಲಾಘಿಸಿದ ಸುಧಾಮೂರ್ತಿ
ಬೆಂಗಳೂರು, ಜುಲೈ 19 : ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಇನ್ಫೋಸಿಸ್ ಫೌಂಡೇಷನ್ನ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ಭೇಟಿಯಾದರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ಬಿಜೆಪಿ ನಾಯಕರು ವಿವಿಧ ಗಣ್ಯರನ್ನು ಭೇಟಿ ಮಾಡುತ್ತಿದ್ದಾರೆ.
ಗುರುವಾರ ಬೆಂಗಳೂರಿನ ನಿವಾಸದಲ್ಲಿ ಸುಧಾಮೂರ್ತಿ ಅವರನ್ನು ಶ್ರೀನಿವಾಸ ಪೂಜಾರಿ ಭೇಟಿ ಮಾಡಿದರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಬುಕ್ಲೆಟ್ ನೀಡಿ, ಅಭಿಯಾನದ ಕುರಿತು ಮಾಹಿತಿ ನೀಡಿದರು.

ಬುಕ್ ಲೆಟ್ ಓದಿದ ಬಳಿಕ ಸುಧಾಮೂರ್ತಿ ಅವರು, 'ಕೋಟ್ಯಾಂತರ ಬಡ ಹೆಣ್ಣು ಮಕ್ಕಳ ಕುಟುಂಬಗಳಿಗೆ ಅಡುಗೆ ಅನಿಲ ಕೊಟ್ಟಿರುವ ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು' ಎಂದು ಶ್ರೀನಿವಾಸ ಪೂಜಾರಿ ಅವರು ಫೇಸ್ಬುಕ್ನಲ್ಲಿ ಬರೆದಿದ್ದಾರೆ.

ಯೋಗ ದಿನಾಚರಣೆ, ದೇಶದ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಉಡಾನ್ ಯೋಜನೆಯಿಂದ ಆದ ಸಂಪರ್ಕ ಕ್ರಾಂತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಕೋಟಾ ಶ್ರೀನಿವಾಸಪೂಜಾರಿ ಹೇಳಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿ ಅವರು ಬುಧವಾರ ನಟ ಡಾ.ಶಿವರಾಜ್ ಕುಮಾರ್ ಅವರನ್ನು 'ರುಸ್ತುಂ' ಚಿತ್ರೀಕರಣದ ಸಮಯದಲ್ಲಿ ಭೇಟಿಯಾಗಿ ಅಭಿಯಾನದ ಬಗ್ಗೆ ಮಾಹಿತಿ ನೀಡಿದ್ದರು.
2019ರ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಸಂಪರ್ಕ್ ಫಾರ್ ಸಮರ್ಥನ್ ಎಂಬ ಅಭಿಯಾನ ಆರಂಭಿಸಿದೆ. 4000 ಬಿಜೆಪಿ ನಾಯಕರು ಸುಮಾರು 1 ಲಕ್ಷ ಗಣ್ಯರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications