ಬೆಂಗಳೂರಿನಲ್ಲಿ ಸ್ವಚ್ಛತಾ ಕಾರ್ಮಿಕರ ಮುಷ್ಕರ, ಕಾರಣವೇನು ಇಲ್ಲಿದೆ ಮಾಹಿತಿ
ಗುತ್ತಿಗೆ ಪದ್ಧತಿಯನ್ನು ಕೊನೆಗಾಣಿಸಲು ಸುಮಾರು 17,000 ಕಸ ಸಂಗ್ರಹಕಗಾರರು ಮತ್ತು ಚಾಲಕರ ಉದ್ಯೋಗಗಳನ್ನು ಕಾಯಂಗೊಳಿಸಬೇಕೆಂದು ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ.
ಬೆಂಗಳೂರು, ಮಾರ್ಚ್ 21: ಸಹಾಯಕರು, ಲೋಡರ್ ಗಳು, ಕ್ಲೀನರ್ಗಳು, ಆಟೊ ಟಿಪ್ಪರ್ ಚಾಲಕರು ಸೇರಿದಂತೆ ತ್ಯಾಜ್ಯ ಸಂಗ್ರಹಕಾರರು ಸೋಮವಾರ ಪ್ರತಿಭಟನೆ ನಡೆಸಿದ್ದರಿಂದ ಬೆಂಗಳೂರು ನಗರದಲ್ಲಿ ಕಸದ ತೆರವು ಮಾಡದೆ ರಾಶಿ ಬಿದ್ದಿದೆ.
ರಾಜ್ಯಾದ್ಯಂತ ನೂರಾರು ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಜಮಾಯಿಸಿ ಫ್ರೀಡಂ ಪಾರ್ಕ್ ಕಡೆಗೆ ಮೆರವಣಿಗೆ ನಡೆಸಿದರು. ಶೋಷಕ ಗುತ್ತಿಗೆ ಪದ್ಧತಿಯನ್ನು ಕೊನೆಗಾಣಿಸಲು ಸುಮಾರು 17,000 ಕಸ ಸಂಗ್ರಹಕಗಾರರು ಮತ್ತು ಚಾಲಕರ ಉದ್ಯೋಗಗಳನ್ನು ಕಾಯಂಗೊಳಿಸಬೇಕೆಂದು ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ.

ಕಳೆದ ವರ್ಷ ಜುಲೈನಲ್ಲೂ ನಾವು ಪ್ರತಿಭಟನೆ ನಡೆಸಿದ್ದೇವೆ. ನಮಗೆ ವೇತನ ನೇರ ಪಾವತಿ ಮಾಡಬೇಕೆಂದು ಮನವಿ ನೀಡಿದ್ದೇವೆ. ಆದರೆ ನಮ್ಮ ಮನವಿ ಸಂಬಂಧ ಏನೂ ಬೆಳವಣಿಗೆ ಆಗಲಿಲ್ಲ. ಸರ್ಕಾರ ತನ್ನ ಮಾತಿಗೆ ಬದ್ಧವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಸರ್ಕಾರಿ ಅಧಿಕಾರಿಗಳು ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಿಲ್ಲ, ಮಂಗಳವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ.
ಸ್ವಚ್ಛತಾ ಕಾರ್ಮಿಕರು ಬೆಂಗಳೂರು, ಕಲಬುರಗಿ, ವಿಜಯಪುರ, ವಿಜಯನಗರ, ಮತ್ತು ಕೊಪ್ಪಳ ಸೇರಿದಂತೆ ಕರ್ನಾಟಕದ ವಿವಿಧ ನಗರಗಳಲ್ಲಿ ಸೋಮವಾರ, ಮಾರ್ಚ್ 20 ರಂದು ಗುತ್ತಿಗೆ ಪದ್ಧತಿಯನ್ನು ವಿರೋಧಿಸಿ ಮುಷ್ಕರ ಹಮ್ಮಿಕೊಂಡಿದ್ದಾರೆ. ತಮ್ಮ ಆದಾಯ ಮತ್ತು ಉದ್ಯೋಗ ಭದ್ರತೆಯ ಮೇಲೆ ಪರಿಣಾಮ ಬೀರುವ ವ್ಯವಸ್ಥೆಯನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಆಟೋ ಚಾಲಕರು, ಲೋಡರ್ಗಳು, ಕ್ಲೀನರ್ಗಳು, ಡೇಟಾ ಎಂಟ್ರಿ ಆಪರೇಟರ್ಗಳು ಮತ್ತು ಭೂಗತ ಒಳಚರಂಡಿ ಪೈಪ್ಲೈನ್ ಕಾರ್ಮಿಕರು ಸೇರಿದಂತೆ ಕಾರ್ಮಿಕರು ಈ ಹಿಂದೆ ಫೆಬ್ರವರಿಯಲ್ಲಿ ಎರಡು ದಿನಗಳ ಮುಷ್ಕರವನ್ನು ನಡೆಸಿದ್ದರು, ಆದರೆ ಅವರ ಬೇಡಿಕೆಗಳನ್ನು ಈಡೇರಿಸದ ಕಾರಣ ಹೊಸ ಪ್ರತಿಭಟನೆಗೆ ಕಾರಣವಾಯಿತು.

