ಇಂದು ಮೇಯರ್ ಚುನಾವಣೆ: ಮಹಾಪೌರ ಸ್ಥಾನಕ್ಕೆ ಸಂಪತ್ ರಾಜ್ ಆಯ್ಕೆ ನಿಶ್ಚಿತ
Recommended Video

ಬೆಂಗಳೂರು, ಸೆಪ್ಟೆಂಬರ್ 28: ಬೆಂಗಳೂರು ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಸೆ. 28ರಂದು ಚುನಾವಣೆ ನಡೆಯಲಿದ್ದು, ಮೇಯರ್ ಸ್ಥಾನಕ್ಕೆ ಕೊನೆಯ ಕ್ಷಣದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮಧ್ಯಾಹ್ನ 12 ಗಂಟೆಗೆ ಚುನಾವಣೆ ನಡೆಯಲಿದೆ.
ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ನಾಯಕ ಹಾಗೂ ಡಿಜೆ ಹಳ್ಳಿ ವಾರ್ಡ್ ಕಾರ್ಪೊರೇಟರ್ ಆಗಿರುವ ಆರ್. ಸಂಪತ್ ರಾಜ್ ಅವರು ಆಯ್ಕೆಯಾಗುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ. ಆದರೂ, 'ಕೈ' ಪಾಳಯದಲ್ಲಿ ಕೊನೆಯ ಕ್ಷಣದ ಲಾಬಿಗೆ ಕೆಲ ಕಾಂಗ್ರೆಸ್ ಕಾರ್ಪೊರೇಟರ್ ಗಳು ಪ್ರಯತ್ನಿಸುತ್ತಿದ್ದಾರೆಂದು ಕೆಲ ಮೂಲಗಳು ತಿಳಿಸಿವೆ.

ಇನ್ನು, ಉಪ ಮೇಯರ್ ಪಟ್ಟ ರಮಿಳಾ ಉಮಾಶಂಕರ್ ಅವರು ಆಯ್ಕೆಯಾಗುವುದು ನಿಶ್ಚಿತವಾಗಿದೆ. ಇವರು ಜೆಡಿಎಸ್ ನಾಯಕಿಯಾಗಿದ್ದು ಬಿಬಿಎಂಪಿಯಲ್ಲಿ ಕಾವೇರಿಪುರವನ್ನು ಪ್ರತಿನಿಧಿಸುತ್ತಿದ್ದಾರೆ.
ಬೆಂಗಳೂರು ಮಹಾ ನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಏರ್ಪಟ್ಟಿರುವ ಕಾಂಗ್ರೆಸ್- ಜೆಡಿಎಸ್ ಜುಗಲ್ ಬಂದಿಯಲ್ಲಿ ಮೇಯರ್ ಸ್ಥಾನಕ್ಕಾಗಿ ಕೆಲ ದಿನಗಳಿಂದಲೇ ಹಗ್ಗ ಜಗ್ಗಾಟ ನಡೆದೇ ಇತ್ತು. ಈ ಹಗ್ಗ ಜಗ್ಗಾಟದಲ್ಲಿ ಮೇಯರ್ ಪಟ್ಟವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಸಫಲವಾಗಿತ್ತು.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications