Vinod Raj: ನಟ ವಿನೋದ್ ರಾಜ್ ದಿಢೀರ್ ಆಸ್ಪತ್ರೆಗೆ ದಾಖಲು
ಬೆಂಗಳೂರು, ಜೂನ್ 12: ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯ ನಟಿ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ತಾಯಿ ಅಗಲಿಕೆ ನಂತರ ಏಕಾಂಗಿಯಾಗಿ ವಾಸವಿದ್ದರು. ಇದೀಗ ವಿನೋದ್ ರಾಜ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದೆ.
ನಟ ವಿನೋದ್ ರಾಜ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ನೆಲಮಂಗಲದಲ್ಲಿರುವ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ವಿನೋದ್ ರಾಜ್ ಅವರಿಗೆ ಸದ್ಯ ಆಪರೇಷನ್ ಮಾಡಲಾಗಿದೆ ಎಂದು ಮೂಲಗಳ ಮಾಹಿತಿ ಪ್ರಕಾರ ತಿಳಿದುಬಂದಿದೆ. ವಿನೋದ್ ರಾಜ್ ಅವರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ನಟನ ಆರೋಗ್ಯದ ಬಗ್ಗೆ ಇನ್ನುಷ್ಟು ಮಾಹಿತಿ ವೈದ್ಯರಿಂದ ತಿಳಿದು ಬರಬೇಕಿದೆ.

ಸುಡು ಬಿಸಿಲಿನಲ್ಲೇ ನಿಂತು ರಸ್ತೆ ಸರಿಪಡಿಸಿದ್ದ ವಿನೋದ್ ರಾಜ್
ಸಮಾಜಮುಖಿ ಕಾರ್ಯ ಹಾಗೂ ದಾನ- ಧರ್ಮಗಳಲ್ಲಿ ಸದಾ ಮುಂದಿರುವ ವಿನೋದ್ ರಾಜ್ ಅವರು ಇತ್ತೀಚಿಗೆ ಸುಡು ಬಿಸಿಲಿನಲ್ಲೇ ನಿಂತು ರಸ್ತೆ ರಿಪೇರಿ ಕೆಲಸ ಮಾಡಿಸಿದ್ದರು. ವಿನೋದ್ ರಾಜ್ ಅವರು ಬೆಂಗಳೂರು ನಗರದ ನೆಲಮಂಗಲದ ಕರೆಕಲ್ ಕ್ರಾಸ್ನಿಂದ ಸೋಲದೇವನಹಳ್ಳಿವರೆಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿಸಿದ್ದರು. ಸರ್ಕಾರದ ಯಾವುದೇ ಅನುದಾನಕ್ಕೆ ಕಾಯದೇ ವಿನೋದ್ ರಾಜ್ ತಾವೇ ಸ್ವತಃ ನಿಂತು ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ರಿಪೇರಿ ಕೆಲಸ ಮಾಡಿಸಿದ್ದರು.
ನೆಲಮಂಗಲದ ಕರೆಕಲ್ ಕ್ರಾಸ್ನಿಂದ ಸೋಲದೇವನಹಳ್ಳಿವರೆಗೂ ಗುಂಡಿ ಬಿದ್ದ ರಸ್ತೆ ಹಾಗೂ ಕೆಟ್ಟು ಹೋದ ರಸ್ತೆಗಳನ್ನು ಸರಿ ಪಡಿಸಿದ್ದರು. ಈ ಮೂಲಕ ಮಳೆಗಾಲ ಆರಂಭವಾಗುವ ಮೊದಲೇ ವಿನೋದ್ ರಾಜ್ ರಸ್ತೆಯನ್ನು ರಿಪೇರಿ ಮಾಡಿಸಿದ್ದರು. ಒಮ್ಮೆ ಮಳೆಗಾಲ ಆರಂಭವಾಗಿ ಜೋರಾಗಿ ಮಳೆ ಶುರುವಾದರೆ, ರಸ್ತೆಗಳು ಮತ್ತಷ್ಟು ಕೆಟ್ಟು ಹೋಗಲಿದ್ದು, ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತದೆ.
ಅಲ್ಲದೇ ರಸ್ತೆಗಳು ಕೆಸರು ಮಯವಾಗುತ್ತದೆ. ಇದರಿಂದ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿನೋದ್ ರಾಜ್ ಈ ಸುಡು ಬಿಸಿಲಿನ ಮಧ್ಯೆಯೂ ರಸ್ತೆಯಲ್ಲಿ ನಿಂತು ತಾವೇ ಸ್ವತಃ ರಸ್ತೆಗುಂಡಿಗಳನ್ನು ಮುಚ್ಚಿಸುವ ಕೆಲಸವನ್ನು ಮಾಡಿಸಿದ್ದರು. ಲೀಲಮ್ಮನ ಪುತ್ರನ ಸಮಾಜಮುಖಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications