ದರ್ಶನ್ ಜೈಲಿಗೆ ಹೋಗಿರುವ ವಿಚಾರ ನನಗೆ ಗೊತ್ತೇ ಇರಲಿಲ್ಲ: ನಟಿ ಶರ್ಮಿಳಾ ಮಾಂಡ್ರೆ
ಬೆಂಗಳೂರು, ಆಗಸ್ಟ್ 08: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡು ತಿಂಗಳು ಕಳೆಯುತ್ತಿದೆ. ದರ್ಶನ್ ಬಂಧನವಾದ ದಿನದಿಂದ ಈವರೆಗೂ ನಟನ ಬಿಡುಗಡೆಗಾಗಿ ಕುಟುಂಬಸ್ಥರು ಹರಸಾಹಸ ಪಡುತ್ತಿದ್ದಾರೆ. ಆದರೆ ದರ್ಶನ್ ಪಾಲಿಗೆ ಬಿಡುಗಡೆ ಭಾಗ್ಯ ಇಲ್ಲದಂತಾಗಿದ್ದು, ಜೈಲೇ ಗತಿಯಾಗಿದೆ. ಇಷ್ಟೆಲ್ಲಾ ಬೆಳೆವಣಿಗೆಗಳ ನಡುವೆ ನಟ ದರ್ಶನ್ ಬಗ್ಗೆ ಆಗಾಗ ಕನ್ನಡ ಚಿತ್ರರಂಗದ ನಟ-ನಟಿಯರು ಪ್ರತಿಕ್ರಿಯಿಸುತ್ತಿದ್ದು, ಇದೀಗ ದರ್ಶನ್ ಜೊತೆ ನಟಿಸಿರುವ ನಟಿ ಶಿರ್ಮಿಳಾ ಮಾಂಡ್ರೆ ಮಾತನಾಡಿದ್ದಾರೆ.
ತಮ್ಮ ಸಿನಿಮಾದ ಪ್ರಮೋಷನ್ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ಶಿರ್ಮಿಳಾ ಮಾಂಡ್ರೆ, 'ದರ್ಶನ್ ಅವರ ಜೊತೆ ಕೆಲಸ ಮಾಡಿದ ಅನುಭವ ತುಂಬಾ ಚೆನ್ನಾಗಿ ಇತ್ತು. ಅದರಲ್ಲೂ ನವಗ್ರಹ ಸಮಯದಲ್ಲಿ. ದರ್ಶನ್ ಅವರ ಪೂರ್ತಿ ಕುಟುಂಬ ನನಗೆ ಪರಿಚಯ. ಆ ಸಮಯದಲ್ಲಿ ಅವರ ಜೊತೆ ಶೂಟಿಂಗ್ ಮಾಡಿದ್ದು, ಜೀವನದಲ್ಲಿ ಒಳ್ಳೆಯ ಅನುಭವ ಎಂದರು.

ದರ್ಶನ್ ಅವರು ಸೆಟ್ನಲ್ಲಿ ತುಂಬಾ ಚೆನ್ನಾಗಿ ಇರುತ್ತಿದ್ದರು. ಅವರ ತಮ್ಮ ದಿನಕರ್ ತೂಗುದೀಪ್ ಅವರು ನಾವು ಒಟ್ಟಾಗಿ ನಟಿಸಿದ ಸಿನಿಮಾವನ್ನು ನಿರ್ದೇಶಕರಾಗಿದ್ದರು. ಅವರದೇ ಹೋಮ್ ಬ್ಯಾನರ್ ಆಗಿತ್ತು. ಆ ಸಿನಿಮಾ ಶೂಟಿಂಗ್ ಅನುಭವ ತುಂಬಾ ಚೆನ್ನಾಗಿ ಇತ್ತು. ಇದು 2007ರಲ್ಲಿ ಶೂಟಿಂಗ್ ಮಾಡಿರುವ ಸಿನಿಮಾ. ಆ ಸಮಯದಲ್ಲಿ ನಟ ದರ್ಶನ್ ಜೊತೆ ಶೂಟಿಂಗ್ ಮಾಡಿದ್ದು, ಜೀವನದಲ್ಲಿ ಒಳ್ಳೆಯ ಅನುಭವ ಎಂದು ನಟಿ ಶಿರ್ಮಿಳಾ ಮಾಂಡ್ರೆ ಹೇಳಿದ್ದಾರೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿರುವ ಬಗ್ಗೆ ಮಾತನಾಡಿದ ಅವರು, ಇತ್ತೀಚಿಗೆ ನಾನು ತುಂಬಾ ಟ್ರಾವೆಲ್ ಮಾಡುತ್ತಿದ್ದೆ. ದರ್ಶನ್ ಅರೆಸ್ಟ್ ಆಗಿರುವ ವಿಚಾರ ನನಗೆ ಗೊತ್ತೇ ಇರಲಿಲ್ಲ. ಈಗ ನನಗೆ ಗೊತ್ತಾಗಿದೆ. ನನ್ನ ಪ್ರಕಾರ ಎಲ್ಲವನ್ನೂ ಕಾನೂನು ನಿರ್ಧರಿಸುತ್ತದೆ ಎಂದು ಹೇಳಿದರು.

ದರ್ಶನ್ ಪ್ರಕರಣ ತೀವ್ರ ಗತಿಯಲ್ಲಿ ಮುಗಿಸಲು ಪೊಲೀಸರ ಸಜ್ಜು
ಇತ್ತ ಪೊಲೀಸರು ಕೂಡ ತನಿಖೆಯನ್ನು ತೀವ್ರ ಗತಿಯಲ್ಲಿ ಮುಗಿಸಲು ಸಜ್ಜಾಗುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಬಂಧಿತರಾದ 17 ಮಂದಿ ಆರೋಪಿಗಳಿಗೆ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಪ್ರಕರಣವನ್ನು ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮುಂದಾಗಿದ್ದಾರೆ.
ದರ್ಶನ್ ಹಾಗೂ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಅಥವಾ ತ್ವರಿತಗತಿ ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಹತ್ಯೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿಂದ ತನಿಖೆ ನಡೆಸುತ್ತಿರುವ ಪೊಲೀಸರು ಎಲ್ಲಾ ರೀತಿಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಎಫ್ಎಎಸ್ಎಲ್ ವರದಿ ಸೇರಿದಂತೆ ಕೆಲ ಪರೀಕ್ಷೆಗಳ ವೈಜ್ಞಾನಿಕ ವರದಿಗಳ ಬರಬೇಕಿದೆ. ಈ ತಿಂಗಳ್ಯಾಂತಕ್ಕೆ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications