ಡ್ರಗ್ ಡೀಲ್ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ತೆಲಗು ನಟ ತನೀಶ್ ಅಲ್ಲಾಡಿ!
ಬೆಂಗಳೂರು, ಮಾರ್ಚ್ 24 : ಮಾದಕ ಲೋಕಕ್ಕೂ ಹಾಗೂ ಸಿನಿಮಾ ರಂಗಕ್ಕೂ ಇರುವ ನಂಟು ಸದ್ಯಕ್ಕೆ ಬಿಡುವಂತೆ ಕಾಣುತ್ತಿಲ್ಲ. ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಚಂದ್ರ ಮನೆ ಮೇಲೆ ದಾಳಿ ಮಾಡಿದ ಪ್ರಕರಣ ಇದೀಗ ಟಾಲಿವುಡ್ ಮೆಟ್ಟಿಲೇರಿದೆ. ಡ್ರಗ್ ಡೀಲ್ ಸಂಬಂಧ ತೆಲಗು ನಟ ತನೀಶ್ ಅಲ್ಲಾಡಿ ಬೆಂಗಳೂರು ಪೊಲೀಸರ ವಿಚಾರಣೆ ಎದುರಿಸಿದ್ದಾರೆ.
Recommended Video
ಮಸ್ತಾನ್ ಚಂದ್ರ ಬಂಧನಕ್ಕೆ ಒಳಗಾದ ಬಳಿಕ ನಿರ್ಮಾಪಕ ಶಂಕರೇಗೌಡ ಮನೆ ಮೇಲೆ ದಾಳಿ ನಡೆದಿತ್ತು. ಮಸ್ತಾನ್ ಚಂದ್ರ ವಿಚಾರಣೆ ವೇಳೆ ಟಾಲಿವುಡ್ ನಟ, ಬಿಗ್ ಬಾಸ್ ಸ್ಪರ್ಧಿ ತನೀಶ್ ಅಲ್ಲಾಡಿ ಹೆಸರು ಹೇಳಿದ್ದ. ಡ್ರಗ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಹಾಗೂ ಡ್ರಗ್ ಪೂರೈಕೆ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದ ಚಿತ್ರ ನಿರ್ಮಾಪಕ ಶಂಕರೇಗೌಡ ಅವರ ಜತೆ ತನೀಶ್ ನಿಕಟ ಸಂಪರ್ಕ ಹೊಂದದ್ದ ಎಂಬ ಸಂಗತಿಯನ್ನು ಬಾಯಿಬಿಟ್ಟಿದ್ದಾನೆ.
ಈ ಮಾಹಿತಿ ಆಧರಿಸಿ ವಿಚಾರಣೆಗೆ ಹಾಜರಾಗುವಂತೆ ಗೋವಿಂದಪುರ ಪೊಲೀಸರು ಮಾರ್ಚ್ 13 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸಿದ್ದಾನೆ. ಇದನ್ನು ಉಲ್ಲೇಖಿಸಿ ತನೀಶ್ ಅಲ್ಲಾಡಿ ಸಾಮಾಜಿಕ ಜಾಲ ತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಎರಡು ವರ್ಷದ ಹಿಂದೆ ನಾನು ನಿರ್ಮಾಪಕ ಶಂಕರೇಗೌಡ ಅವರನ್ನು ಸಿನಿಮಾ ವಿಚಾರವಾಗಿ ಸಂಪರ್ಕಿಸಿದ್ದು ನಿಜ. ಬಿಗ್ ಬಾಸ್ ಸ್ಪರ್ಧೆ ಬಳಿಕ ಅವರನ್ನು ಭೇಟಿ ಮಾಡಿದ್ದೆ. ಸಿನಿಮಾ ವಿಚಾರವಾಗಿ ಮಾತುಕತೆ ನಡೆದಿತ್ತು. ಆದರೆ, ನಂತರ ಆ ಯೋಜನೆ ಸಫಲವಾಗಲಿಲ್ಲ. ಶಂಕರೇಗೌಡ ಹಾಗೂ ನಾನು ಸಿನಿಮಾ ವಿಚಾರವಾಗಿ ಸಂಪರ್ಕಿಸಿದ್ದೇನೆ ಹೊರತು ಡ್ರಗ್ ವಿಚಾರವಾಗಿ ಅಲ್ಲ. ಆದರೆ ಮಾಧ್ಯಮಗಳಲ್ಲಿ ನಾನೇ ದೊಡ್ಡ ಅಪರಾಧಿ ಎಂದು ಬಿಂಬಿಸುತ್ತಿದ್ದಾರೆ. ಅಗತ್ಯ ಬಿದ್ದರೆ ಮುಂದೆ ವಿಚಾರಣೆಗೆ ಕರೆಯುವುದಾಗಿ ಬೆಂಗಳೂರು ಪೊಲೀಸರು ಹೇಳಿದ್ದಾರೆ.
ಆದರೆ, ಪುನಃ ನನ್ನನ್ನು ಕರೆದಿಲ್ಲ. ಆದರೆ ಉದ್ದೇಶ ಪೂರ್ವಕವಾಗಿ ನನ್ನ ಹೆಸರನ್ನು ಮಾದಕ ವಸ್ತು ಪ್ರಕರಣದಲ್ಲಿತರಲಾಗುತ್ತಿದೆ ಎಂದು ತನೀಶ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ತನೀಶ್ ಅಲ್ಲಾಡಿ ಸಂಪರ್ಕಿಸಿದ್ದ ಚಿತ್ರ ನಿರ್ಮಾಪಕ ಶಂಕರೇಗೌಡ ಬಂಧನಕ್ಕೆ ಒಳಗಾಗಿದ್ದಾರೆ. ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆ ವೇಳೆ ತನೀಶ್ ಹೆಸರು ಮಾತ್ರವಲ್ಲದೇ, ಬೇರೆ ಚಿತ್ರ ನಟ - ನಟಿಯರ ಹೆಸರು ತಳಕು ಹಾಕಿಕೊಂಡಿದೆ.
ಬೆಂಗಳೂರಿನಲ್ಲಿ ಹೈಫೈ ಪಾರ್ಟಿ ಆಯೋಜಿಸುತ್ತಿದ್ದ ಶಂಕರೇಗೌಡ, ಒನ್ ಲವ್ ಕೋಡ್ ವರ್ಡ್ ಬಳಸಿ ಡ್ರಗ್ ಪೂರೈಕೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಶಂಕರೇಗೌಡ ಬಂಧನಕ್ಕೆ ಒಳಗಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ಇದೀಗ ತನೀಶ್ ಹೆಸರು ಕೂಡ ಕೇಳಿ ಬಂದಿದ್ದು, ಈ ಜಾಲದಲ್ಲಿ ಸಿಲಿಕಿದ್ದಾರೆ ಎನ್ನಲಾದ ಇತರರಿಗೂ ಇದೀಗ ಡ್ರಗ್ ಕಂಟಕ ಎದುರಾಗುವ ಲಕ್ಷಣ ಗೋಚರಿಸುತ್ತಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications