ಕೇಂದ್ರ ಸಚಿವ ರಾಜ್ಯವರ್ಧನ್ ರಿಂದ ಬಯೋಕಾನ್ ಮಜುಂದಾರ್ ಭೇಟಿ
ಬೆಂಗಳೂರು, ಜೂನ್ 14: ಬಿಜೆಪಿಯ 'ಸಂಪರ್ಕ್ ಫಾರ್ ಸಮರ್ಥನ್' ಅಭಿಯಾನದ ಭಾಗವಾಗಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಗುರುವಾರದಂದು ಬೆಂಗಳೂರಿನಲ್ಲಿ ಬಯೋಕಾನ್ ನ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾದರು. ಕಳೆದ ನಾಲ್ಕು ವರ್ಷದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆ ಏನು ಎಂದು ವಿವರಿಸುವ ಪುಸ್ತಿಕೆಯೊಂದನ್ನು ಸಚಿವರು ನೀಡಿದರು.
ಕಳೆದ ಶನಿವಾರದಂದು ಇದೇ ಅಭಿಯಾನಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಾಲಿವುಡ್ ನಟ ಸಂಜಯ್ ದತ್ ನ ಭೇಟಿಯಾಗಿದ್ದರು. ಈ ವರ್ಷದ ಮೇ ತಿಂಗಳಲ್ಲಿ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ನರೇಂದ್ರ ಮೋದಿ ನೇತೃತ್ವದ ಸರಕಾರ ಕಳೆದ ನಾಲ್ಕು ವರ್ಷದಲ್ಲಿ ಮಾಡಿರುವ ಸಾಧನೆಗಳನ್ನು ಪರಿಚಯಿಸುವುದು ಅಭಿಯಾನದ ಉದ್ದೇಶವಾಗಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಅಭಿಯಾನದ ಅಡಿಯಲ್ಲಿ ನಟ ಸಲ್ಮಾನ್ ಖಾನ್ ರ ತಂದೆ ಸಲೀಮ್ ಖಾನ್ ರನ್ನು ಭೇಟಿಯಾಗಿದ್ದರು. ಮೇ ಇಪ್ಪತ್ತೊಂಬತ್ತರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸರಕಾರದ ಸಾಧನೆಯ ಪ್ರಮುಖಾಂಶಗಳ ಬಗ್ಗೆ ಮಾತನಾಡಿದ್ದರು. ಸೇನಾ ಮುಖ್ಯಸ್ಥ ಜ.ದಲ್ಬೀರ್ ಸಿಂಗ್ ರನ್ನು ಗುರುಗ್ರಾಮದಲ್ಲಿರುವ ಅವರ ಮನೆಯಲ್ಲೇ ಅಮಿತ್ ಶಾ ತಮ್ಮ ಮೊದಲ ಭೇಟಿ ಮಾಡಿದ್ದರು.
ಮಾಧುರಿ ದೀಕ್ಷಿತ್, ರತನ್ ಟಾಟಾ ಹಾಗೂ ಉದ್ಧವ್ ಠಾಕ್ರೆ ಅವರನ್ನು ಸಹ ಅಮಿತ್ ಶಾ ಸ್ವತಃ ಭೇಟಿ ಮಾಡಿದ್ದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ











Click it and Unblock the Notifications