ದಲಿತ ಸಮುದಾಯದವರಾದ ನೈರ್ಮಲ್ಯ ಕಾರ್ಮಿಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿ ತಮ್ಮ ಆದಾಯದ ಮೇಲೆ ಪರಿಣಾಮ ಬೀರುವ ಗುತ್ತಿಗೆ ಪದ್ಧತಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿರುವ ಬಿಬಿಎಂಪಿ ಪೌರಕಾರ್ಮಿಕ ಸಂಘವು ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಎಲ್ಲಾ ಕಾರ್ಮಿಕರನ್ನು ನೇರ ವೇತನಕ್ಕೆ ಒಳಪಡಿಸಬೇಕೆಂದು ಕಳೆದ ಕೆಲವು ತಿಂಗಳುಗಳಿಂದ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಜುಲೈ 2022 ರಲ್ಲಿ ಮುಷ್ಕರದ ನಂತರ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಖಿತ ಭರವಸೆ ನೀಡಿದಂತೆ ಕಸ ಸಂಗ್ರಹಿಸುವ ವಾಹನಗಳ ಚಾಲಕರು, ಲೋಡರ್ಗಳು ಮತ್ತು ಕ್ಲೀನರ್ಗಳನ್ನು ಖಾಯಂಗೊಳಿಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ಗುಡಿಸುವ ಪೌರಕಾರ್ಮಿಕರನ್ನು ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಿದರೆ, ಕಸ ಸಂಗ್ರಹಿಸುವ, ಸಾಗಿಸುವ ಮತ್ತು ವಿಲೇವಾರಿ ಮಾಡುವ ಚಾಲಕರು, ಸಹಾಯಕರು, ಲೋಡರ್ಗಳು ಮತ್ತು ಕ್ಲೀನರ್ಗಳು ನೆಪಮಾತ್ರದ ಗುತ್ತಿಗೆ ಪದ್ಧತಿಯಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಮನಗರ ನಗರಸಭೆಯಲ್ಲಿ ಚಾಲಕರಾಗಿರುವ 48 ವರ್ಷದ ವೆಂಕಟ ರಮಣ, 25 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿದ್ದಾರೆ. ಸರ್ಕಾರವು ಪ್ರತಿ ಚಾಲಕನಿಗೆ ತಿಂಗಳಿಗೆ 21,000 ರೂ.ಗಳನ್ನು ಗುತ್ತಿಗೆದಾರರಿಗೆ ಪಾವತಿಸುತ್ತಿದೆ. ಆದರೆ, ಇದರಲ್ಲಿ ನಾವು ತಿಂಗಳಿಗೆ 13,000 ರೂಪಾಯಿಗಳನ್ನು ಮಾತ್ರ ಪಡೆಯುತ್ತೇವೆ. ಬಾಕಿ ಹಣವನ್ನು ಗುತ್ತಿಗೆದಾರರು ಜೇಬಿಗಿಳಿಸಿದ್ದಾರೆ. ನೇರ ಪಾವತಿಗಾಗಿ ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದೇವೆ; ನಾವು ಗುತ್ತಿಗೆ ವ್ಯವಸ್ಥೆಯನ್ನು ಕೊನೆಗೊಳಿಸಲು ಆಗ್ರಹಿಸಿದ್ದೇವೆ ಎಂದು ಹೇಳಿದ್ದಾರೆ.
ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಚಾಲಕರು, ಲೋಡರ್ಗಳು, ಕ್ಲೀನರ್ಗಳನ್ನು ನೇರ ಪಾವತಿ ವ್ಯವಸ್ಥೆಗೆ ತರುವ ಭರವಸೆಯನ್ನು ಸರ್ಕಾರ ಈಡೇರಿಸಬೇಕೆಂದು ಕಾರ್ಮಿಕರು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯ ಶಾಸಕರ ಹಾಗೂ ಸರ್ಕಾರದ ಸ್ಥಾನವಾದ ವಿಧಾನಸೌಧಕ್ಕೆ ಪಾದಯಾತ್ರೆ ನಡೆಸುವುದಾಗಿ ಕಾರ್ಮಿಕರು ಘೋಷಿಸಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications