777 ಕುಟುಂಬಗಳಿಗೆ ಮಂಜೂರಾತಿ ಪತ್ರ & ಹಕ್ಕುಪತ್ರ ಬಂಪರ್!
ಹತ್ತಾರು ವರ್ಷಗಳಿಂದ ಯಾವುದೇ ದಾಖಲೆ ಇಲ್ಲದೆ ವಾಸಿಸುತ್ತಿದ್ದ ಮೂರು ವಿಧಾನಸಭೆ ಕ್ಷೇತ್ರಗಳ 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಮಂಜೂರಾತಿ ಪತ್ರ ಹಾಗೂ ಹಕ್ಕುಪತ್ರ ವಿತರಿಸಿದ್ದಾರೆ. ಇದೇ ಮೊದಲ ಬಾರಿಗೆ ಹಕ್ಕಿಪಿಕ್ಕಿ ಹಾಗೂ ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರು ಹಾಗೂ ಕುಷ್ಟ ರೋಗದಿಂದ ಗುಣಮುಖರದ ಕುಟುಂಬಗಳಿಗೆ ಮಂಜೂರಾತಿ ಪತ್ರ ಹಾಗೂ ಹಕ್ಕುಪತ್ರ ನೀಡಿದ್ದಾರೆ.
ಯಶವಂತಪುರ ಕ್ಷೇತ್ರದ ಯಲಚಗುಪ್ಪೆಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ 228 ಕುಟುಂಬಗಳಿಗೆ ಹಾಗೂ ಮಾದಿಗರ ಚನ್ನಯ್ಯ ಸ್ಲಂನಲ್ಲಿ 259 ಹಕ್ಕುಪತ್ರ, ಇದೇ ಗ್ರಾಮದಲ್ಲಿ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಲೆಮಾರಿ ಸಮುದಾಯದ 200 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರ ನೀಡಲಾಯಿತು. ಯಲಹಂಕ ಕ್ಷೇತ್ರದ ಗಿಡ್ಡೇನಹಳ್ಳಿ ಗ್ರಾಮದ ಬಿಕೆ ಸ್ಲಂನಲ್ಲಿ 40 ಕುಟುಂಬಗಳಿಗೆ ಮಂಜೂರಾತಿ ಪತ್ರ ನೀಡಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಮಾತಾಪುರ ದಲಿತ ಕಾಲೋನಿಯಲ್ಲಿ ಕುಷ್ಟರೊಗದಿಂದ ಗುಣಮುಖರಾದ ಕುಟುಂಬಗಳಿಗೆ 50 ಮನೆ ಮಂಜೂರಾತಿ ಪತ್ರ ವಿತರಿಸಲಾಯಿತು.
* ಯಶವಂತಪುರ ಕ್ಷೇತ್ರದ ಯಲಚಗುಪ್ಪೆ ಗ್ರಾಮದ ಮಾದಾರ ಚನ್ನಯ್ಯ ಸ್ಲಂನಲ್ಲಿ ಮನೆ ಮಂಜೂರಾತಿ ಪತ್ರ ವಿತರಿಸಿದ ಜಮೀರ್ ಅಹಮದ್ ಖಾನ್ ಅವರು ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಅವರೊಂದಿಗೆ ಅಲ್ಲೇ ವಾಸಿಸುತ್ತಿದ್ದ ಅಲೆಮಾರಿ ಸಮುದಾಯದ ಶರಣಯ್ಯ ಎಂಬುವರ ಶೆಡ್ ನಲ್ಲಿ ಅವರ ಕುಟುಂಬ ಸದಸ್ಯರ ಜತೆ ಊಟ ಮಾಡಿದರು.
* ಶೆಡ್ನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆದಷ್ಟು ಶೀಘ್ರ ಶಾಶ್ವತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಮ್ಮ ಶೆಡ್ನಲ್ಲಿ ಸಚಿವರು ಬಂದು ಊಟ ಮಾಡಿದ್ದು ನಮ್ಮ ಭಾಗ್ಯ. ನಾವು ಪ್ರೀತಿಯಿಂದ ಮಾಡಿದ್ದ ಅಡುಗೆ ಬಡಿಸುವಂತೆ ಕೇಳಿ ಊಟ ಮಾಡಿದರು. ಅವರ ಸರಳತೆಗೆ ಇದು ಸಾಕ್ಷಿ ಎಂದು ಶರಣಯ್ಯ ಹೇಳಿದ್ದಾರೆ.
ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಶಾಸಕ ಎಸ್. ಟಿ ಸೋಮಶೇಖರ್, ಕುಸುಮ ಹನುಮಂತರಾಯಪ್ಪ, ಸ್ಲಂ ಬೋರ್ಡ್ ಆಯುಕ್ತ ಅಶೋಕ್, ಚೀಫ್ ಎಂಜಿನಿಯರ್ ಸುಧೀರ್, ತಾಂತ್ರಿಕ ಸಲಹೆಗಾರ ಬಾಲರಾಜ್, ಸ್ಥಳೀಯ ಮುಖಂಡ ಗಣೇಶ್ ಸೇರಿದಂತೆ ಹಲವರು ಇದ್ದರು.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications