ಆದಿವಾಸಿಗಳ ಕೊಂದು ಬೆಂಗಳೂರಲ್ಲಿ ಅಡಗಿದ್ದ ಉಗ್ರ
ಬೆಂಗಳೂರು, ಜ.27 : ಬೆಂಗಳೂರಿನಲ್ಲಿ ಅಡಗಿದ್ದ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ ಉಗ್ರನನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ಉಗ್ರ ಅಸ್ಸಾಂನಲ್ಲಿ ನಡೆದ ಆದಿವಾಸಿಗಳ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ.
ಬಂಧಿತ ಉಗ್ರನನ್ನು ಸಂಜು ಬೋಡೊಲೋಯಿ (29)ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಬೆಂಗಳೂರಿನ ಪೊಲೀಸರಿಗೆ ಉಗ್ರ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಡಗಿರುವ ಕುರಿತು ಮಾಹಿತಿ ಲಭ್ಯವಾಗಿತ್ತು.

ಸಂಜು ಡಿಸೆಂಬರ್ 23ರಂದು ಅಸ್ಸಾಂನಲ್ಲಿ ನಡೆದ ಆದಿವಾಸಿಗಳ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು ಗೌಹಾತಿಯ ಎನ್ಐಎ ತಂಡ ಸಂಜುಗಾಗಿ ಹುಡುಕಾಟ ನಡೆಸಿತ್ತು. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಎಂ.ಎನ್.ರೆಡ್ಡಿ ಅವರು, ಅವರು ಸಿಸಿಬಿ ಪೊಲೀಸರ ತಂಡವನ್ನು ಸಂಜುವನ್ನು ಬಂಧಿಸುವ ಕಾರ್ಯಾಚರಣೆಗಾಗಿ ರಚಿಸಿದ್ದರು.[ಅಸ್ಸಾಂ ದಾಳಿಯ ಪ್ರಮುಖ ಸೂತ್ರಧಾರ ಸಂಜು]
ಜನವರಿ 26ರ ಸೋಮವಾರ ಸಿಸಿಬಿ ಪೊಲೀಸರ ತಂಡ ಎಲೆಕ್ಟ್ರಾನಿಕ್ ಸಿಟಿ ಬಳಿಯ ನೀಲಾದ್ರಿ ನಗರದ 8ನೇ ಕ್ರಾಸ್ನ ಮನೆಯ ಮೇಲೆ ದಾಳಿ ನಡೆಸಿ ಸಂಜುವನ್ನು ಬಂಧಿಸಿದ್ದಾರೆ. ಪೊಲೀಸರು ದಾಳಿ ನಡೆಸುವಾಗ ಸಂಜು ಮನೆಯಲ್ಲಿ ಅಡಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಸಂಜುವನ್ನು ವಶಕ್ಕೆ ಪಡೆದ ಪೊಲೀಸರು ಆತನಿಂದ ಮೊಬೈಲ್ ಫೋನ್ಅನ್ನು ವಶಪಡಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿಯೇ ವೋಡಾಫೋನ್ ಸಿಮ್ ಅನ್ನು ಸಂಜು ಖರೀದಿ ಮಾಡಿದ್ದ, ಈತನ ಹೆಸರಿನಲ್ಲಿದ್ದ ಪಾನ್ ಕಾರ್ಡ್ಅನ್ನು ಎಂದು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಿಮ್ ಕಾರ್ಡ್ ಪಡೆಯಲು ಸಂಜು ನಕಲಿ ವಿಳಾಸ ನೀಡಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸಿಮ್ ಕಾರ್ಡ್ ನೀಡುವಾಗಲೂ ವಿಳಾಸದ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಸಂಗ್ರಹಿಸಿಲ್ಲ. ಆದ್ದರಿಂದ ನಕಲಿ ವಿಳಾಸ ಎಂಬುದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಆದ ಸಂಜು, ಬಾಂಗ್ಲಾದೇಶದಲ್ಲಿ ಎಕೆ-47 ಸೇರಿದಂತೆ ಮತ್ತಿತರ ಶಸ್ತ್ರಾಸ್ತ್ರಗಳ ಬಳಕೆ ಬಗ್ಗೆ ತರಬೇತಿ ಪಡೆದುಕೊಂಡಿದ್ದ. ಅಸ್ಸಾಂನಲ್ಲಿ ಮಾರಣಹೋಮ ನಡೆದ ಬಳಿಕ ಬಂಧನದ ಭೀತಿಯಿಂದ ಸಂಜು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ.
ಗೌಹಾತಿಯ ಎನ್ಐಎ ತಂಡ ಈತನಿಗಾಗಿ ಹುಡುಕಾಟ ನಡೆಸುತ್ತಿತ್ತು. ಅಸ್ಸಾಂನಲ್ಲಿ ಮಾರಣ ಹೋಮ ನಡೆಸಿದ ಬಳಿಕ ರೈಲಿನಲ್ಲಿ ಬೆಂಗಳೂರಿಗೆ ಆಗಮಿಸಿ ಈತ ಅಡಗಿ ಕುಳಿತಿದ್ದ. ಈತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಅಸ್ಸಾಂ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಸಂಜುವನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications