‘ಸಮುದಾಯ ಸುಗ್ಗಿ’ – ರಂಗಶಂಕರದಲ್ಲಿ 4 ನಾಟಕಗಳು
ಬೆಂಗಳೂರು, ಡಿ.11: ಸಮುದಾಯ' ಹವ್ಯಾಸಿ ರಂಗ ತಂಡ ಗಿರೀಶ್ ಕಾರ್ನಾಡ್ ವಿರಚಿತ ತುಘಲಕ್ ನಾಟಕದ ಯಶಸ್ಸಿನ ನಂತರ ಡಿಸೆಂಬರ್ 11 ರಿಂದ 14 ರ ವರೆಗೆ,'ಪಂಪ ಭಾರತ' ನಾಟಕ ಹಾಗೂ ಇತ್ತೀಚೆಗೆ ಪುನರುಜ್ಜೀವನ ಗೊಳಿಸಿದ 'ಕತ್ತಲೆ ದಾರಿ ದೂರ', ಮತ್ತು ಸಮುದಾಯದ ಧಾರವಾಡ ಘಟಕದ ಇತ್ತೀಚಿನ ಪ್ರಯೋಗವಾದ 'ದೇವರ ಹೆಣ' ನಾಟಕಗಳನ್ನು ಪ್ರದರ್ಶಿಸಲಿದೆ.
ಸಾಮಾಜಿಕ ಚಳವಳಿ ಮತ್ತು ಹೋರಾಟಗಳಿಗೆ ಸಾಂಸ್ಕೃತಿಕ ಆಯಾಮದ ಬದಲಾದ ಮಾದರಿಗಳನ್ನು ಕಟ್ಟಿಕೊಟ್ಟ ಸಂಘಟನೆಯೇ 'ಸಮುದಾಯ'. ತುರ್ತು ಪರಿಸ್ಥಿತಿಯ ಸಾಮಾಜಿಕ ತುರ್ತಿನಲ್ಲಿ ಜನಪರ ಹಾಗೂ ಪ್ರಜಾಪ್ರಭುತ್ವವಾದೀ ಚಿಂತಕರು ನಿರಂತರ ಚಳವಳಿಗಳ ಮೂಲಕ ಹೋರಾಟದ ಬೇರನ್ನು ಗಟ್ಟಿಗೊಳಿಸಿದ್ದಾರೆ.

1975 ರಿಂದ ಸತತವಾಗಿ ಹಲವು ಪ್ರಮುಖ ನಾಟಕಗಳಾದ 'ಹುತ್ತವ ಬಡಿದರೆ ', 'ತಾಯಿ', 'ಕುರಿ', 'ಸಂಕ್ರಾಂತಿ', 'ಮಹಾಚೈತ್ರ', 'ಕತ್ತಲೆದಾರಿದೂರ', 'ರುಡಾಲಿ', 'ಪಂಪಭಾರತ', 'ಜುಗಾರಿಕ್ರಾಸ್' ಹಾಗೂ ಇನ್ನು ಹತ್ತು ಹಲವು ವಿನೂತನ ನಾಟಕಗಳನ್ನು ಪ್ರಯೋಗಿಸಿರುವ ಸಮುದಾಯ ಕನ್ನಡರಂಗಭೂಮಿಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ.

ನಿರಂತರವಾದ ಜನಸಂಸ್ಕೃತಿ ಜಾಥಾಗಳು, ವಿಚಾರ ಸಂಕಿರಣಗಳು, ಬೀದಿನಾಟಕಗಳು, ರಂಗತರಬೇತಿ ಕಾರ್ಯಾಗಾರಗಳು ಹಾಗೂ ಇತರೆ ಸಾಮಾಜಿಕ ಚಿಂತನೆಗಳುಳ್ಳ ಚಟುವಟಿಕೆಗಳು ಮುಖ್ಯ ಹೋರಾಟವನ್ನು ಶಕ್ತಗೊಳಿಸಿವೆ.

* 11 ಡಿಸೆಂಬರ್ 2014 : ಗುರುವಾರ, ಕತ್ತಲೆ ದಾರಿ ದೂರ ಸಂಜೆ 7:30 ಕ್ಕೆ
*12 ಡಿಸೆಂಬರ್ 2014 : ಶುಕ್ರವಾರ, ದೇವರ ಹೆಣ (ಪ್ರಸ್ತುತಿ : ಸಮುದಾಯ , ಧಾರವಾಡ ) ಸಂಜೆ 7:30 ಕ್ಕೆ

* 13 ಡಿಸೆಂಬರ್ 2014 : ಶನಿವಾರ, ತುಘಲಕ್ ಮಧ್ಯಾಹ್ನ 3:30 ಕ್ಕೆ ಮತ್ತು ಸಂಜೆ 7:30 ಕ್ಕೆ
* 14 ಡಿಸೆಂಬರ್ 2014 : ಭಾನುವಾರ, ಪಂಪ ಭಾರತ ಮಧ್ಯಾಹ್ನ 3:30 ಕ್ಕೆ ಮತ್ತು ಸಂಜೆ 7:30 ಕ್ಕೆ
ಟಿಕೆಟ್ ಗಾಗಿ ಸಂಪರ್ಕಿಸಿ ಸಂಖ್ಯೆ: 99001 82400. ವೆಬ್ ಸೈಟ್ ನಲ್ಲಿ ಬುಕ್ ಮಾಡಲು ಬುಕ್ ಮೈಶೋ ಕ್ಲಿಕ್ ಮಾಡಿ ಅಥವಾ ರಂಗಶಂಕರ.ಆರ್ಗ್ ನಿಂದ ಪಡೆಯಬಹುದು.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications