ಊಬರ್ ಕ್ಯಾಬ್ ಚಾಲಕರನ್ನು ಟಾರ್ಗೆಟ್ ಮಾಡ್ತಿದ್ದ ನಾಲ್ವರು ದರೋಡೆಕೋರರ ಸೆರೆ
ಬೆಂಗಳೂರು, ಏ. 16: ಉಬರ್ ಕ್ಯಾಬ್ ಚಾಲಕನನ್ನು ಕರೆಸಿಕೊಂಡು ದರೋಡೆ ಮಾಡಿದ್ದ ನಾಲ್ವರು ದರೋಡೆಕೋರರ ಗ್ಯಾಂಗ್ ನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೃತಿಕ್ ಗೌಡ, ನಿತಿನ್ ಗೌಡ, ದರ್ಶನ್ ಹಾಗೂ ಸುಮಂತ್ ಬಂಧಿತರು. ಇವರಿಂದ ಮಾರುತಿ ಸ್ವಿಫ್ಟ್ ಕಾರು, ಚಿನ್ನದ ಸರ, ಪಲ್ಸರ್ ಬೈಕ್ ವಶಪಡಿಸಿಕೊಳ್ಳಲಾಗಿದೆ.
ನಂದಿನಿ ಬಡಾವಣೆ ಲಕ್ಷ್ಮೀದೇವಿ ನಗರ ನಿವಾಸಿ ಹೃತಿಕಗೌಡ, ಹಾಗೂ ಸಂಪಿಗೆಹಳ್ಳಿ ವೆಂಕಟೇಶ್ವರ ನಗರ ನಿವಾಸಿ ನಿತನ್ ಗೌಡ ಪರಸ್ಪರ ಸ್ನೇಹಿತರು. ಇವರೊಂದಿಗೆ ನಾಗಮಂಗಲ ತಾಲೂಕಿನ ಸಮಂತ್ ಮತ್ತು ದರ್ಶನ್ ನಾಲ್ವರು ಸೆರಿಕೊಂಡು ಐಶಾರಾಮಿ ಜೀವನಕ್ಕೆ ಜೋತು ಬಿದ್ದು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದರು.
ಕಳೆದ ಏ. 1 ರಂದು ರಾತ್ರಿ ವೆಂಕಟೇಶ್ವರ ಗರ ಸಮೀಪದ ಶಿವರಾಮಕಾರಂತ ನಗರ ಕ್ಲಬ್ ಬಳಿ ಉಬರ್ ಕ್ಯಾಬ್ ಬುಕ್ ಮಾಡಿ ಕರೆಸಿಕೊಂಡಿದ್ದಾರೆ. ಈ ವೇಳೆ ಕ್ಯಾಬ್ ಚಾಲಕನಿಗೆ ನಾಲ್ವರು ಅರೋಪಿಗಳು ಚಾಕು ತೋರಿಸಿ ಹೆದರಿಸಿದ್ದು, ನಗದು ಹಣ, ಮೊಬೈಲ್ ಪೋನ್, ಹಾಗೂ ಕ್ಯಾಬ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಕ್ಯಾಬ್ ಚಾಲಕ ಸಂಪಿಗೆಹಳ್ಳಿ ಠಾಣೆಗೆ ದೂರು ನೀಡಿದ್ದರು.

ದರೋಡೆ ಮಾಡಿದ್ದ ಕ್ಯಾಬ್ ನ ಜಾಡು ಹಿಡಿದು ತನಿಖೆ ನಡೆಸಿದ ಸಂಪಿಗೆಹಳ್ಳಿ ಪೊಲೀಸರು ಹೃತಿಕ ಗೌಡನನ್ನು ಬಂಧಿಸಿದ್ದು, ಆತ ನೀಡಿದ ಮಾಹಿತಿ ಮೇರೆಗೆ ಇತರೆ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ದೊಡ್ಡಬಳ್ಳಾಪುರ ಸೇರಿದಂತೆ ವಿವಿಧ ಕಡೆ ಅಪರಾಧ ಕೃತ್ಯಗಳು ಎಸಗಿರುವುದು ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಅನೂಪ್ ಶೆಟ್ಟಿ ನೇತೃತ್ವದಲ್ಲಿ ಈ ಪ್ರಕರಣ ಪತ್ತೆ ಮಾಡಲಾಗಿದೆ.

ಉಬರ್ ಚಾಲಕರನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ.
Recommended Video
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications