ಸುಲಿಗೆಕೋರರನ್ನು ಬೆನ್ನುಹತ್ತಿ ಸಿನಿಮೀಯ ಶೈಲಿಯಲ್ಲಿ ಹಿಡಿದ ನಟ
ಬೆಂಗಳೂರು, ಡಿಸೆಂಬರ್ 28: ಕ್ಯಾಬ್ ಚಾಲಕನನ್ನು ಬೆದರಿಸಿ ದರೋಡೆ ಮಾಡಿಕೊಂಡು ಓಡುತ್ತಿದ್ದ ಸುಲಿಗೆಕೋರರನ್ನು ನಟರೊಬ್ಬರು 2 ಕಿ.ಮೀ ಚೇಸ್ ಮಾಡಿ ಕೊನೆಗೂ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಟ ರಘುಭಟ್ ಎಂಬುವರೇ ಸಾಹಸ ಮೆರೆದಿದ್ದು, ಹಲಸೂರು ಸಮೀಪ ರಾತ್ರಿ 2 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಡಿವೈಡರ್ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಆರೋಪಿ ಮೊಹಿನ್ ಕಾಲಿಗೆ ಏಟಾಗಿದ್ದು ಸುಲಿಗೆಕೋರ ಮೋಹಿನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸಹಚರ ಲಿಂಗರಾಜಪುರದ ಅಬ್ದುಲ್ ಫಾಹಿಮ್ನನ್ನು ಬಂಧಿಸಲಾಗಿದೆ.
ರಾತ್ರಿ ವೇಳೆ ತನ್ನ ಸಹಚರ ಅಬ್ದುಲ್ ಜೊತೆ ಬೈಕಿನಲ್ಲಿ ಸಂಚಾರ ನಡೆಸಿ, ಸಾರ್ವಜನಿಕರನ್ನು ಅಡ್ಡಗಟ್ಟಿ ಬೆದರಿಸಿ ಸಿಕ್ಕಿದ್ದನ್ನು ದೋಚುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನನ್ನು ಬೆದರಿಸಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಕಿಡಿಗೇಡಿಗಳನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಚಲನಚಿತ್ರ ನಾಯಕ ನಟರೊಬ್ಬರು ಸೆರೆಹಿಡಿದಿದ್ದಾರೆ.

ಭಾರತಿನಗರದ ಮೋಹಿನ್ ಕುಖ್ಯಾತ ಸುಲಿಗೆಕೋರಾಗಿದ್ದು, ಆತನ ಮೇಲೆ ಹಲಸೂರು, ಅಶೋಕನಗರ, ಭಾರತಿನಗರ ಹಾಗೂ ಪುಲಕೇಶಿನಗರ ಸೇರಿದಂತೆ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಅಂತೆಯೇ ಹಲಸೂರು ಕೆರೆ ಬಳಿ ಕ್ಯಾಬ್ ಚಾಲಕ ರಘುನಾಥ್ನನ್ನು ಅಡ್ಡಗಟ್ಟಿದ ಆರೋಪಿಗಳು, ಬೆದರಿಸಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದರು. ಅದೇ ಸಮಯಕ್ಕೆ ಅದೇ ಮಾರ್ಗದಲ್ಲಿ ಬಂದ ರಘು ಭಟ್ , ಚಾಲಕನ ರಕ್ಷಣೆಗೆ ಧಾವಿಸಿದ್ದಾರೆ. ತಕ್ಷಣವೇ ತಮ್ಮ ಕಾರಿನಲ್ಲಿ ಆರೋಪಿಗಳನ್ನು ಬೆನ್ನುಹತ್ತಿದ್ದಾರೆ.
ಇದರಿಂದ ಆತಂಕಗೊಂಡ ಮೋಹಿನ್ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿಸುಮಾರು ಎರಡು ಕಿ.ಮೀ ವರೆಗೆ ಚೇಸಿಂಗ್ ನಡೆದಿದೆ. ಕೊನೆಗೆ ಭಾರತಿನಗರದ ಸಮೀಪ ರಸ್ತೆ ವಿಭಜಕಕ್ಕೆ ಬೈಕ್ ಗುದ್ದಿಸಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಪೊಲೀಸ್ ನಿಯಂತ್ರಣ ಕೊಠಡಿಗೆ ರಘುಭಟ್ ಕರೆ ಮಾಡಿ , ವಿಷಯ ತಿಳಿದು ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಆರೋಪಿಗಳನ್ನು ಒಪ್ಪಿಸಿದ್ದಾರೆ.
ಆರೋಪಿಗಳಿಂದ ಹಲವು ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ. ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅಭೀನಂದಿಸಿದ್ದಾರೆ. ರಘುಭಟ್ ಅನ್ವೇಷಿ, ಎಂಎಂಸಿಎಚ್ ಹಾಗೂ ಲವ್ ಯೂ ಟೂ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications